Namma Metro: ನಿಲ್ದಾಣಕ್ಕೆ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಭೇಟಿ ನೀಡಿದ್ದೇಕೆ?
ಬೆಂಗಳೂರು, ಜೂನ್ 11: ಬೆಂಗಳೂರಿನ ಲಕ್ಷಾಂತರ ನಿವಾಸಿಗಳಿಗೆ ಒಂದು ದಶಕಕ್ಕೂ ಹೆಚ್ಚು ಕಾಲ ಸೇವೆ ನೀಡುತ್ತಿರುವ ಬೆಂಗಳೂರು ನಮ್ಮ ಮೆಟ್ರೋ ಒಟ್ಟು 73 ಕಿಲೋ ಮೀಟರ್ ಜಾಲ ಹೊಂದಿವೆ. ಇದೀಗ ಈ ನಮ್ಮ ಮೆಟ್ರೋ ನಿಲ್ದಾಣಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ (KSCW) ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿದರು.
ಹೌದು, ಮಂಗಳವಾರ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ವಿಜಯನಗರ ಮೆಟ್ರೋ ನಿಲ್ದಾಣಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಹಿಳಾ ಉದ್ಯೋಗಿಗಳಿಗೆ ಬಿಎಂಆರ್ಸಿಎಲ್ ಒದಗಿಸಿರುವ ಸೌಲಭ್ಯ ಮತ್ತು ಕಲ್ಯಾಣ ಕ್ರಮಗಳ ಬಗ್ಗೆ ಪರಿಶೀಲಿಸಿದರು. ಈ ವೇಳೆ BMRCL ಅಧಿಕಾರಿಗಳು ಹಾಗೂ ಮಹಿಳಾ ಉದ್ಯೋಗಿಗ ಜೊತೆ ಚರ್ಚಿಸಿ ವಿವರ ಪಡೆದರು.

ಕೆ.ಆರ್ ಪುರಂ ವರೆಗೆ ಆಯೋಗದ ಅಧ್ಯಕ್ಷರ ಪ್ರಯಾಣ
ನಮ್ಮ ಮೆಟ್ರೋ ನಿಲ್ದಾಣದಲ್ಲಿ ಹಾಗೂ ರೈಲಿನೊಳಗಿದ್ದ ಮಹಿಳಾ ಪ್ರಯಾಣಿಕರೊಂದಿಗೆ ಸುರಕ್ಷತೆ ಮತ್ತು ಸೌಕರ್ಯಗಳ ಬಗ್ಗೆ ಸಂವಾದ ನಡೆಸಿ ಕೃಷ್ಣರಾಜಪುರ ಮೆಟ್ರೋ ನಿಲ್ದಾಣದವರೆಗೆ ಪ್ರಯಾಣಿಸಿದರು. ಈ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರು ಮೆಟ್ರೋ ಸೇವೆಗಳ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದರು.
ಸಾರ್ವಜನಿಕರೊಂದಿಗೆ ಸಂವಹನದ ನಡೆಸಿದ ನಂತರ, ಮೆಟ್ರೊದ ವಿಶ್ವಾಸಾರ್ಹತೆ, ಅನುಕೂಲತೆ ಮತ್ತು ಸಮಯಕ್ಕೆ ಸರಿಯಾಗಿ ಸೇವೆ ನೀಡುತ್ತಿರುವ ನಿಗಮದ ಬಗ್ಗೆ ಸಂತಸವನ್ನು ವ್ಯಕ್ತಪಡಿಸಿದ ಅಧ್ಯಕ್ಷರು, ರೈಲು ಆವರ್ತನವನ್ನು ಮತ್ತಷ್ಟು ಹೆಚ್ಚಿಸುವ ಮತ್ತು ಪೀಕ್ ಸಮಯದಲ್ಲಿ ಮಹಿಳೆಯರಿಗೆ ಹೆಚ್ಚುವರಿ ಬೋಗಿಗಳನ್ನು ಒದಗಿಸುವ ಸಾಧ್ಯತೆಯ ಬಗ್ಗೆ ಗಮನಹರಿಸುವಂತೆ ಸಲಹೆ ನೀಡಿದರು.

ಹೆಚ್ಚುವರಿ ರೈಲು ಸೇವೆ ನೀಡುವ ಭರವಸೆ
ಈಗಾಗಲೇ ಪೀಕ್ ಸಮಯದಲ್ಲಿ ಹೆಚ್ಚುವರಿಯಾಗಿ ಶಾರ್ಟ್ ಲೂಪ್ ಸೇವೆಯನ್ನು ನಿಗಮವು ಒದಗಿಸುತ್ತಿದ್ದು ಹೆಚ್ಚುವರಿ ರೈಲುಗಳನ್ನು ಪಡೆದನಂತರ ಇನ್ನು ಹೆಚ್ಚು ಆವರ್ತನದಲ್ಲಿ ಪ್ರಯಾಣಿಕರಿಗೆ ಸೇವೆ ಒದಗಿಸಲಾಗುವುದು. ಈ ಕುರಿತು BMRCL ನಿಗಮದ ಕಾರ್ಯನಿರ್ವಾಹಕ ನಿರ್ದೇಶಕ ಶ್ರೀ ಎ.ಎಸ್ ಶಂಕರ್ ತಿಳಿಸಿದರು.
ಮೆಟ್ರೋ ಪ್ರಯಾಣಿಕರು, ಅಧಿಕಾರಿಗಳ ಜತೆ ಸಂವಾದ
KSCW ಅಧ್ಯಕ್ಷೆ ನಾಡಾ. ನಾಗಲಕ್ಷ್ಮಿ ಚೌಧರಿ ಅವರು ವಿಜಯನಗರ ಮೆಟ್ರೋ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು. ನಂತರ ಮೆಟ್ರೋ ಕಾರ್ಯಾಚರಣೆ, ಸೇವೆ, ಯೋಜನೆಗಳ ಕುರಿತು ಮೆಟ್ರೋ ಅಧಿಕಾರಿಗಳೊಂದಿಗೆ ಡಾ. ನಾಗಲಕ್ಷ್ಮಿ ಚೌಧರಿ ಚರ್ಚಿಸಿದರು. ಇದೇ ವೇಳೆ ಅವರು ವಿಜಯನಗರದಿಂದ KR ಪುರ ವರೆಗೆ ಪ್ರಯಾಣಿಸಿದರು. ಈ ವೇಳೆ ಆಯೋಗದ ಸಿಬ್ಬಂದಿ, ಕೆಲವು ಅಧಿಕಾರಿಗಳು, ಮೆಟ್ರೋ ಅಧಿಕಾರಿಗಳು ಪಾಲ್ಗೊಂಡಿದ್ದರು.
-
RCB: ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾಲುದಾರ ನವಿ ಯುಪಿಐ, ಫ್ಯಾನ್ಸ್ ಗಮನಿಸಿ -
Viral Post: ವಿಮಾನದ ಸೀಟುಗಳ ತುಂಬಾ ಕಸದ ರಾಶಿ: ಪ್ರಯಾಣಿಕರ 'ಸಿವಿಕ್ ಸೆನ್ಸ್' ಪ್ರಶ್ನಿಸಿದ ಮಹಿಳೆ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications