ಬಂದ್ ನಡುವೆಯೂ ಓಡುತ್ತಿದೆ ನಮ್ಮ ಮೆಟ್ರೋ!
ಬೆಂಗಳೂರು, ಜನವರಿ 24: ಮಹಾದಾಯಿ ನದಿ ನೀರಿನ ವಿವಾದ ಇತ್ಯರ್ಥಗೊಳಿಸಲು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಎಂದಿನಿಂತೆ ಸಂಚರಿಸುತ್ತಿದೆ. ಆದರೆ ಪ್ರಯಾಣಿಕರ ಸಂಖ್ಯೆಯಲ್ಲಿ ಸ್ವಲ್ಪ ಇಳಿಮುಖವಾಗಿದೆ.
ನಮ್ಮ ಮೆಟ್ರೋ ಎರಡೂ ಮಾರ್ಗಗಳಲ್ಲಿ ಸಂಚಾರ ಆರಂಭಿಸಿದೆ. ಪ್ರತಿ ಹತ್ತು ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸುತ್ತಿದ್ದು, ಪ್ರಯಾಣಿಕರ ಸಂದಣಿ ಆಧರಿಸಿ ಅವಧಿಯನ್ನು ಕಡಿಮೆಗಿಳಿಸಲು ಮೆಟ್ರೋ ನಿರ್ಧರಿಸಿದೆ ಎಂದು ಮೆಟ್ರೋ ಪ್ರಧಾನ ವ್ಯವಸ್ಥಾಪಕ ಯು.ಎ. ವಸಂತ್ ರಾವ್ ತಿಳಿಸಿದ್ದಾರೆ.
ಚಿತ್ರಗಳು : ಮಹದಾಯಿಗಾಗಿ ಕರ್ನಾಟಕ ಬಂದ್

ಬೆಳಗ್ಗೆ 8 ಗಂಟೆ ಸುಮಾರಿಗೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಬಳಿ ಬಂದ್ ಹಿನ್ನೆಲೆ ಕೆಲವರು ಜಮಾಯಿಸಿದ್ದರಾದರೂ ಪೊಲೀಸರ ಮಧ್ಯಪ್ರವೇಶದಿಂದ ಯಾವುದೇ ತೊಂದರೆ ಆಗಲಿಲ್ಲ. ಈ ತನಕ ಮೆಟ್ರೋ ಸಂಚಾರಕ್ಕೆ ಯಾವುದೇ ಬಾಧೆ ಉಂಟಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Recommended Video

ಕರ್ನಾಟಕ ಬಂದ್ | ಮೈಸೂರಿನಲ್ಲೂ ಬಂದ್ ಕಾವು ಜೋರು | Oneindia Kannada












Click it and Unblock the Notifications