Breaking: Namma Metro: ನೇರಳೆ ಮಾರ್ಗದಲ್ಲಿ ರೈಲು ಸಂಚಾರ ದಿಢೀರ್ ಸ್ಥಗಿತ, ಪ್ರಯಾಣಿಕರ ಪರದಾಟ
ಬೆಂಗಳೂರು, ಜಲೈ 04: ಸಿಲಿಕಾನ್ ಸಿಟಿ ಬೆಂಗಳೂರಿನ ಜನರಿಗೆ ವೇಗದ ಮತ್ತು ಸುರಕ್ಷಿತ ಸಾರಿಗೆ ಒದಗಿಸುತ್ತಿರುವ ನಮ್ಮ ಮೆಟ್ರೋ (Namma Metro) ರೈಲಿನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಸಂಚಾರಿಸುತ್ತಿದ್ದ ರೈಲು ಏಕಾಎಕಿ ಸ್ಥಗಿತಗೊಂಡು ಸಂಚಾರದಲ್ಲಿ ವ್ಯತ್ಯಯವಾಗಿದೆ. ಇದರಿಂದ ನೂರಾರು ಪ್ರಯಾಣಿಕರು ಪರದಾಡಿದ ಘಟನೆ ಮಂಗಳವಾರ ಬೆಳಗ್ಗೆ ನೇರಳೆ ಮಾರ್ಗದಲ್ಲಿ (Purple Line) ನಡೆದಿದೆ.
Bengaluru Metro's Purple Line services disrupted in the morning due to signalling issues.
— ರೇಖಾ ತಿಪಟೂರು/ Rekha Tipaturu (@RekhaBasavaraju) July 4, 2023
Challenges during peak hours.@NammaBengaluroo pic.twitter.com/JBFx5lp4Cq
ಬೈಯಪ್ಪನಹಳ್ಳಿಯಿಂದ ಕೆಂಗೇರಿವರೆಗಿನ (Purple Line) ನೇರಳೆ ಮಾರ್ಗದಲ್ಲಿ ಎಂದಿನಿಂತೆ ಪೀಕ್ ಅವರ್ (ಹೆಚ್ಚು ಜನ ಓಡಾಡುವ ಅವಧಿ) ನಲ್ಲಿ ಮೆಟ್ರೋ ಸಂಚಾರ ಆರಂಭಿಸಿತ್ತು. ಆದರೆ ಇದ್ದಕ್ಕಿದ್ದಂತೆ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಿತು. ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಇದರಿಂದಾಗಿ ಶಾಲೆ-ಕಾಲೇಜುಗಳು, ಕೆಲಸಗಳಿಗೆ ಹಾಗೂ ಇನ್ನಿತರ ಕಾರ್ಯಗಳಿಗೆ ತೆರಳುತ್ತಿದ್ದ ಪ್ರಯಾಣಿಕರ ಪರದಾಡಿದರು. ಇನ್ನೂ ಈ ನೇರಳೆ ಮಾರ್ಗದಲ್ಲಿ ಮಟ್ರೋ ಸಂಚಾರ ಸ್ಥಗಿತದಿಂದಾಗಿ ಅದೇ ಮಾರ್ಗದಲ್ಲಿ ಬೇರೆ ನಿಲ್ದಾಣಗಳಲ್ಲಿನ ಪ್ರಯಾಣಿಕರು ಸಂಚಾರ ಸಮಸ್ಯೆ ಎದುರಿಸಬೇಕಾಯಿತು.
ಮೆಟ್ರೋ ದಿಢೀರ್ ಸ್ಥಗಿತಕ್ಕೆ ಕಾರಣ
ನೇರಳೆ ಮಾರ್ಗದಲ್ಲಿ ಹೀಗೆ ಮೆಟ್ರೋ ರೈಲು ಹಠಾತ್ ನಿಲ್ಲಲು ಕಾರಣ, ಕೆಲವು ತಾಂತ್ರಿಕ ಸಮಸ್ಯೆಗಳು ಎಂದು ಬಿಎಂಆರ್ಸಿಲ್ ಮೂಲಗಳು ತಿಳಿಸಿದೆ.
ಕಳೆದ ಜುಲೈ 02ರ ಭಾನುವಾರವಷ್ಟೇ ಇದೇ ನೇರಳೆ ಮಾರ್ಗ ಎಂಜಿ ರಸ್ತೆಯಿಂದ ಟ್ರಿನಿಟಿವರೆಗೆ ತುರ್ತು ನಿರ್ವಹಣಾ ಕಾರ್ಯ ಕೈಗೊಂಡ ಪರಿಣಾಮ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿವರೆಗೆ ಬೆಳಗ್ಗೆ 07 ಗಂಟೆಯಿಂದ 09 ಗಂಟೆವರೆಗೆ ಸಂಚಾರ ವ್ಯತ್ಯಯ ಉಂಟಾಗಿತ್ತು. ಅದರ ಬೆನ್ನಲ್ಲೆ ಅದೇ ಮಾರ್ಗದಲ್ಲಿ ರೈಲು ಹಠಾತ್ ನಿಲ್ಲುವ ಮೂಲಕ ಸಾರ್ವಜನಿಕರಿಗೆ ತೊಂದರೆ ಸೃಷಿಯಾಗಿದೆ.
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಜನಜಂಗುಳಿ
ಮೆಟ್ರೋ ರೈಲಿನಲ್ಲಿ ಸಂಚಾರ ವ್ಯತ್ಯಯವಾಗಿದ್ದರಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೆಜೆಸ್ಟಿಕ್ ಮೆಟ್ರೋ ರೈಲು ನಿಲ್ದಾಣದಲ್ಲಿ ಜನ ಜಂಗುಳಿಯೇ ಕಂಡು ಬಂತು. ಪ್ಲಾಟ್ಫಾರ್ಮ್ ತುಂಬಾ ಕಿಕ್ಕಿರಿರು ಕಾಲಿಡಲು ಜಾಗವೇ ಇರದಷ್ಟು ಜನ ತುಂಬಿಕೊಂಡಿದ್ದರು. ರೈಲು ಸಂಚಾರದಲ್ಲಿ ವ್ಯತ್ಯಯವಾಗಿದ್ದರಿಂದ ಸರಿಯಾದ ಸಮಯಕ್ಕೆ ಉದ್ದೇಶಿತ ಸ್ಥಳ ತಲುಪದೇ ಜನ ಕಷ್ಟ ಅನುಭವಿಸಿದರು. ಮೆಜೆಸ್ಟಿಕ್ ಸೇರಿದಂತೆ ನೇರಳೆ ಮಾರ್ಗದ ಬಹುತೇಕ ಎಲ್ಲ ರೈಲು ನಿಲ್ದಾಣಗಳಲ್ಲಿ ಇಂತದ್ದೆ ಪರಿಸ್ಥಿತಿ ಕಂಡು ಬಂದಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications