Namma Metro: ಆಗ ಅನ್ನದಾತ, ಈಗ ಕಾರ್ಮಿಕನಿಗೆ ಅವಮಾನಿಸಿದ ಮೆಟ್ರೋ ಸಿಬ್ಬಂದಿ, ವಿಡಿಯೋ ವೈರಲ್-ಮುಂದಾಗಿದ್ದೇನು?
ಬೆಂಗಳೂರು, ಏಪ್ರಿಲ್, 09: ಬೆಂಗಳೂರಿನ ನಮ್ಮ ಮೆಟ್ರೋ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇದೆ. ಈ ಹಿಂದೆ ಮೆಟ್ರೋ ಸಿಬ್ಬಂದಿ ರೈತನಿಗೆ ಬಟ್ಟೆ ಸರಿಯಿಲ್ಲ ಎಂದು ತಡೆದು ಅವಮಾನಿಸಿದ್ದರು. ಇದೀಗ ಅಂತಹದ್ದೇ ಒಂದು ಘಟನೆ ನಡೆದಿದ್ದು, ಇದಕ್ಕೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿವೆ.
ಬಟ್ಟೆ ಸರಿಯಿಲ್ಲ, ಶರ್ಟ್ ಗುಂಡಿಯನ್ನು ಹಾಕಿಕೊಂಡು ನೀಟಾಗಿ ಬಾ ಎಂದು ಕಾರ್ಮಿಕನೋರ್ವನನ್ನು ಹೊರಗಡೆ ನಿಲ್ಲಿಸಿ ಮೆಟ್ರೋ ಸಿಬ್ಬಂದಿ ಅವಮಾನಿಸಿದ ಘಟನೆ ಬೆಂಗಳೂರಿನ ದೊಡ್ಡ ಲಕ್ಕಸಂದ್ರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಸಾರ್ವಜನಿಕರು ಮೆಟ್ರೋ ಸಿಬ್ಬಂದಿಯ ಈ ವರ್ತನೆಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಕಾರ್ಮಿಕನನ್ನು ಅವಮಾನಿಸಿದ ಮೆಟ್ರೋ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆಯೂ ಒತ್ತಾಯಿಸಿದ್ದಾರೆ.

ಇತ್ತೀಚಿಗಷ್ಟೇ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಸಿಬ್ಬಂದಿ ಅನ್ನದಾತನಿಗೆ ಅವಮಾನ ಮಾಡಿದ್ದರು. ಬಟ್ಟೆ ಶುಚಿಯಿಂದ ಇಲ್ಲ ಎಂಬ ಕಾರಣಕ್ಕೇ ರೈತನನ್ನು ಮೆಟ್ರೋ ಒಳಗಡೆ ಬಿಡದೆ ಸಿಬ್ಬಂದಿ ಅವಮಾನಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಈ ದೃಶ್ಯಗಳನ್ನು ವೀಕ್ಷಣೆ ಮಾಡಿದ್ದ ಸಾರ್ವಜನಿಕರು ಬಿಎಂಆರ್ಸಿಎಲ್ಗೆ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದರು. ಇದೀಗ ಕಾರ್ಮಿಕನಿಗೂ ಅವಮಾನ ಮಾಡಿದ್ದು, ಜನರು ಮೆಟ್ರೋ ಸಿಬ್ಬಂದಿ ಈ ನಡೆಗೆ ಕ್ಯಾಕರಿಸಿ ಉಗಿಯುತ್ತಿದ್ದಾರೆ.
Location Doddakallasandra metro. One more incident of cloth/attire related incident happened in front of me just now. A labourer was stopped & told to stitch up his top two buttons…
— Old_Saffron(ಮೋದಿಯ ಪರಿವಾರ/Modi’s Family) (@TotagiR) April 7, 2024
When did Namma metro became like this!!? @OfficialBMRCL @Tejasvi_Surya pic.twitter.com/4hB8Z6Q2gT
ಸಾಮಾನ್ಯವಾಗಿ ಮೆಟ್ರೋದಲ್ಲಿ ಸಾರ್ವಜನಿಕರು, ಉದ್ಯೋಗಿಗಳು ಪ್ರಯಾಣ ಮಾಡುತ್ತಿರುತ್ತಾರೆ. ಇನ್ನು ಕಚೇರಿ, ಕಂಪನಿಗಳಲ್ಲಿ ಕೆಲಸ ಮುಗಿಸಿಕೊಂಡು ಅತೀ ಬೇಗ ಮನೆಗೆ ಹೋಗಬೇಕೆಂದು ಉದ್ಯೋಗಿಗಳು ಮೆಟ್ರೋವನ್ನು ಅವಲಂಬಿಸಿರುತ್ತಾರೆ. ಅದರಲ್ಲೂ ಕಾರ್ಖಾನೆಗಳಲ್ಲೂ ಕೆಲಸ ಮಾಡುವವರು ಕೂಡ ಇರುತ್ತಾರೆ. ಹಾಗಂತ ಅವರೇನೂ ಹಣ ಕೊಡದೇ ಮೆಟ್ರೋ ಹತ್ತುತ್ತಾರಾ?, ಮೆಟ್ರೋದಲ್ಲಿ ಬರೀ ನೀಟಾಗಿ ಬಟ್ಟೆ ಹಾಕಿಕೊಂಡವರೇ ಮಾತ್ರ ಪ್ರಯಾಣ ಮಾಡಬೇಕಾ? ಎನ್ನುವ ಪ್ರಶ್ನೆಗಳು ಎದ್ದಿವೆ.
ಸಾರ್ವಜನಿಕರಿಂದ ತೀವ್ರ ಆಕ್ರೋಶ: ರೈತ ಇಲ್ಲದಿದ್ದರೆ ಅನ್ನ ದೊರಕುವುದಿಲ್ಲ, ಕಾರ್ಮಿಕರು ಇಲ್ಲದೆ ವಾಹನಗಳ ಬಿಡಿಭಾಗಗಳು, ಅಷ್ಟೇ ಯಾಕೆ ಮೆಟ್ರೋ ಗಾಲಿ ಕೂಡ ತಯಾರಾಗುವುದಿಲ್ಲ. ಅಷ್ಟೇ ಅಲ್ಲದೆ ಬಿಸಿಲು ನೆರಳೆನ್ನದೇ ಮೆಟ್ರೋ ಕಾಮಗಾರಿಯನ್ನು ಮಾಡುವವರು ಕಾರ್ಮಿಕರೇ ಎನ್ನುವುದನ್ನು ಮೊದಲು ಬಿಎಂಆರ್ಸಿಎಲ್ ತಿಳಿದುಕೊಳ್ಳಬೇಕಾಗಿದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Namma Metro: ಏರ್ಪೋರ್ಟ್ ಮೆಟ್ರೋ ನೀಲಿ ಮಾರ್ಗಕ್ಕೆ ಬರಲಿವೆ 2 ಡ್ರವರ್ಲೆಸ್ ರೈಲು -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications