Namma Metro: ಪ್ರಯಾಣಿಕರಿಗೆ 1 ಮತ್ತು 3 ದಿನದ ಪಾಸ್ಗಳನ್ನು ಪರಿಚಯಿಸಿದ ನಮ್ಮ ಮೆಟ್ರೋ
ಬೆಂಗಳೂರು, ಮಾರ್ಚ್ 30: ಯುಗಾದಿ ಹಬ್ಬಕ್ಕೆ ಕೆಲವೇ ದಿನಗಳ ಮುನ್ನ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಸಿಹಿ ಸುದ್ದಿ ನೀಡಿದೆ.
ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ 1 ಹಾಗೂ 3 ದಿನದ ಪಾಸ್ ಅನ್ನು ಬಿಎಂಆರ್ಸಿಎಲ್ (BMRCL) ಪರಿಚಯಿಸುತ್ತಿದ್ದು, ಒಂದು ದಿನದ ಪಾಸ್ಗೆ 200 ರೂಪಾಯಿಯನ್ನು ನಿಗದಿಯಾಗಿದೆ. ಪಾಸ್ ಖರೀದಿಸಿದ ದಿನದಂದು ಪ್ರಯಾಣಿಕರು ಅನಿಯಮಿತವಾಗಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಬಹುದಾಗಿದೆ.
Finally, @cpronammametro to introduce 1-day (Rs 200) and 3-day (Rs 400) passes pic.twitter.com/YOlIA9ZWwK
— ChristinMathewPhilip (@ChristinMP_TOI) March 30, 2022
ಇನ್ನು ಮೂರು ದಿನದ ಪಾಸ್ಗೆ 400 ರೂಪಾಯಿ ನಿಗದಿಗೊಳಿಸಲಾಗಿದ್ದು, ಖರೀದಿ ದಿನದಿಂದ 3 ದಿನ ಅನಿಯಮಿತವಾಗಿ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಬಹುದು. ಪಾಸ್ ಮೊತ್ತದಲ್ಲಿ 50 ರೂ. ಹಿಂಪಡೆಯಲು ಅವಕಾಶವಿದೆ. ಈ ಕುರಿತು ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

1 ದಿನದ ಮತ್ತು 3 ದಿನದ ಪಾಸ್ಗಳು ಮೆಟ್ರೋ ನಿಲ್ದಾಣದ ಟಿಕೆಟ್ ಕೌಂಟರ್ಗಳಲ್ಲಿ ಲಭ್ಯವಿರುತ್ತದೆ. ಪ್ರಯಾಣಿಕರು 1 ದಿನದ ಅಥವಾ 3 ದಿನದ ಪ್ರಯಾಣವನ್ನು ಪೂರ್ಣಗೊಳಿಸಿದ ನಂತರ ಯಾವುದೇ ಗ್ರಾಹಕ ಸಂಪರ್ಕ ಕೇಂದ್ರಗಳಲ್ಲಿ ಸ್ಮಾರ್ಟ್ ಕಾರ್ಡ್ ಅನ್ನು ಉತ್ತಮ ಸ್ಥಿತಿಯಲ್ಲಿ ಹಿಂದಿರುಗಿಸಿದರೆ, ಪ್ರಯಾಣಿಕರು 50 ರೂ. ಮರುಪಾವತಿಸಬಹುದಾದ ಭದ್ರತಾ ಠೇವಣಿಯನ್ನು ಹಿಂಪಡೆಯಬಹುದು.
ಪ್ರಯಾಣಿಕರು ಆನ್ಲೈನ್ನಲ್ಲಿ ಅಂದರೆ ವೆಬ್ಸೈಟ್ ಅಥವಾ ಮೊಬೈಲ್ ಅಪ್ಲಿಕೇಶನ್ ಮೂಲಕ ರೀಚಾರ್ಜ್ ಮಾಡಿದ ಮೊತ್ತವನ್ನು ಸ್ಮಾರ್ಟ್ ಕಾರ್ಡ್ಗೆ 1 ಗಂಟೆಯ ನಂತರ ಮತ್ತು ರೀಚಾರ್ಜ್ ಮಾಡಿದ ದಿನಾಂಕದಿಂದ 7 ದಿನಗಳ ಒಳಗೆ ಎಎಫ್ಸಿ ಗೇಟ್ನಲ್ಲಿ ಟ್ಯಾಪ್ ಮಾಡುವ ಮೂಲಕ ಅಥವಾ ಕಾರ್ಡ್ ಟಾಪ್-ಅಪ್ ಟರ್ಮಿನಲ್ಗಳಲ್ಲಿ ಸಿಟಿಟಿ ರೀಚಾರ್ಜ್ ಮಾಡಿದ ದಿನಾಂಕದಿಂದ 15 ದಿನಗಳಲ್ಲಿ ನವೀಕರಿಸಬಹುದು.
ಆದಾಗ್ಯೂ, ಪ್ರಯಾಣಿಕರು ತಮ್ಮ ಸ್ಮಾರ್ಟ್ ಕಾರ್ಡ್ಗಳಲ್ಲಿ ಬ್ಯಾಲೆನ್ಸ್ ಮೊತ್ತವನ್ನು 15 ದಿನಗಳ ಒಳಗೆ ನವೀಕರಿಸಲು ಸಾಧ್ಯವಾಗದಿದ್ದರೆ. ಅಂತಹ ಕ್ಲೈಮ್ ಮಾಡದ ಮೊತ್ತವನ್ನು ರಿಚಾರ್ಜ್ ಮಾಡಿದ ದಿನಾಂಕದಿಂದ 30 ದಿನಗಳ ಒಳಗೆ ಅದೇ ಚಾನೆಲ್ ಮೂಲಕ ರಿಚಾರ್ಜ್ ಮಾಡಿದ ಮೊತ್ತದಿಂದ ಶೇ.2.5 ರದ್ದತಿ ಶುಲ್ಕವನ್ನು ಕಡಿತಗೊಳಿಸಿ ರೀಚಾರ್ಜ್ ಮೊತ್ತವನ್ನು ಮರುಪಾವತಿ ಮಾಡಲಾಗುವುದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications