Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ
ಬೆಂಗಳೂರು: ನಮ್ಮ ಮೆಟ್ರೋ ಗುಲಾಬಿ ಮಾರ್ಗದ (Namma Metro Pink Line) ಕಾರ್ಯಾಚರಣೆ ಆರಂಭದ ಬಗ್ಗೆ ಪ್ರಯಾಣಿಕರು ಕಾಯರದಿಂದ ಕಾಯುತ್ತಿದ್ದಾರೆ. ಅವರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮದ ಅಧಿಕಾರಿಗಳು ಶುಭ ಸುದ್ದಿ ನೀಡಿದ್ದು, ಶನಿವಾರ (ಮಾ.21)ದಿಂದಲೇ ಅಗತ್ಯ ಪರಿಶೀಲನಾ ಕಾರ್ಯ ಆರಂಭಿಸಿದೆ. ಕೆಲವೇ ವಾರಗಳಲ್ಲಿ ಉದ್ದೇಶಿತ ಎಲೆವೆಟೆಡ್ ಮೆಟ್ರೋ ಗುಲಾಬಿ ಮಾರ್ಗ ಸಂಚಾರಕ್ಕೆ ಮುಕ್ತವಾಗಲಿದೆ.
ಗುಲಾಬಿ ಮಾರ್ಗ ಆರಂಭಿಸುವ ಮೊದಲು ಬಿಎಂಆರ್ಸಿಎಲ್ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಕಾಳೇನ ಅಗ್ರಹಾರದಿಂದ ನಾಗವಾರವರೆಗೆ ಒಟ್ಟು 21.26 ಕಿಲೋ ಮೀಟರ್ ಉದ್ದ ಗುಲಾಬಿ ಮಾರ್ಗವಿದೆ. ಇದರಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗೆ (7.5 ಕಿಮೀ) ಎಲಿವೇಟೆಡ್ ಕಾರಿಡಾರ್ ಮಾರ್ಗದ ಕಾರ್ಯ ಪೂರ್ಣಗೊಂಡಿದೆ. ಮೊದಲ ಹಂತದಲ್ಲಿ ಈ ಮಾರ್ಗವನ್ನು ಮುಂದಿನ ಮೇ ತಿಂಗಳಿನಲ್ಲಿ ಶುರು ಮಾಡಲು ಯೋಜಿಸಲಾಗಿದೆ. ಈ ಸಂಬಂಧ ರೈಲ್ವೆ ಇಲಾಖೆ ಸಂಶೋಧನಾ ವಿನ್ಯಾಸಗಳು ಮತ್ತು ಮಾನದಂಡಗಳ ಸಂಸ್ಥೆ (ಆರ್ಡಿಓಎಸ್) ಅಧಿಕಾರಿಗಳಿಂದ ಪರಿಶೀಲನಾ ಕಾರ್ಯ ಆರಂಭಿಸಲಾಗಿದೆ.

ಏಪ್ರಿಲ್ ಮಧ್ಯಭಾಗಕ್ಕೆ ಪರೀಕ್ಷೆಗಳು ಪೂರ್ಣ
ಪರಿಕ್ಷಾರ್ಥ ಸಂಚಾರಗಳು ನಡೆದಿವೆ. ಮೇ ತಿಂಗಳೊಳಗೆ ಎಲ್ಲ ರೀತಿಯ ಪರಿಶೀಲನೆ, ತಪಾಸಣೆ ಮುಗಿಸಿ ವಾಣಿಜ್ಯ ಸಂಚಾರಕ್ಕೆ ಅನುವು ಮಾಡಿಕೊಡಲು ಅಧಿಕಾರಿಗಳು ಮುಂದಾಗಿದ್ದಾರೆ. ಈಗಾಗಲೇ ನಾಲ್ಕು ಬಾರಿ ರೈಲುಗಳ ಪರೀಕ್ಷೆಗಳು ನಡೆದಿವೆ. ಈ ಮಾರ್ಗದಲ್ಲಿ ಲೋಡ್ ಪರೀಕ್ಷೆ, ವೇಗದ ಸಂಚಾರ, ಸಿಗ್ನಲಿಂಗ್ ಸೇರಿದಂತೆ ಹತ್ತಾರು ತಪಾಸಣೆ ನಡೆದಿವೆ. ಏಪ್ರಿಲ್ ಮೊದಲ ವಾರದವರೆಗೂ ಒಂದಷ್ಟು ಪರೀಕ್ಷೆಗಳು ಮುಂದುವರಿಯಲಿವೆ.
