Namma Metro Pillar Collapse: ಪ್ರಕರಣಕ್ಕೆ ತಿರುವು, ₹10 ಕೋಟಿ ಪರಿಹಾರಕ್ಕೆ ಆಗ್ರಹ, HC ನೋಟಿಸ್ ಜಾರಿ
ಬೆಂಗಳೂರು, ಜುಲೈ 26: ಬೆಂಗಳೂರಿನಲ್ಲಿ ನಡೆದಿದ್ದ ನಮ್ಮ ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣಕ್ಕೆ ಮತ್ತೊಂದು ಹಂತದ ತಿರುವು ಪಡೆದುಕೊಂಡಿದೆ. ಪಿಲ್ಲರ್ ಕುಸಿತದಲ್ಲಿ ಗೃಹಿಣಿ ಮತ್ತವರ ಮಗ ಮೃತಪಟ್ಟಿದ್ದರು. ಇದೀಗ ಮೃತಳ ಪತಿ ಹೈಕೋರ್ಟ್ ಮೆಟ್ಟಿಲೇರಿದ್ದು, ಎಂಟು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಆಗಿದೆ.
ತಾಯಿ ಮಗನನ್ನು ಬಲಿ ಪಡೆದ ನಮ್ಮ ಮೆಟ್ರೋ ದುರಂತವು ಬೆಂಗಳೂರು ನಗರದಲ್ಲಿನ BMRCL ಕೈಗೊಂಡಿರುವ ಮೆಟ್ರೋ ಮಾರ್ಗ ನಿರ್ಮಾಣ ಕಾಮಗಾರಿಯು ಭೀತಿ ಸೃಷ್ಟಿಸಿತ್ತು. ಕಾಂಕ್ರೀಟ್ ಹಾಕಲು ಸಿದ್ಧವಾಗಿದ್ದ ಕಬ್ಬಿಣದ ಸರಳು ಉರುಳಿ ಬಿದ್ದು ಸಾಫ್ಟವೇರ್ ಉದ್ಯೋಗಿ ತೇಜಸ್ವಿನಿ ಮತ್ತುವರ ಎರಡೂವರೆ ವರ್ಷ ಮಗ ಮೃತಪಟ್ಟಿದ್ದರು.

ಮೃತ ತೇಜಸ್ವಿನಿ ಪತಿ ಲೋಹಿತ್ ಅವರು ಒಟ್ಟು 10 ಕೋಟಿ ರೂಪಾಯಿ ಪರಿಹಾರ ಕೇಳಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದಿಕ್ಷಿತ್ ಅವರಿದ್ದ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿತು. ಇದೆ ವೇಳೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಹಾಗೂ ರಾಜ್ಯ ಸರ್ಕಾರ, ಗುತ್ತಿಗೆದಾರರ ಕಂಪನಿ ಸೇರಿದಂತೆ ಒಟ್ಟು 08 ಮಂದಿಯನ್ನು ಪ್ರತಿವಾದಿಯನ್ನಾಗಿ ಮಾಡಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
BMRCL ನೀಡಿದ್ದ 20 ಲಕ್ಷ ಪರಿಹಾರ ಸೂಕ್ತವಲ್ಲ
ಈ ಮೂಲಕ ತಾಯಿ-ಮಗನ ಬಲಿ ಪಡೆದಿದ್ದ ಬೆಂಗಳೂರು ನಮ್ಮ ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಈ ಹಿಂದೆ ಅವಘಡ ಸಂಭವಿಸಿದ ಟಿಕ್ಕಿ ತೇಜಸ್ವಿನಿ ಮೃತಪಟ್ಟಾಗ ಅವರಿಗೆ BMRCL ಒಟ್ಟು 20 ಲಕ್ಷ ರೂಪಾಯಿಗಳನ್ನು ಘೋಷಣೆ ಮಾಡಿತ್ತು.

ಇಪ್ಪತ್ತು ಲಕ್ಷ ಪರಿಹಾರ ಹಣ ಸೂಕ್ತವಲ್ಲ ಎಂದಿರುವ ಮೃತರ ಪತಿ ಲೋಹಿತ್ ಅವರು 10 ಕೋಟಿ ರೂಪಾಯಿ ಪರಿಹಾರಕ್ಕೆ ಆಗ್ರಹಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ನಗರದ ನಾಗವಾರ ಬಳಿ ಮೆಟ್ರೋ ಮಾರ್ಗ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಕಾಂಕ್ರೀಟು ಹಾಕಲು ಸಿದ್ಧಪಡಿಸಿ ನಿಲ್ಲಿಸಲಾಗಿದ್ದ ಕಬ್ಬಿಣ ಸರಳುಗಳ ಪಿಲ್ಲರ್ ಕುಸಿತು ಬಿದ್ದಿತ್ತು. ಈ ಪಿಲ್ಲರ್ ಕೆಳಗೆ ಬೈಕಿನಲ್ಲಿ ತೆರಳುತ್ತಿದ್ದ ಟೆಕ್ಕಿ ತೇಜಸ್ವಿನಿ ದಂಪತಿ ಮತ್ತು ಮಗು ಸಿಲುಕಿದ್ದವು, ಈ ವೇಳೆ ತಾಯಿ ಮಗ ಅಸುನೀಗಿದರು. ಪತಿ ಲೋಹಿತ್ಗೆ ಗಾಯಗಳಾಗಿದ್ದವು. ಅವರು ಗದಗ ಜಿಲ್ಲೆ ಮೂಲದವರು ಎನ್ನಲಾಗಿದ್ದು, ಬೆಂಗಳೂರಿನಲ್ಲಿ ದಂಪತಿ ಉದ್ಯೋಗ ಮಾಡಿಕೊಂಡಿದ್ದರು.
ಈ ಘಟನೆಯಿಂದ ಬಿಎಂಆರ್ಸಿಎಲ್ ನಮ್ಮ ಮೆಟ್ರೊ ಕಾಮಗಾರಿಯ ಗುಣಮಟ್ಟದ ಮೇಲೆ ಅನುಮಾನ ವ್ಯಕ್ತವಾಗಿದೆ. ದುರಂತದಲ್ಲಿ ಎರಡು ಅಮಾಯಕ ಜೀವಗಳ ಬಲಿಯಾಗಿದ್ದು, ಗುತ್ತಿಗೆದಾರರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
-
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Namma Metro: ಏರ್ಪೋರ್ಟ್ ಮೆಟ್ರೋ ನೀಲಿ ಮಾರ್ಗಕ್ಕೆ ಬರಲಿವೆ 2 ಡ್ರವರ್ಲೆಸ್ ರೈಲು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ











Click it and Unblock the Notifications