ಮೆಟ್ರೋ ಬಂದ್, ಆಟೋ, ಕ್ಯಾಬ್ ಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ಬೆಂಗಳೂರು, ಜುಲೈ 07 : ಗಂಡ-ಹೆಂಡರ ಜಗಳದ ಮಧ್ಯೆ ಕೂಸು ಬಡವಾಯ್ತು ಎನ್ನುವಂತೆ, ನಮ್ಮ ಮೆಟ್ರೋ ಸಿಬ್ಬಂದಿ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಸಿಬ್ಬಂದಿಯ ನಡುವೆ ಗುದ್ದಾಟ ಮೆಟ್ರೋ ಪ್ರಯಾಣಿಕರಿಗೆ ತೊಂದರೆ ಉಂಟುಮಾಡಿದೆ.
ಇಂದು ಬೆಳಗ್ಗೆ ಮೆಟ್ರೋ ಇಲ್ಲ ಎಂಬ ಸುದ್ದಿ ಹರಡುತ್ತಿದ್ದಂತೆಯೇ ಅಲ್ಲಲ್ಲಿ ಇದ್ದ ಆಟೋಗಳು ಮೆಟ್ರೋ ನಿಲ್ದಾಣಗಳ ಮುಂದೆ ಹಾಜರ್ ಆಗಿವೆ. ಆಟೋ ಡ್ರೈವರ್ ಗಳು ಇದೆ ಒಳ್ಳೇ ಸಮಯ ಅಂತ ಬಾಯಿಗೆ ಬಂದ ರೇಟ್..ಇಲ್ಲಾoದ್ರೆ ಮೀಟರ್ ಮೇಲೆ ಅಸ್ಟು ಕೊಡಿ, ಇಷ್ಟು ಕೊಡಿ ಅಂತ ಡಿಮ್ಯಾಂಡ್ ಮಾಡುತ್ತಿದ್ದಾರೆ.
ಆಟೋ, ಬಸ್ ಹಾಗೂ ಬೈಕ್ ನಿಂದ ಹತ್ತಿರದ ಮೆಟ್ರೋ ನಿಲ್ದಾಣದವರೆಗೆ ಡ್ರಾಪ್ ತೆಗೆದುಕೊಂಡು ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದವರು ಇಂದು (ಶುಕ್ರವಾರ) ನಿರಾಸೆಗೊಳಗಾದ ದೃಶ್ಯ ಸಾಮಾನ್ಯವಾಗಿತ್ತು. ಮೆಟ್ರೋ ಮುಖ ಸಿಂಡಿರಿಸಿಕೊಂಡು ಅನಿವಾರ್ಯದಿಂದ ಮೆಟ್ರೋ ನಿಲ್ದಾಣದಿಂದ ಕ್ಯಾಬ್ ಹಾಗೂ ಆಟೋ ಹಿಡಿದು ತಮ್ಮ ಕೆಲಸಕ್ಕೆ ಹೊರಟರು.

ದಿಢೀರ್ ಮೆಟ್ರೋ ನಿಲ್ಲಿಸುವುದು ಎಷ್ಟು ಸರಿ?
ತಮ್ಮ-ತಮ್ಮ ನಡುವಿನ ಜಗಳಕ್ಕೆ ದಿಢೀರನೇ ಮೆಟ್ರೋ ಸ್ಥಗಿತಗೊಳಿಸಿದರೆ ಹೇಗೆ?, ತಮಗೆ ತಿಳಿದಂಗೆ ಮಾಡೋಕೆ ಮೆಟ್ರೋ ಏನ್ ಅವರ ಸ್ವಂತ ಆಸ್ತಿ ನಾ..ಪ್ರತಿಭಟನೆ ಮಾಡೋದಾದ್ರೆ ಒಂದ್ ದಿನ ಮೊದಲೇ ಸಾರ್ವಜನಿಕರಿಗೆ ತಿಳಿಸಬೇಕು, ನಾವು ಬೇರೆ ದಾರಿ ನೋಡ್ಳೋತಿರಲಿಲ್ಲವೇ ಎಂದು ಮೆಟ್ರೋ ಪ್ರಯಾಣಿಕರು ಮೆಟ್ರೋ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮೆಟ್ರೋ ಸ್ಥಗಿತದ ಬಗ್ಗೆ ಸಿಬ್ಬಂದಿಗೆ ಗೊತ್ತಿಲ್ಲ
ಬೆಂಗಳೂರಿನಾದ್ಯಂತ ನಮ್ಮ ಮೆಟ್ರೋ ಶುಕ್ರವಾರ ದಿಢೀರನೇ ಸ್ಥಗಿತಗೊಳಿಸಿರುವ ಬಗ್ಗೆ ಸ್ವತಃ ಮೆಟ್ರೋ ಸಿಬ್ಬಂದಿಗಳಿಗಾಗಲಿ, ಸೆಕ್ಯೂರಿಟಿ ಗರ್ಡ್ ಗಳಿಗಾಲಿ ಗೊತ್ತಿಲ್ಲ. ಬಂದ ಪ್ರಯಾಣಿಕರಿಗೆ ಮೆಟ್ರೋ ಇಲ್ಲ ಸಾರ್ ಏನೋ ಟೆಕ್ನಿಕಲ್ ಪ್ರಾಬ್ಲಮ್ ಇದೆ ಎಂದು ಸಮಾಜಾಯಿಸಿ ಹೇಳಿ ಕಳುಹಿಸುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.

