ಮೆಟ್ರೋ ರೈಲಿನ ಎರಡು ಸುದ್ದಿ, ಒಂದು ಹಗುರ ಮತ್ತೊಂದು ಭಾರ
ಬೆಂಗಳೂರು, ಜೂನ್ 16: ಮೆಟ್ರೋ ರೈಲಿಗೆ ಸಂಬಂಧಿಸಿದಂತೆ ಒಂದು ಒಳ್ಳೆ ಸುದ್ದಿ ಮತ್ತೊಂದು ಜೇಬಿಗೆ ಭಾರವಾಗುವಂಥ ಮಾಹಿತಿ ಇಲ್ಲಿದೆ. ಮೊದಲನೆಯದು ನಮ್ಮ ಮೆಟ್ರೋದ ಮೊದಲ ಹಂತದ ಎಲ್ಲ ಮಾರ್ಗಗಳು ಭಾನುವಾರದಿಂದ ಸಾರ್ವಜನಿಕ ಸೇವೆಗೆ ದೊರೆಯಲಿದೆ.
ಇನ್ನು ಪ್ರಯಾಣ ದರವನ್ನು ಶೇ ಹತ್ತರಷ್ಟು ಏರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿರ್ಧರಿಸಿದೆ. ಮೆಟ್ರೋ ರೈಲಿನ ಕಾರ್ಯಾಚರಣೆಯಿಂದ ಈ ವರೆಗೆ ಆದ ನಷ್ಟವನ್ನು ಸರಿ ಮಾಡಿಕೊಳ್ಳುವುದಕ್ಕೆ ಮೊದಲ ಹಂತದ ಎಲ್ಲ ಮಾರ್ಗಗಳಲ್ಲಿ ಶೇ ಹತ್ತರಷ್ಟು ಪ್ರಯಾಣ ದರ ಏರಿಕೆ ಮಾಡಲು ಒಪ್ಪಿಗೆ ಸೂಚಿಸಲಾಗಿದೆ.

ಸಮಯ ನೋಡಿ ದರ ಪರಿಷ್ಕರಣೆ ಮಾಡಲಾಗುವುದು. ಇದರಿಂದ ಪ್ರಯಾಣಿಕರಿಗೆ ತುಂಬ ಹೊರೆಯೇನೂ ಆಗುವುದಿಲ್ಲ ಎಂದು ಅಧಿಕಾರಿಗಳೇನೋ ತಿಳಿಸಿದ್ದಾರೆ. ಈಗ ಇರುವ ಪ್ರಯಾಣ ದರ ಆರು ವರ್ಷದ ಹಿಂದಿನದು. ಇದರಿಂದ ರಾಜ್ಯ ಸರಕಾರಕ್ಕೆ ವಾರ್ಷಿಕ ನೂರಾರು ಕೋಟಿ ನಷ್ಟವಾಗುತ್ತಿದೆ. ಆದ್ದರಿಂದ ಈ ನಿರ್ಧಾರ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ರೀತಿ ದರ ಹೆಚ್ಚಿಸುವುದರಿಂದ ನಷ್ಟದ ಪ್ರಮಾಣ ತಗ್ಗಿಸಬಹುದೇ ವಿನಾ ಲಾಭ ಆಗುತ್ತದೆ ಅಂತಲ್ಲ ಎಂದು ಹೇಳಿದ್ದಾರೆ. ಆದರೆ ನಿಗಮದ ವ್ಯವಸ್ಥಾಪಕ ಪ್ರದೇಪ್ ಸಿಂಗ್ ಖರೋಲ, ದರ ಏರಿಕೆ ನಿರ್ಧಾರ ಅಂತಿಮವಾಗಿಲ್ಲ ಎಂದಿದ್ದಾರೆ.
ರಾಜಾಜಿನಗರದಿಂದ ಸಂಪಿಗೆ ರಸ್ತೆವರೆಗಿನ ಮೆಟ್ರೋ ವಾಣಿಜ್ಯ ಸಂಚಾರ ಈ ಶುಕ್ರವಾರ ಹಾಗೂ ಶನಿವಾರ (ಜೂನ್ 16, 17) ಇರುವುದಿಲ್ಲ. ಈ ಮಾಹಿತಿ ಗಮನಿಸಿ.
-
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಏ.5ರಂದು ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತ, ಕಾರಣವೇನು? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ











Click it and Unblock the Notifications