Namma Metro: ಮತ್ತೆ ಮತ್ತೆ ಸುದ್ದಿಯಾಗುತ್ತಿದೆ ಮೆಟ್ರೋ, ನೇರಳೆ ಮಾರ್ಗದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರದಲ್ಲಿ ವ್ಯತ್ಯಯ!
ಬೆಂಗಳೂರು, ಮಾರ್ಚ್ 27: ಇತ್ತೀಚೆಗಷ್ಟೇ ತಾಂತ್ರಿಕ ದೋಷ ಕಾಣಿಸಿಕೊಂಡು ನೇರಳೆ ಮಾರ್ಗದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಮೆಟ್ರೋ ಸ್ಥಗಿತಗೊಂಡಿತ್ತು. ಅದರ ಬೆನ್ನಲ್ಲೇ ಮತ್ತೆ ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಸುಮಾರು ಒಂದು ಗಂಟೆ ಸಮಯ ಸ್ಥಗಿತವಾಗಿತ್ತು ಎಂಬ ಮಾಹಿತಿಯನ್ನು ಬಿಎಂಆರ್ಸಿಎಲ್ ಹಂಚಿಕೊಂಡಿದೆ ಲಭ್ಯವಾಗಿದೆ.
ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಿಗ್ನಲ್ ವೈಫಲ್ಯದಿಂದಾಗಿ ಬೈಯಪ್ಪನಹಳ್ಳಿ ಮತ್ತು ಗರುಡಾಚಾರ್ ಪಾಳ್ಯ ನಡುವೆ ಸಂಚಾರ ವ್ಯತ್ಯಯ ಆಗಿತ್ತು. ಮಾರ್ಚ್ 27ರ ಬುಧವಾರ ಬೆಳಗ್ಗೆ 6.40 ರಿಂದ 7.40ರ ವರೆಗೂ ಬೈಯಪ್ಪನಹಳ್ಳಿ ಮತ್ತು ಗರುಡಾಚಾರ್ ಪಾಳ್ಯ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂಬ ಮಾಹಿತಿ ಇದೆ.

ಬೈಯಪ್ಪನಹಳ್ಳಿ ಮತ್ತು ಗರುಡಾಚಾರ್ ಪಾಳ್ಯ ನಡುವಿನ ಸಿಗ್ನಲ್ ವೈಫಲ್ಯದಿಂದಾಗಿ ನೇರಳೆ ಮಾರ್ಗದಲ್ಲಿ ಕೆಲವು ವಿಳಂಬವಾಗಲಿದೆ. ಈ ಪ್ರದೇಶದಲ್ಲಿ ರೈಲುಗಳು ನಿರ್ಬಂಧಿತ ವೇಗದಲ್ಲಿ ಚಲಿಸುತ್ತಿವೆ. ಸಿಗ್ನಲ್ ವೈಫಲ್ಯವನ್ನು ಸರಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಟ್ವೀಟ್ ಮಾಡಿತ್ತು.
ಇನ್ನು, ಕೆಲ ಗಂಟೆಗಳ ಬಳಿಕ ನೇರಳೆ ಮಾರ್ಗದ ಬೈಯಪ್ಪನಹಳ್ಳಿ ಮತ್ತು ಗರುಡಾಚಾರ್ ಪಾಳ್ಯ ನಡುವಿನ ಸಿಗ್ನಲ್ ದೋಷವನ್ನು ಸರಿಪಡಿಸಲಾಗಿದ್ದು, ರೈಲುಗಳು ಸಾಮಾನ್ಯ ವೇಗದಲ್ಲಿ ಚಲಿಸುತ್ತಿವೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದೆ.
The signalling fault between Baiyappanahalli and Garudacharpalya on the purple line has been rectified and trains are running at their normal speed. For kind information.
— ನಮ್ಮ ಮೆಟ್ರೋ (@OfficialBMRCL) March 27, 2024
ಇನ್ನು, ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಪರದಾಡುತ್ತಿದ್ದ ಬಗ್ಗೆ ವರದಿಯಾಗಿತ್ತು. ಗುತ್ತಿಗೆದಾರರು ಹಾಗೂ ಮೆಟ್ರೋ ಅಧಿಕಾರಿಗಳ ಮಧ್ಯೆದ ತಿಕ್ಕಾಟಕ್ಕೆ ಜನರು ತೊಂದರೆ ಅನುಭವಿಸುವಂತಾಗಿತ್ತು. ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಇದ್ದ ವಾಹನಗಳ ಪಾರ್ಕಿಂಗ್ ಸ್ಥಳಕ್ಕೆ ಬೀಗ ಬಿದ್ದಿದ್ದ ಕಾರಣ ಪ್ರಯಾಣಿಕರು ಸಮಸ್ಯೆ ಎದುರಿಸುತ್ತಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications