Namma Metro: ಜನವರಿ 26ರಿಂದ ಮೂರು ದಿನ ಈ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ಇಲ್ಲ
ಮೂರು ದಿನಗಳ ಕಾಲ ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ನಡುವೆ ಮೆಟ್ರೋ ರೈಲು ಸೇವೆ ಲಭ್ಯವಿರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಬುಧವಾರ ಮಾಹಿತ ನೀಡಿದೆ.
ನಾಗಸಂದ್ರ ಮತ್ತು ಮಾದಾವರ ನಡುವೆ ಮಾರ್ಗ ವಿಸ್ತರಣೆಗೆ ಸಂಬಂಧಿಸಿದ ವಿದ್ಯುತ್ ಕಾಮಗಾರಿಗಳಿಗೆ ಅನುಕೂಲವಾಗುವಂತೆ ಜನವರಿ 26, 27 ಮತ್ತು 28 ರಂದು ಸಿಲ್ಕ್ ಇನ್ಸ್ಟಿಟ್ಯೂಟ್ ಮತ್ತು ಪೀಣ್ಯ ಇಂಡಸ್ಟ್ರಿ ನಡುವೆ ಮಾತ್ರ ಹಸಿರು ಮಾರ್ಗದ ರೈಲುಗಳು ಸಂಚರಿಸಲಿವೆ ಎಂದು ಬಿಎಂಆರ್ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ನಡುವಿನ ರೈಲು ಸಂಚಾರ ಜನವರಿ 29 ರಂದು ಬೆಳಿಗ್ಗೆ 5 ಗಂಟೆಗೆ ಮತ್ತೆ ಆರಂಭವಾಗಲಿದೆ ಎಂದು ಹೇಳಿದೆ. ಜಾಲಹಳ್ಳಿ, ದಾಸರಹಳ್ಳಿ ಮತ್ತು ನಾಗಸಂದ್ರ ನಿಲ್ದಾಣಗಳಿಂದ/ನಿಲ್ದಾಣಗಳಿಗೆ ತೆರಳುವ ಪ್ರಯಾಣಿಕರಿಗೆ ಮೂರು ದಿನ ತೊಂದರೆಯಾಗಲಿದೆ.
ನೇರಳೆ ಮಾರ್ಗವಾದ ಚಲ್ಲಘಟ್ಟದಿಂದ ವೈಟ್ಫೀಲ್ಡ್ (ಕಾಡುಗೋಡಿ) ವರೆಗೆ ರೈಲು ಕಾರ್ಯಾಚರಣೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಎಂದಿನಂತೆ ಈ ಮಾರ್ಗದಲ್ಲಿ ರೈಲುಗಳು ಚಲಿಸಲಿವೆ.
ಜನವರಿ 26ರಿಂದ 29ರವರೆಗೆ ಮೂರು ದಿನ ಪೀಣ್ಯ ಇಂಡಸ್ಟ್ರಿ ಮತ್ತು ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚಿನ ಜನ ಸಂದಣಿ ಉಂಟಾಗುವ ಸಾಧ್ಯತೆ ಇದ್ದು, ಪ್ರಯಾಣಿಕರು ವಿಳಂಬವಾಗುವುದನ್ನು ತಪ್ಪಿಸಲು ವಾಟ್ಸಾಪ್ ಅಥವಾ ನಮ್ಮ ಮೆಟ್ರೋ ಅಪ್ಲಿಕೇಶನ್ ಮೂಲಕ ಕ್ಯೂಆರ್ ಟಿಕೆಟ್ ಖರೀದಿಸುವಂತೆ ಮನವಿ ಮಾಡಿದೆ.
ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣದಲ್ಲಿ ಹೆಚ್ಚಿನ ಜನಸಂದಣಿಯನ್ನು ನಿರೀಕ್ಷಿಸಿ, ಬಿಎಂಆರ್ಸಿಎಲ್ ಇನ್ನೂ ಆರು ಟಿಕೆಟ್ ಕೌಂಟರ್ಗಳು, ಇನ್ನೂ ಐದು ಎಎಫ್ಸಿ (ಸ್ವಯಂಚಾಲಿತ ಶುಲ್ಕ ಸಂಗ್ರಹ) ಗೇಟ್ಗಳು ಮತ್ತು ಇಲ್ಲಿಯವರೆಗೆ ಮುಚ್ಚಲಾದ ಮತ್ತೊಂದು ಪ್ರವೇಶದ್ವಾರವನ್ನು ತೆರೆಯಲಿದೆ ಎಂದು ಬಿಎಂಆರ್ ಸಿಎಲ್ ಅಧಿಕಾರಿ ಹೇಳಿರುವುದಾಗಿ ಡಿಹೆಚ್ ವರದಿ ಮಾಡಿದೆ.
ಲಾಲ್ಬಾಗ್ ಪುಷ್ಪ ಪ್ರದರ್ಶನ
"ಲಾಲ್ಬಾಗ್ನಲ್ಲಿ ಪುಷ್ಪ ಪ್ರದರ್ಶನದ ಕಾರಣ ವಾರಾಂತ್ಯದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಸಾರ್ವಜನಿಕರಿಗೆ ತೊಂದರೆ ಕಡಿಮೆ ಮಾಡಲು ನಾವು ನಮ್ಮ ಕಾರ್ಯಾಚರಣೆಗಳನ್ನು ಅತ್ಯುತ್ತಮವಾಗಿಸುತ್ತೇವೆ" ಎಂದು ಅಧಿಕಾರಿಗಳು ಹೇಳಿದ್ದಾರೆ.
30.32-ಕಿಮೀ ಹಸಿರು ಮಾರ್ಗವು ಪ್ರಸ್ತುತ ದಕ್ಷಿಣದಲ್ಲಿ ಸಿಲ್ಕ್ ಇನ್ಸ್ಟಿಟ್ಯೂಟ್ನಿಂದ ಉತ್ತರದ ನಾಗಸಂದ್ರದವರೆಗೆ ಕಾರ್ಯಾಚರಣೆ ನಡೆಸುತ್ತಿದೆ. ಇದನ್ನು ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ (BIEC) ಬಳಿ ಮಾದಾವರಕ್ಕೆ 3.14 ಕಿಮೀ ವಿಸ್ತರಣೆಯಾಗಲಿದೆ. ವಿಸ್ತೃತ ಮಾರ್ಗವು ಮಂಜುನಾಥ ನಗರ, ಚಿಕ್ಕಬಿದರಕಲ್ಲು ಮತ್ತು ಮಾದವರದಲ್ಲಿ ನಿಲ್ದಾಣಗಳನ್ನು ಹೊಂದಿರುತ್ತದೆ.
ವಿಸ್ತೃತ ಮಾರ್ಗದ ಸಿವಿಲ್ ಕಾಮಗಾರಿ ಶೇ 99.07 ರಷ್ಟು ಪೂರ್ಣಗೊಂಡಿದೆ. ಕಾಮಗಾರಿಯ ವೇಗವನ್ನು ಗಮನಿಸಿದರೆ ನಾಗಸಂದ್ರ ಮತ್ತು ಮಾದಾವರ ನಡುವಿನ ಪ್ರಾಯೋಗಿಕ ಸಂಚಾರಕ್ಕೆ ಇನ್ನೂ ಕೆಲವು ತಿಂಗಳು ಬಾಕಿ ಇದೆ. ಜುಲೈ/ಆಗಸ್ಟ್ ವೇಳೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗುವ ಸಾಧ್ಯತೆ ಇದೆ.
-
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾಲುದಾರ ನವಿ ಯುಪಿಐ, ಫ್ಯಾನ್ಸ್ ಗಮನಿಸಿ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್











Click it and Unblock the Notifications