ನಗರದಾದ್ಯಂತ ಫುಲ್ ಟ್ರಾಫಿಕ್ ಜಾಮ್
ಪ್ರತಿ ದಿನ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಲಕ್ಷಾಂತರ ಜನರು ಶುಕ್ರವಾರ ದಿಢೀರನೆ ಮೆಟ್ರೋ ಸ್ಥಗಿತವಾಗಿದ್ದರಿಂದ ಜನರು ಬಸ್, ಆಟೋ, ಕ್ಯಾಬ್, ಕಾರ್, ಬೈಕ್ ಮೂಲಕ ತಮ್ಮ-ತಮ್ಮ ಸ್ಥಳಕ್ಕೆ ತೆರಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಹಲವು ಕಡೆಗಳಲ್ಲಿ ಫುಲ್ ಟ್ರಾಫಿಕ್ ಜಾಮ್ ಉಲ್ಬಣಿಸಿದೆ.

ಏಕಾಏಕಿ 'ನಮ್ಮ ಮೆಟ್ರೋ' ಬಂದ್ ನಡೆಯುತ್ತಿರುವುದೇಕೆ?
ಕೈಗಾರಿಕಾ ಪಡೆ, ಮೆಟ್ರೋ ಸಿಬ್ಬಂದಿ ಜಗಳ ಅತಿರೇಕಕ್ಕೆ ಹೋಗುತ್ತಿದ್ದಂತೆಯೇ ಹಲಸೂರು ಪೊಲೀಸ್ ಠಾಣೆಯಲ್ಲಿ ಕೆಎಸ್ ಐಎಸ್ಎಫ್ ಸಿಬ್ಬಂದಿ, ನಮ್ಮ ಮೆಟ್ರೋ ಸಿಬ್ಬಂದಿಗಳ ವಿರುದ್ಧ ದೂರು ನೀಡಿದ್ದರು. ದೂರಿನನ್ವಯ ರಾಕೇಶ್ ಸೇರಿದಂತೆ ಹಲವು ಬಿಎಂಆರ್ ಸಿ ಎಲ್ ಸಿಬ್ಬಂದಿಗಳನ್ನು ಪೊಲೀಸರು ಬಂಧಿಸಿದ್ದು, ಇವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ. ಈ ಕಾರಣಕ್ಕಾಗಿಯೇ ಮೆಟ್ರೋ ಬಂದ್ ಆಗಿದೆ.

'ನಮ್ಮ ಮೆಟ್ರೋ' ಸಿಬ್ಬಂದಿ ವಿರುದ್ಧ ಎಸ್ಮಾ ಜಾರಿಗೆ ಸರ್ಕಾರ ನಿರ್ಧಾರ?
'ನಮ್ಮ ಮೆಟ್ರೋ' ಸಿಬ್ಬಂದಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಶುಕ್ರವಾರ (ಜುಲೈ 7) ಮೆಟ್ರೋ ರೈಲು ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡು ಲಕ್ಷಾಂತರ ಪ್ರಯಾಣಿಕರಿಗೆ ತೊಂದರೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಅಗತ್ಯ ಸೇವಾ ನಿರ್ವಹಣಾ ಕಾಯ್ದೆ (ಏಸ್ಮಾ) ಜಾರಿಗೊಳಿಸಲು ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
-
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
High Speed Rail: ಬೆಂಗಳೂರು ಸೇರಿ 3 ಹೈಸ್ಪೀಡ್ ರೈಲು ಕಾರಿಡಾರ್ ಡಿಪಿಆರ್ 2027ಕ್ಕೆ ಪೂರ್ಣ, ವಿವರ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ












Click it and Unblock the Notifications