Namma Metro: ಕೆಆರ್ ಪುರಂ-ವೈಟ್ಫೀಲ್ಡ್ ಮೆಟ್ರೋಗೆ ನೀರಸ ಪ್ರತಿಕ್ರಿಯೆ- ಕಾರಣ ತಿಳಿಯಿರಿ
ಬೆಂಗಳೂರು, ಏಪ್ರಿಲ್ 07: ಇತ್ತೀಚೆಗೆ ತೆರೆಯಲಾದ ಕೆ ಆರ್ ಪುರಂ- ವೈಟ್ಫೀಲ್ಡ್ ಲೈನ್, ಬೆಂಗಳೂರಿನಲ್ಲಿ ಐಟಿ ಕಾರಿಡಾರ್ ಮೂಲಕ ಹಾದು ಹೋಗುವ ಮೊದಲ ನಮ್ಮ ಮೆಟ್ರೋ ಮಾರ್ಗವಾಗಿದೆ. ಇನ್ನೂ ಕಚೇರಿಗೆ ಹೋಗುವವರಿಗೆ ವಿಶೇಷವಾಗಿ ಟೆಕ್ಕಿಗಳಿಗೆ ಅನುಕೂಲ ಮಾಡಿಕೊಡಲು ಈ ಮೆಟ್ರೋ ಮಾರ್ಗವನ್ನು ನಿರ್ಮಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಆದರೆ, ಈ ಮಾರ್ಗಕ್ಕೆ ಪ್ರಚಾರಕ್ಕೆ ತಕ್ಕಂತೆ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ ಎಂದು ವರದಿಯಾಗಿದೆ.
ಏಕೆಂದರೆ ವಾರದ ದಿನಗಳಲ್ಲಿ ಸರಾಸರಿ 23,000 ಪ್ರಯಾಣಿಕರು ಈ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದಾರೆ. ಹೊಸ ಮಾರ್ಗವು ಐಟಿ ವೃತ್ತಿಪರರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆಯುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಅವರು ಈ ಪ್ರದೇಶದ ರಸ್ತೆಗಳಲ್ಲಿ ಟ್ರಾಫಿಕ್ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಕಚೇರಿಗೆ ತೆರಳಲು ಮೆಟ್ರೋ ಮಾರ್ಗವನ್ನು ಬಳಸುತ್ತಾರೆ ಎಂದು ಭಾವಿಸಲಾಗಿತ್ತು. ಆದರೆ, ಹೇಳುಕೊಳ್ಳುವಷ್ಟು ಟೆಕ್ಕಿಗಳು ಮೆಟ್ರೋಗೆ ಆಗಮಿಸುತ್ತಿಲ್ಲ.

ವೈಟ್ಫೀಲ್ಡ್ ಕಾಡುಗೋಡಿ- ಕೆಆರ್ ಪುರಂ ಮೆಟ್ರೋ ಮಾರ್ಗವನ್ನು ತೆರೆಯುವುದರೊಂದಿಗೆ, ಬೆಂಗಳೂರಿನ ಮೊದಲ ಐಟಿ ಕಾರಿಡಾರ್- ವೈಟ್ಫೀಲ್ಡ್ - ಮೆಟ್ರೋ ನೆಟ್ವರ್ಕ್ಗೆ ಸಂಪರ್ಕಗೊಂಡಿದೆ ಎಂದು ಹೇಳಲಾಗುತ್ತಿದೆ. ಆದರೆ, ವಾಸ್ತವವಾಗಿ, ಈ ಮಾರ್ಗವು ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಸಂಪರ್ಕ ಹೊಂದದಿರುವುದರಿಂದ ಪ್ರಯಾಣಿಕರು ಕಡಿಮೆ ಆಗಿದ್ದಾರೆಂದು ತಿಳಿದುಬಂದಿದೆ.
ಕೆಆರ್ ಪುರಂನಿಂದ ಬೈಯಪ್ಪನಹಳ್ಳಿಗೆ 2- ಕಿಮೀ ಇದೆ. ಬಹಳಷ್ಟು ಜನರಿಗೆ ಬೈಯಪ್ಪನಹಳ್ಳಿ ಕೊನೆಯ ನಿಲ್ದಾಣವಾಗಿದೆ. ಆದರೆ, ವೈಟ್ಫಿಲ್ಡ್- ಕೆ ಆರ್ ಪುರಂ ಮೆಟ್ರೋ ಮಾರ್ಗವು ಕೆ ಆರ್ ಪುರಂನಲ್ಲಿ ಕೊನೆಗೊಳ್ಳುತ್ತದೆ. ಇದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಹೇಳಲಾಗುತ್ತಿದೆ.
ಬೈಯಪ್ಪನಹಳ್ಳಿಗೆ ಮೆಟ್ರೋ ಕಾರಿಡಾರ್ ಸಂಪರ್ಕಗೊಂಡ ನಂತರ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲಿದೆ ಎಂದು ತಜ್ಞರು ಹೇಳಿದ್ದಾರೆ. ಕೆಆರ್ ಪುರಂ ಮತ್ತು ಬೈಯಪ್ಪನಹಳ್ಳಿಯನ್ನು ಸಂಪರ್ಕಿಸುವ ಮೆಟ್ರೋ ಮಾರ್ಗವು ಜೂನ್ ಅಂತ್ಯದ ವೇಳೆಗೆ ಸಿದ್ಧವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ( BMRCL ) ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಹೇಳಿದ್ದಾರೆ.