ಕಾಳೇನ ಅಗ್ರಹಾರದಿಂದ ತಾವರೆಕರೆ ವರೆಗೆ ಒಟ್ಟು ಆರು ನಿಲ್ದಾಣಗಳು ಬರುತ್ತವೆ. ಈ ಮಾರ್ಗದಲ್ಲಿ ಒಟ್ಟು 23 ರೈಲುಗಳನ್ನು ಓಡಿಸಲು ಬೆಂಗಳೂರು ಮೆಟ್ರೋ ರೈಲು ನಿಗಮದ (ಬಿಎಂಆರ್ಸಿಎಲ್) ಅಧಿಕಾರಿಗಳು ನಿರ್ಧರಿಸಿದ್ದಾರೆ. ಅದರಲ್ಲಿ ಆರು ಡ್ರೈವರ್ಲೆಸ್ ರೈಲು ಸಂಚಾರ ಮಾಡಲಿದ್ದು, ನಾಲ್ಕು ರೈಲುಗಳು ಬೆಂಗಳೂರಿಗೆ ಬಂದಿವೆ. ಉಳಿದ ಎರಡು ರೈಲುಗಳು ಮುಂದಿನ ಏಪ್ರಿಲ್ ತಿಂಗಳಲ್ಲಿ ನಗರಕ್ಕೆ ಬರಲಿವೆ.
2027ಕ್ಕೆ ಮೆಟ್ರೋ ಜಾಲ ವಿಸ್ತರಣೆ
ತಾವರೆಕೆರೆಯಿಂದ ನಾಗವಾರವರೆಗೆ ಉಳಿದ ಮಾರ್ಗವು ಸುರಂಗ ರಸ್ತೆಯಿಂದ ಕೂಡಿದೆ. ಈ ಮಾರ್ಗವನ್ನು ಎರಡನೇ ಹಂತದಲ್ಲಿ ಇದೇ ಡಿಸೆಂಬರ್ 2026 ಅಂತ್ಯಕ್ಕೆ ತೆರೆಯಲು ನಿರ್ಧರಿಸಲಾಗಿದೆ. ಮೇ ತಿಂಗಳಲ್ಲಿ ಎಲಿವೇಟೆಡ್ ಮಾರ್ಗ ತೆರೆಯುತ್ತಿದ್ದಂತೆ ಭೂಗತ ಮಾರ್ಗದಲ್ಲಿ ತಪಾಸಣೆ, ಟ್ರ್ಯಾಕ್ ಪರೀಕ್ಷೆ, ಸಿಗ್ನಲಿಂಗ್ ಸೇರಿ ಎಲ್ಲ ತಪಾಸಣೆ ಆರಂಭಿಸಲಾಗುತ್ತದೆ. ಈ ವರ್ಷಾಂತ್ಯಕ್ಕೆ ಹಾಲಿ ನಮ್ಮ ಮೆಟ್ರೋ ಜಾಲ 96 ಕಿಲೋ ಮೀಟರ್ಗೆ 21 ಕಿಲೋ ಮೀಟರ್ ಮಾರ್ಗ ಸೇರ್ಪಡೆಯಾಗಲಿದೆ. ಇದರೊಂದಿಗೆ ನೀಲಿ ಮಾರ್ಗವು ತೆರೆಯಲಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ













Click it and Unblock the Notifications