Namma Metro: ಈ ಮೆಟ್ರೋ ಮಾರ್ಗ ಕಾಮಗಾರಿ ಪೂರ್ಣ, ಸಂಚಾರಕ್ಕೆ ದಿನಾಂಕ ನಿಗದಿ ಬಾಕಿ
ಬೆಂಗಳೂರು, ಜನವರಿ 23: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಪ್ರಯಾಣಿಕರ ಮೆಚ್ಚಿನ ಆಯ್ಕೆಯಾಗಿದೆ. ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಹಾಗೂ ಸಮಯ ಉಳಿಸಲು ಪ್ರತಿನಿತ್ಯ ಸಾವಿರಾರು ಜನರು ಮೆಟ್ರೋದಲ್ಲಿ ಸಂಚಾರ ನಡೆಸುತ್ತಿದ್ದಾರೆ.
ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದಂತೆ ನಗರದ ವಿವಿಧ ಭಾಗಗಳಿಗೆ ಸಂಚಾರ ಆರಂಭಿಸುವ ದೃಷ್ಟಿಯಲ್ಲಿ ಕಾಮಗಾರಿಗಳು ಕೂಡ ಭರದಿಂದ ಸಾಗುತ್ತಿದೆ. ಆದರೆ ಇದೊಂದು ಮಾರ್ಗದಲ್ಲಿ ಕಾಮಗಾರಿ ಸಂಪೂರ್ಣಗೊಂಡರೂ ಸಹ ಸಂಚಾರ ಆರಂಭವಾಗಿಲ್ಲ.

ನಮ್ಮ ಮೆಟ್ರೋ ವಿವಿಧ ಮಾರ್ಗಗಳ ಕಾಮಗಾರಿ ನಡೆಯುತ್ತಿದೆ. ಆದರೆ ಹಸಿರು ಮಾರ್ಗದ ಕಾಮಗಾರಿ ಪೂರ್ಣ ಮುಗಿದರೂ, ಸಂಚಾರಕ್ಕೆ ಇನ್ನೂ ಮುಕ್ತವಾಗಿಲ್ಲ. ಬಾಕಿ ಉಳಿದಿದ್ದ ಸುಮಾರು 4 ಕಿ.ಮೀ. ಮಾರ್ಗ ನಿರ್ಮಾಣ ಸಂಪೂರ್ಣವಾಗಿ ಬಹಳ ಸಮಯವೇ ಕಳೆದರೂ ರೈಲು ಸಂಚಾರ ಆರಂಭವಾಗಿಲ್ಲ.
ನಮ್ಮ ಮೆಟ್ರೋ ಹಸಿರು ಮಾರ್ಗ ರೇಷ್ಮೆ ಸಂಸ್ಥೆಯಿಂದ-ಮಾದಾವರವರೆಗೆ ವಿಸ್ತಾರವಾಗಿದೆ. ಆದರೆ ಸದ್ಯ ನಾಗಸಂದ್ರವರೆಗೆ ಮಾತ್ರ ರೈಲು ಸಂಚಾರ ನಡೆಸುತ್ತಿದೆ. 2017ರ ಮೇ ತಿಂಗಳಲ್ಲಿ ನಮ್ಮ ಮೆಟ್ರೋ ಹಸಿರು ಮಾರ್ಗ ವಿಸ್ತರಣೆ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಕಾಮಗಾರಿಗೆ 964 ಕೋಟಿ ರೂಪಾಯಿ ಮೀಸಲಿಡಲಾಗಿತ್ತು.
ಈ ಮಾರ್ಗದ ಕಾಮಗಾರಿಗೆ ಭೂಸ್ವಾಧೀನ ದೊಡ್ಡ ಸಮಸ್ಯೆಯಾಗಿದ್ದು, ಕೋರ್ಟ್ನಲ್ಲಿ ವ್ಯಾಜ್ಯ ಇತ್ಯರ್ಥವಾಗಲು ಸಮಯ ತೆಗೆದುಕೊಂಡಿತ್ತು. ಸುಮಾರು ಮೂರುನಾಲ್ಕು ವರ್ಷಗಳ ಬಳಿಕ ವ್ಯಾಜ್ಯ ಇತ್ಯರ್ಥವಾಗಿ ಕಾಮಗಾರಿ ಆರಂಭಿಸಲಾಗಿತ್ತು. ಕಾಮಗಾರಿ ಆರಂಭವಾಗಿದ್ದೇ ತಡ ಕೆಲಸಗಳು ವೇಗವಾಗಿ ನಡೆದು ಹಸಿರು ಮಾರ್ಗ ಸಂಪೂರ್ಣಗೊಂಡಿತ್ತು.
