Namma Metro: ನಿಲ್ದಾಣಕ್ಕೆ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಭೇಟಿ ನೀಡಿದ್ದೇಕೆ?
ಬೆಂಗಳೂರು, ಜೂನ್ 11: ಬೆಂಗಳೂರಿನ ಲಕ್ಷಾಂತರ ನಿವಾಸಿಗಳಿಗೆ ಒಂದು ದಶಕಕ್ಕೂ ಹೆಚ್ಚು ಕಾಲ ಸೇವೆ ನೀಡುತ್ತಿರುವ ಬೆಂಗಳೂರು ನಮ್ಮ ಮೆಟ್ರೋ ಒಟ್ಟು 73 ಕಿಲೋ ಮೀಟರ್ ಜಾಲ ಹೊಂದಿವೆ. ಇದೀಗ ಈ ನಮ್ಮ ಮೆಟ್ರೋ ನಿಲ್ದಾಣಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ (KSCW) ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿದರು.
ಹೌದು, ಮಂಗಳವಾರ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ವಿಜಯನಗರ ಮೆಟ್ರೋ ನಿಲ್ದಾಣಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಹಿಳಾ ಉದ್ಯೋಗಿಗಳಿಗೆ ಬಿಎಂಆರ್ಸಿಎಲ್ ಒದಗಿಸಿರುವ ಸೌಲಭ್ಯ ಮತ್ತು ಕಲ್ಯಾಣ ಕ್ರಮಗಳ ಬಗ್ಗೆ ಪರಿಶೀಲಿಸಿದರು. ಈ ವೇಳೆ BMRCL ಅಧಿಕಾರಿಗಳು ಹಾಗೂ ಮಹಿಳಾ ಉದ್ಯೋಗಿಗ ಜೊತೆ ಚರ್ಚಿಸಿ ವಿವರ ಪಡೆದರು.

ಕೆ.ಆರ್ ಪುರಂ ವರೆಗೆ ಆಯೋಗದ ಅಧ್ಯಕ್ಷರ ಪ್ರಯಾಣ
ನಮ್ಮ ಮೆಟ್ರೋ ನಿಲ್ದಾಣದಲ್ಲಿ ಹಾಗೂ ರೈಲಿನೊಳಗಿದ್ದ ಮಹಿಳಾ ಪ್ರಯಾಣಿಕರೊಂದಿಗೆ ಸುರಕ್ಷತೆ ಮತ್ತು ಸೌಕರ್ಯಗಳ ಬಗ್ಗೆ ಸಂವಾದ ನಡೆಸಿ ಕೃಷ್ಣರಾಜಪುರ ಮೆಟ್ರೋ ನಿಲ್ದಾಣದವರೆಗೆ ಪ್ರಯಾಣಿಸಿದರು. ಈ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರು ಮೆಟ್ರೋ ಸೇವೆಗಳ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದರು.
ಸಾರ್ವಜನಿಕರೊಂದಿಗೆ ಸಂವಹನದ ನಡೆಸಿದ ನಂತರ, ಮೆಟ್ರೊದ ವಿಶ್ವಾಸಾರ್ಹತೆ, ಅನುಕೂಲತೆ ಮತ್ತು ಸಮಯಕ್ಕೆ ಸರಿಯಾಗಿ ಸೇವೆ ನೀಡುತ್ತಿರುವ ನಿಗಮದ ಬಗ್ಗೆ ಸಂತಸವನ್ನು ವ್ಯಕ್ತಪಡಿಸಿದ ಅಧ್ಯಕ್ಷರು, ರೈಲು ಆವರ್ತನವನ್ನು ಮತ್ತಷ್ಟು ಹೆಚ್ಚಿಸುವ ಮತ್ತು ಪೀಕ್ ಸಮಯದಲ್ಲಿ ಮಹಿಳೆಯರಿಗೆ ಹೆಚ್ಚುವರಿ ಬೋಗಿಗಳನ್ನು ಒದಗಿಸುವ ಸಾಧ್ಯತೆಯ ಬಗ್ಗೆ ಗಮನಹರಿಸುವಂತೆ ಸಲಹೆ ನೀಡಿದರು.

ಹೆಚ್ಚುವರಿ ರೈಲು ಸೇವೆ ನೀಡುವ ಭರವಸೆ
ಈಗಾಗಲೇ ಪೀಕ್ ಸಮಯದಲ್ಲಿ ಹೆಚ್ಚುವರಿಯಾಗಿ ಶಾರ್ಟ್ ಲೂಪ್ ಸೇವೆಯನ್ನು ನಿಗಮವು ಒದಗಿಸುತ್ತಿದ್ದು ಹೆಚ್ಚುವರಿ ರೈಲುಗಳನ್ನು ಪಡೆದನಂತರ ಇನ್ನು ಹೆಚ್ಚು ಆವರ್ತನದಲ್ಲಿ ಪ್ರಯಾಣಿಕರಿಗೆ ಸೇವೆ ಒದಗಿಸಲಾಗುವುದು. ಈ ಕುರಿತು BMRCL ನಿಗಮದ ಕಾರ್ಯನಿರ್ವಾಹಕ ನಿರ್ದೇಶಕ ಶ್ರೀ ಎ.ಎಸ್ ಶಂಕರ್ ತಿಳಿಸಿದರು.
ಮೆಟ್ರೋ ಪ್ರಯಾಣಿಕರು, ಅಧಿಕಾರಿಗಳ ಜತೆ ಸಂವಾದ
KSCW ಅಧ್ಯಕ್ಷೆ ನಾಡಾ. ನಾಗಲಕ್ಷ್ಮಿ ಚೌಧರಿ ಅವರು ವಿಜಯನಗರ ಮೆಟ್ರೋ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು. ನಂತರ ಮೆಟ್ರೋ ಕಾರ್ಯಾಚರಣೆ, ಸೇವೆ, ಯೋಜನೆಗಳ ಕುರಿತು ಮೆಟ್ರೋ ಅಧಿಕಾರಿಗಳೊಂದಿಗೆ ಡಾ. ನಾಗಲಕ್ಷ್ಮಿ ಚೌಧರಿ ಚರ್ಚಿಸಿದರು. ಇದೇ ವೇಳೆ ಅವರು ವಿಜಯನಗರದಿಂದ KR ಪುರ ವರೆಗೆ ಪ್ರಯಾಣಿಸಿದರು. ಈ ವೇಳೆ ಆಯೋಗದ ಸಿಬ್ಬಂದಿ, ಕೆಲವು ಅಧಿಕಾರಿಗಳು, ಮೆಟ್ರೋ ಅಧಿಕಾರಿಗಳು ಪಾಲ್ಗೊಂಡಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion












Click it and Unblock the Notifications