ನಮ್ಮ ಮೆಟ್ರೋ ಮೊದಲ ಹಂತ ಮೇ ಅಂತ್ಯಕ್ಕೆ ಸಂಪೂರ್ಣ
ಆರು ವರ್ಷಗಳ ವಿಳಂಬದ ನಂತರ ಮೇ ಅಂತ್ಯದ ವೇಳೆಗೆ ಮೆಟ್ರೋ ಮೊದಲ ಹಂತದ ಕಾಮಗಾರಿ ಪೂರ್ಣಗೊಳ್ಳಲಿದೆ. ಬಿಎಂಆರ್ ಸಿಎಲ್ ಇದುವರೆಗೂ ಹಾಕಿಕೊಂಡಿದ್ದ 7 ಡೆಡ್ ಲೈನ್ ಗಳನ್ನು ತಲುಪುವಲ್ಲಿ ವಿಫಲವಾಗಿರುವುದು ಉಲ್ಲೆಖಾರ್ಹ.
ಬೆಂಗಳೂರು, ಏಪ್ರಿಲ್ 17: ಆರು ವರ್ಷಗಳ ಸುದೀರ್ಘ ವಿಳಂಬದ ನಂತರ ನಮ್ಮ ಮೆಟ್ರೋ ಮೊದಲ ಹಂತ ಮೇ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ (ಬಿಎಂಆರ್ ಸಿಎಲ್) ಹೇಳಿದೆ.
ಉತ್ತರ ಕಾರಿಡಾರ್ ನ ಸಂಪಿಗೆ ರಸ್ತೆಯಿಂದ ಮತ್ತು ದಕ್ಷಿಣ ಕಾರಿಡಾರ್ ನ ನ್ಯಾಶನಲ್ ಕಾಲೇಜಿನಿಂದ ಮೆಜೆಸ್ಟಿಕ್ ಗೆ ಸಂಪರ್ಕ ಕಲ್ಪಿಸುವ ಗ್ರೀನ್ ಲೈನ್ ಸುರಂಗ ಮಾರ್ಗ ಇದಾಗಿದ್ದು, ಏಪ್ರಿಲ್ ಅಂತ್ಯದ ಹೊತ್ತಿಗೆ ಇದು ಕಾರ್ಯಾರಂಭ ಮಾಡಲಿದೆ ಎಂದು ಬಿಎಂಆರ್ ಸಿಎಲ್ ಈ ಮೊದಲೇ ತಿಳಿಸಿತ್ತು.[ಏಪ್ರಿಲ್ ವೇಳೆಗೆ ಉತ್ತರ, ದಕ್ಷಿಣ ಬೆಂಗಳೂರು ನಡುವೆ ಮೆಟ್ರೋ ಸಂಪರ್ಕ ?]

ಬಿಎಂಆರ್ ಸಿಎಲ್ ತಾನೇ ಹಾಕಿಕೊಂಡಿದ್ದ ಏಳು ಡೆಡ್ ಲೈನ್ ಗಳನ್ನು ತಲುಪುವಲ್ಲಿ ವಿಫಲವಾಗಿದ್ದು, ಮೆಟ್ರೋ ಕಾಮಗಾರಿ 6 ವರ್ಷಗಳ ಸುದೀರ್ಘ ವಿಳಂಬದ ನಂತರ ಮೇ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಜನವರಿ 2017 ರ ಹೊತ್ತಿಗೆ ಮೆಟ್ರೋ ಕಾಮಗಾರಿಗಾಗಿ ವೆಚ್ಚವಾದ ಹಣ 14,292 ಕೋಟಿ ರೂ. ಅಂದರೆ, 2006 ರಲ್ಲಿ ಮೆಟ್ರೋ ಕಾಮಗಾರಿಗಾಗಿ ಬಿಡುಗಡೆಯಾಗಿದ್ದ 6,395 ಕೋಟಿ ರೂಪಾಯಿಯ ಎರಡು ಪಟ್ಟಿಗಿಂತ ಹೆಚ್ಚು ಹಣ ಖರ್ಚಾಗಿದೆ.[ಉತ್ತರ-ದಕ್ಷಿಣ ಬೆಸೆಯುವ ಮೆಟ್ರೋ ಸುರಂಗ ಮಾರ್ಗದ ಟ್ರಯಲ್ ರನ್ ಶುರು!]
ಕೇಂದ್ರ ರೈಲ್ವೆ ಸುರಕ್ಷತೆ ಆಯುಕ್ತರ ಬಳಿಯಿಂದ ಅನುಮತಿ ಪಡೆದ ನಂತರ ಮೆಟ್ರೋ ಮೊದಲ ಹಂತದ ಸಂಚಾರ ಆರಂಭವಾಗಲಿದೆ. ಈಗಾಗಲೇ ಈ ಭಾಗದಲ್ಲಿ ಟ್ರಯಲ್ ರನ್ ಆರಂಭವಾಗಿದ್ದು, ಮೆಟ್ರೋ ಪರ್ಪಲ್ ಲೈನ್ (ನಾಯಂಡ ಹಳ್ಳಿ - ಬೈಯಪ್ಪನಹಳ್ಳಿ) ನ ಉಪಯೋಗ ಪಡೆಯುತ್ತಿರುವ ಜನರಿಗಿಂತ ಮೂರು ಪಟ್ಟು ಹೆಚ್ಚು ಜನ ಗ್ರೀನ್ ಲೈನ್ ಉಪಯೋಗ ಪಡೆಯಲಿದ್ದಾರೆ.
ಬಿಎಂಆರ್ ಸಿಎಲ್ ಉದ್ದೇಶಿತ ನಾಗಸಂದ್ರದಿಂದ ಯಲಚೇನಹಳ್ಳಿಯವರೆಗೆ 24 ಕಿಲೋಮೀಟರ್ ಮೆಟ್ರೋ ಸಂಚಾರ ಆರಂಭಗೊಳ್ಳಲಿದೆ. ನ್ಯಾಷನಲ್ ಕಾಲೇಜು-ಯಲಚೇನಹಳ್ಳಿ ನಡುವಿನ 8 ಕಿಲೋಮೀಟರ್ ಸಂಚಾರಕ್ಕಾಗಿ ಪ್ರಯಾಣಿಕರು ಕಾದಿದ್ದಾರೆ. ಅದರಲ್ಲೂ ಮೆಜೆಸ್ಟಿಕ್, ಚಿಕ್ಕಪೇಟೆ ಹಾಗೂ ಕೆ.ಆರ್. ಮಾರ್ಕೆಟ್ ಸುರಂಗ ಮಾರ್ಗದಲ್ಲಿ ಮೆಟ್ರೋ ಸಂಚಾರ ಅಧಿಕೃತವಾಗಿ ಆರಂಭವಾಗಬೇಕಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications