ಮಾಗಡಿ ರಸ್ತೆ-ಮೈಸೂರು ರಸ್ತೆ ನಮ್ಮ ಮೆಟ್ರೋ ದರ ಪಟ್ಟಿ
ಬೆಂಗಳೂರು, ನವೆಂಬರ್ 16 : ಮಾಗಡಿ ರಸ್ತೆ-ಮೈಸೂರು ರಸ್ತೆ (ರೀಚ್ - 2) ನಡುವೆ ನಮ್ಮ ಮೆಟ್ರೋ ರೈಲು ಸಂಚಾರಕ್ಕೆ ಸೋಮವಾರ ಅಧಿಕೃತ ಚಾಲನೆ ದೊರೆಯಲಿದೆ. ಒಟ್ಟು 6.4 ಕಿ.ಮೀ ಉದ್ದದ ಮಾರ್ಗದ ನಡುವಿನ ಎಲ್ಲಾ 6 ನಿಲ್ದಾಣಗಳು ಪ್ರಯಾಣಿಕರನ್ನು ಸ್ವಾಗತಿಸಲು ಸಿದ್ಧವಾಗಿವೆ.
ಸೋಮವಾರ ಸಂಜೆ 4 ಗಂಟೆಗೆ ಮಾಗಡಿ ರಸ್ತೆ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಮೆಟ್ರೋ ರೈಲಿಗೆ ಚಾಲನೆ ನೀಡಲಿದ್ದಾರೆ. ನಂತರ ಮೈಸೂರು ರಸ್ತೆ ನಿಲ್ದಾಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. [ನಮ್ಮ ಮೆಟ್ರೋ 2ನೇ ಹಂತದ ಕಾಮಗಾರಿ ವಿವರಗಳು]

ಇಂದು ಮಾರ್ಗ ಉದ್ಘಾಟನೆಗೊಂಡರೂ ಸಾರ್ವನಿಕ ಸಂಚಾರ ಸಾಧ್ಯವಿಲ್ಲ. ಜನರ ಓಡಾಟಕ್ಕೆ ಮಾರ್ಗ ಎಂದು ಮುಕ್ತವಾಗಲಿದೆ? ಎಂಬುದು ಇಂದಿನ ಸಮಾರಂಭದಲ್ಲಿ ಘೋಷಣೆಯಾಗಲಿದೆ. ನಮ್ಮ ಮೆಟ್ರೋ ಮೊದಲ ಹಂತದ ಮಾರ್ಗದ ಒಟ್ಟು 42.3 ಕಿ.ಮೀ. ಈ ಮಾರ್ಗ ಉದ್ಘಾಟನೆಗೊಂಡರೆ ಒಟ್ಟು 25.5 ಕಿ.ಮೀ.ನಲ್ಲಿ ಮೆಟ್ರೋ ಸಂಚಾರ ಆರಂಭವಾದಂತಾಗುತ್ತದೆ. [ಪೂರ್ಣಗೊಳ್ಳುವುದೇ ಡಿಸೆಂಬರೊಳಗೆ ನಮ್ಮ ಮೆಟ್ರೋ?]
ಎಲ್ಲಾ ವ್ಯವಸ್ಥೆ : ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಬೇಕಾದ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರತಿ ನಿಲ್ದಾಣದಲ್ಲಿ 60 ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಉಚಿತ ಶೌಚಾಲಯ, ಟೋಕನ್ ಕೌಂಟರ್ ಸೇರಿದಂತೆ ಎಲ್ಲಾ ವ್ಯವಸ್ಥೆಯಾಗಿದೆ. [BMRCL ವೆಬ್ ಸೈಟ್]
6 ನಿಲ್ದಾಣಗಳು : 6.4 ಕಿ.ಮೀ.ಉದ್ದದ (ನೇರಳೆ ಮಾರ್ಗ)ಮಾಗಡಿ ರಸ್ತೆ-ಮೈಸೂರು ರಸ್ತೆ ಮಾರ್ಗದಲ್ಲಿ ಮಾಗಡಿ ರಸ್ತೆ, ಹೊಸಹಳ್ಳಿ, ವಿಜಯನಗರ, ಅತ್ತಿಗುಪ್ಪೆ, ದೀಪಾಂಜಲಿ ನಗರ ಮತ್ತು ಮೈಸೂರು ರಸ್ತೆ ಸೇರಿ ಆರು ನಿಲ್ದಾಣಗಳಿವೆ.
ಈಗಾಗಲೇ ನಮ್ಮ ಮೆಟ್ರೋ ರೈಲು ಎಂ.ಜಿ.ರಸ್ತೆ ಬೈಯಪ್ಪನಹಳ್ಳಿ ಮತ್ತು ಸಂಪಿಗೆ ರಸ್ತೆ ನಾಗಸಂದ್ರ ನಡುವೆ ಸಂಚಾರ ನಡೆಸುತ್ತಿದೆ. ಈ ಮಾರ್ಗ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾದರೆ ಮೆಟ್ರೋ ಯೋಜನೆಯ ಮೂರನೇ ಮಾರ್ಗ ಉದ್ಘಾಟನೆಯಾದಂತಾಗುತ್ತದೆ.
ದರ ಪಟ್ಟಿ
* ಮಾಗಡಿ ರಸ್ತೆ - ಹೊಸಹಳ್ಳಿ 10 ರೂ.
* ಮಾಗಡಿ ರಸ್ತೆ - ವಿಜಯನಗರ 13
* ಮಾಗಡಿ ರಸ್ತೆ -ಅತ್ತಿಗುಪ್ಪೆ 14
* ಮಾಗಡಿ ರಸ್ತೆ - ದೀಪಾಂಜಲಿ ನಗರ 16
* ಮಾಗಡಿ ರಸ್ತೆ - ಮೈಸೂರು ರಸ್ತೆ 17
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Namma Metro: ಏರ್ಪೋರ್ಟ್ ಮೆಟ್ರೋ ನೀಲಿ ಮಾರ್ಗಕ್ಕೆ ಬರಲಿವೆ 2 ಡ್ರವರ್ಲೆಸ್ ರೈಲು -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ











Click it and Unblock the Notifications