ಸದ್ಯ ನಮ್ಮ ಮೆಟ್ರೋ ಹಸಿರು ಮಾರ್ಗ ಪೂರ್ಣಗೊಂಡಿದ್ದರು ಸಹ ನಾಗಸಂದ್ರದಿಂದ ಮಾದಾವರವರೆಗೆ ಇರುವ ಉಳಿದ 3.77 ಕಿ.ಮೀ. ಮಾರ್ಗದಲ್ಲಿ ರೈಲು ಸಂಚಾರ ಇನ್ನೂ ಆರಂಭವಾಗಿಲ್ಲ. ಈ ಕಾಮಗಾರಿಯ ನಡುವೆ ಕೊರೊನಾದಂತಹ ಕಠಿಣ ಪರಿಸ್ಥಿತಿ ಬಂದಂತಹ ಕಾರಣ ಆರ್ಥಿಕ ಬಿಕ್ಕಟ್ಟು ಕೂಡ ಆರಂಭವಾಗಿತ್ತು.
ಸದ್ಯ ಎಲ್ಲಾ ಸವಾಲುಗಳನ್ನು ದಾಟಿ ಮೆಟ್ರೋ ಹಸಿರು ಮಾರ್ಗ ಪೂರ್ಣಗೊಂಡಿದ್ದು, ಕೇಂದ್ರ ರೈಲ್ವೆ ಸುರಕ್ಷತಾ ಆಯುಕ್ತರು ಭೇಟಿ ನೀಡಿ ಪರಿಶೀಲಿಸುವುದು ಮಾತ್ರ ಬಾಕಿ ಇದೆ. ಇನ್ನು ಕೇಂದ್ರ ರೈಲ್ವೆ ಸುರಕ್ಷತಾ ಆಯುಕ್ತರು ಭೇಟಿ ಬಳಿಕ ರೈಲು ಸಂಚಾರದ ದಿನಾಂಕ ನಿಗದಿಯಾಗಲಿದೆ. ಇನ್ನು ಈ ಮಾರ್ಗದಲ್ಲಿ ಮಂಜುನಾಥ ನಗರ, ಚಿಕ್ಕಬಿದರಕಲ್ಲು ಮತ್ತು ಮಾದಾವರ ಮೂರು ನಿಲ್ದಾಣಗಳಿದ್ದು, ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ರೇಷ್ಮೆ ಸಂಸ್ಥೆಯಿಂದ - ಮಾದಾವರವರೆಗೆ ವಿಸ್ತಾರವಾದ ಈ ನಮ್ಮ ಮೆಟ್ರೋ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾದರೆ ತುಮಕೂರು ಕಡೆಯ ರಸ್ತೆಯ ಟ್ರಾಫಿಕ್ ಜಾಮ್ ಕಡಿಮೆಯಾಗಲಿದೆ. ಮಾದಾವರವರೆಗೆ ಮೆಟ್ರೋ ಪ್ರಾರಂಭವಾದರೆ, ದಾಬಸ್ಪೇಟೆ, ನೆಲಮಂಗಲ ಕಡೆಯಿಂದ ಪೀಣ್ಯ ಕೈಗಾರಿಕಾ ಘಟಕಕ್ಕೆ ಬರುವ ಕಾರ್ಮಿಕರಿಗೆ 4 ಕಿ.ಮೀ ಹೆಚ್ಚಿನ ಮೆಟ್ರೋ ಸೇವೆ ಲಭ್ಯವಾಗಲಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ











Click it and Unblock the Notifications