ನಮ್ಮ ಮೆಟ್ರೋ ಮೊದಲ ಹಂತ ಮೇ ಅಂತ್ಯಕ್ಕೆ ಸಂಪೂರ್ಣ
ಆರು ವರ್ಷಗಳ ವಿಳಂಬದ ನಂತರ ಮೇ ಅಂತ್ಯದ ವೇಳೆಗೆ ಮೆಟ್ರೋ ಮೊದಲ ಹಂತದ ಕಾಮಗಾರಿ ಪೂರ್ಣಗೊಳ್ಳಲಿದೆ. ಬಿಎಂಆರ್ ಸಿಎಲ್ ಇದುವರೆಗೂ ಹಾಕಿಕೊಂಡಿದ್ದ 7 ಡೆಡ್ ಲೈನ್ ಗಳನ್ನು ತಲುಪುವಲ್ಲಿ ವಿಫಲವಾಗಿರುವುದು ಉಲ್ಲೆಖಾರ್ಹ.
ಬೆಂಗಳೂರು, ಏಪ್ರಿಲ್ 17: ಆರು ವರ್ಷಗಳ ಸುದೀರ್ಘ ವಿಳಂಬದ ನಂತರ ನಮ್ಮ ಮೆಟ್ರೋ ಮೊದಲ ಹಂತ ಮೇ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ (ಬಿಎಂಆರ್ ಸಿಎಲ್) ಹೇಳಿದೆ.
ಉತ್ತರ ಕಾರಿಡಾರ್ ನ ಸಂಪಿಗೆ ರಸ್ತೆಯಿಂದ ಮತ್ತು ದಕ್ಷಿಣ ಕಾರಿಡಾರ್ ನ ನ್ಯಾಶನಲ್ ಕಾಲೇಜಿನಿಂದ ಮೆಜೆಸ್ಟಿಕ್ ಗೆ ಸಂಪರ್ಕ ಕಲ್ಪಿಸುವ ಗ್ರೀನ್ ಲೈನ್ ಸುರಂಗ ಮಾರ್ಗ ಇದಾಗಿದ್ದು, ಏಪ್ರಿಲ್ ಅಂತ್ಯದ ಹೊತ್ತಿಗೆ ಇದು ಕಾರ್ಯಾರಂಭ ಮಾಡಲಿದೆ ಎಂದು ಬಿಎಂಆರ್ ಸಿಎಲ್ ಈ ಮೊದಲೇ ತಿಳಿಸಿತ್ತು.[ಏಪ್ರಿಲ್ ವೇಳೆಗೆ ಉತ್ತರ, ದಕ್ಷಿಣ ಬೆಂಗಳೂರು ನಡುವೆ ಮೆಟ್ರೋ ಸಂಪರ್ಕ ?]

ಬಿಎಂಆರ್ ಸಿಎಲ್ ತಾನೇ ಹಾಕಿಕೊಂಡಿದ್ದ ಏಳು ಡೆಡ್ ಲೈನ್ ಗಳನ್ನು ತಲುಪುವಲ್ಲಿ ವಿಫಲವಾಗಿದ್ದು, ಮೆಟ್ರೋ ಕಾಮಗಾರಿ 6 ವರ್ಷಗಳ ಸುದೀರ್ಘ ವಿಳಂಬದ ನಂತರ ಮೇ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಜನವರಿ 2017 ರ ಹೊತ್ತಿಗೆ ಮೆಟ್ರೋ ಕಾಮಗಾರಿಗಾಗಿ ವೆಚ್ಚವಾದ ಹಣ 14,292 ಕೋಟಿ ರೂ. ಅಂದರೆ, 2006 ರಲ್ಲಿ ಮೆಟ್ರೋ ಕಾಮಗಾರಿಗಾಗಿ ಬಿಡುಗಡೆಯಾಗಿದ್ದ 6,395 ಕೋಟಿ ರೂಪಾಯಿಯ ಎರಡು ಪಟ್ಟಿಗಿಂತ ಹೆಚ್ಚು ಹಣ ಖರ್ಚಾಗಿದೆ.[ಉತ್ತರ-ದಕ್ಷಿಣ ಬೆಸೆಯುವ ಮೆಟ್ರೋ ಸುರಂಗ ಮಾರ್ಗದ ಟ್ರಯಲ್ ರನ್ ಶುರು!]
ಕೇಂದ್ರ ರೈಲ್ವೆ ಸುರಕ್ಷತೆ ಆಯುಕ್ತರ ಬಳಿಯಿಂದ ಅನುಮತಿ ಪಡೆದ ನಂತರ ಮೆಟ್ರೋ ಮೊದಲ ಹಂತದ ಸಂಚಾರ ಆರಂಭವಾಗಲಿದೆ. ಈಗಾಗಲೇ ಈ ಭಾಗದಲ್ಲಿ ಟ್ರಯಲ್ ರನ್ ಆರಂಭವಾಗಿದ್ದು, ಮೆಟ್ರೋ ಪರ್ಪಲ್ ಲೈನ್ (ನಾಯಂಡ ಹಳ್ಳಿ - ಬೈಯಪ್ಪನಹಳ್ಳಿ) ನ ಉಪಯೋಗ ಪಡೆಯುತ್ತಿರುವ ಜನರಿಗಿಂತ ಮೂರು ಪಟ್ಟು ಹೆಚ್ಚು ಜನ ಗ್ರೀನ್ ಲೈನ್ ಉಪಯೋಗ ಪಡೆಯಲಿದ್ದಾರೆ.
ಬಿಎಂಆರ್ ಸಿಎಲ್ ಉದ್ದೇಶಿತ ನಾಗಸಂದ್ರದಿಂದ ಯಲಚೇನಹಳ್ಳಿಯವರೆಗೆ 24 ಕಿಲೋಮೀಟರ್ ಮೆಟ್ರೋ ಸಂಚಾರ ಆರಂಭಗೊಳ್ಳಲಿದೆ. ನ್ಯಾಷನಲ್ ಕಾಲೇಜು-ಯಲಚೇನಹಳ್ಳಿ ನಡುವಿನ 8 ಕಿಲೋಮೀಟರ್ ಸಂಚಾರಕ್ಕಾಗಿ ಪ್ರಯಾಣಿಕರು ಕಾದಿದ್ದಾರೆ. ಅದರಲ್ಲೂ ಮೆಜೆಸ್ಟಿಕ್, ಚಿಕ್ಕಪೇಟೆ ಹಾಗೂ ಕೆ.ಆರ್. ಮಾರ್ಕೆಟ್ ಸುರಂಗ ಮಾರ್ಗದಲ್ಲಿ ಮೆಟ್ರೋ ಸಂಚಾರ ಅಧಿಕೃತವಾಗಿ ಆರಂಭವಾಗಬೇಕಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಏ.5ರಂದು ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತ, ಕಾರಣವೇನು? -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ











Click it and Unblock the Notifications