ಕೆಆರ್ ಪುರಂನಿಂದ ವೈಟ್ಫೀಲ್ಡ್ವರೆಗೆ 12 ನಿಲ್ದಾಣಗಳೊಂದಿಗೆ 13.7 ಕಿಮೀ ಉದ್ದದ ಪ್ರತ್ಯೇಕವಾದ ನೇರಳೆ ಮಾರ್ಗವನ್ನು ಮಾರ್ಚ್ 25 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಹಳ ಸಂಭ್ರಮದಿಂದ ಉದ್ಘಾಟಿಸಿದರು.
ವಾಣಿಜ್ಯ ಕಾರ್ಯಾಚರಣೆಗಳ ಮೊದಲ ದಿನದಂದು ( ಮಾರ್ಚ್ 26 ), ಪರ್ಪಲ್ ಲೈನ್ 27, 379 ಪ್ರಯಾಣಿಕರನ್ನು ಕಂಡಿತು. ಐದು ದಿನಗಳ ನಂತರ, ಏಪ್ರಿಲ್ 1 ರಂದು, ಸಂಖ್ಯೆ 27, 544 ಆಗಿ ಉಳಿಯಿತು. ವಾರಾಂತ್ಯದಲ್ಲಿ ಈ ಮಾರ್ಗವು ಪ್ರಯಾಣಿಕರನ್ನು ಸೆಳೆಯುವಲ್ಲಿ ಉತ್ತಮವಾಗಿದ್ದರೂ, ವಾರದ ದಿನದ ಅಂಕಿಅಂಶಗಳು ಕುಸಿತವನ್ನು ತೋರಿಸಿವೆ.
ಮಾರ್ಚ್ 27 ರಂದು, ಇದು 21, 261 ರ ಪ್ರಯಾಣಿಕರನ್ನು ಕಂಡಿತು, ಮುಂದಿನ ನಾಲ್ಕು ದಿನಗಳಲ್ಲಿ ಸಂಖ್ಯೆಯು ಕೇವಲ 23, 000 ಅನ್ನು ದಾಟಿತು. ಬೆಂಗಳೂರಿನ ಈ ಹೊಸ ಮಾರ್ಗವು ಕಚೇರಿಗೆ ಹೋಗುವವರಲ್ಲಿ ಇನ್ನೂ ಜನಪ್ರಿಯತೆಯನ್ನು ಗಳಿಸಿಲ್ಲ ಎಂದು ಈ ಅಂಕಿ ಅಂಶಗಳು ಸೂಚಿಸುತ್ತದೆ.
ಹೆಚ್ಚಿನ ಪ್ರಯಾಣಿಕರನ್ನು ಸೆಳೆಯಲು ಕೆ ಆರ್ ಪುರಂ ಮತ್ತು ಬೈಯಪ್ಪನಹಳ್ಳಿ ನಡುವಿನ ಸಂಪರ್ಕವನ್ನು ಪೂರ್ಣಗೊಳಿಸುವುದು ಅತ್ಯಗತ್ಯ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
-
Karnataka Budget 2026: ಮಾ.6 ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ, ಸಮಯ, ನೇರ ಪ್ರಸಾರ ಲಿಂಕ್, ವಿವರ -
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
ಕರ್ನಾಟಕದ 66 ಆರ್ಟಿಓಗಳಲ್ಲಿ ಡಿಜಿಟಲ್ ವ್ಯವಸ್ಥೆ: ವಾಹನ ತೋರಿಸಿದರಷ್ಟೇ ಫಿಟ್ನೆಸ್ ಪ್ರಮಾಣಪತ್ರ, ಏನಿದು? -
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
ಜೈಲಲ್ಲಿರುವ ಪವಿತ್ರಾ ಗೌಡಗೆ ಮನೆ ಊಟ ವ್ಯವಸ್ಥೆಗೆ ಬ್ರೇಕ್ ಹಾಕಿದ ಹೈಕೋರ್ಟ್ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ












Click it and Unblock the Notifications