Namma metro: ಸಂಪೂರ್ಣ 'ನೇರಳೆ ಮಾರ್ಗ' ಅ. 7ರಿಂದ ಸಾರ್ವಜನಿಕರಿಗೆ ಮುಕ್ತ, ವಿವರ ನೋಡಿ
ಬೆಂಗಳೂರು, ಅಕ್ಟೋಬರ್ 05: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೂರ್ವದಿಂದ ಪಶ್ಚಿಮದವರೆಗಿನ ಮೊದಲ ಐಟಿ ಕಾರಿಡಾರ್ ಸಂಪರ್ಕಿಸಿದ 'ನೇರಳೆ ಮಾರ್ಗ' (Namma Metro Purple line) ಸಂಪೂರ್ಣವಾಗಿ ಇದೇ ಅಕ್ಟೋಬರ್ 7ರಿಂದ ಉದ್ಘಾಟನೆಗೊಳ್ಳಲಿದೆ ಎಂದು ಬೆಂಗಳೂರು ರೈಲು ಮೆಟ್ರೋ ನಿಗಮ (BMRCL) ಗುರುವಾರ ತಿಳಿಸಿದೆ.
ನಮ್ಮ ಮೆಟ್ರೋ ಈ ನೇರಳೆ ಮಾರ್ಗವು ಚಲ್ಲಘಟ್ಟದಿಂದ ಆಡುಗೋಡಿ (ವೈಟ್ಫಿಲ್ಡ್) ವರೆಗೆ ಇದೆ. ಚಲ್ಲಘಟ್ಟ ವಿಸ್ತರಿಸಿದ ಮಾರ್ಗ ನಿರ್ಮಾಣ ಕಾರ್ಯ ಮತ್ತು ತಪ್ಪಿದ್ದ ಸಂಪರ್ಕ ಕೊಂಡಿ ಮಾರ್ಗದ ಕೆಲಸ ಪೂರ್ಣಗೊಂಡಿದೆ. ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (CMRC) ಇತ್ತೀಚೆಗಷ್ಟೇ ಬೈಯಪ್ಪನಹಳ್ಳಿ-ಕೆ.ಆರ್.ಪುರ ಮಾರ್ಗದಲ್ಲಿ ಮೆಟ್ರೋ ಓಡಿಸಲು ಅನುಮೋದನೆ ನೀಡಿದೆ.

ಇದೀಗ ಬೈಯಪ್ಪನಹಳ್ಳಿ-ಕೆಆರ್ ಪುರ ವರೆಗೆ 2.2 ಕಿಲೋ ಮೀಟರ್ ಉದ್ದದ ಮಾರ್ಗವು ಇದೇ ಅಕ್ಟೋಬರ್ 6ರಂದು ಲೋಕಾರ್ಪಣೆಗೊಳ್ಳಲಿದೆ. ಇದು ಆಗಿ ಒಂದು ದಿನದ ಬಳಿಕ ಅಂದರೆ ಅಕ್ಟೋಬರ್ 7ರಂದು ಸುಮಾರು 40 ಕಿಲೋ ಮೀಟರ್ ಉದ್ದದ್ದ ನೇರಳೆ ಮಾರ್ಗ ಸಂಪೂರ್ಣವಾಗಿ ವಾಣಿಜ್ಯ ಬಳಕೆಗೆ ಮುಕ್ತಗೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಹುದಿನಗಳ ಪ್ರಯಾಣಿಕರ ಕನಸು ನನಸು
ಇದೇ ವರ್ಷ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವೈಟ್ಫಿಲ್ಡ್ ನಿಂದ ಕೆಆರ್ ಪುರವರೆಗಿನ ಮಾರ್ಗವನ್ನು ಉದ್ಘಾಟಿಸಿದ್ದರು. ಲಕ್ಷಾಂತರ ಮಂದಿಗೆ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಅತ್ಯವಶಕ್ಯವಾಗಿತ್ತು. ಆದರೆ ಬೈಯಪ್ಪನಹಳ್ಳಿ ಮತ್ತು ಕೆಆರ್ ಪುರಂ ವರೆಗಿನ 2.2 ಕಿಲೋ ಮಿಟರ್ ಉದ್ದದ ಮಾರ್ಗ ನಿರ್ಮಾಣ ರೈಲ್ವೆ ಗ್ರಿಡರ್ ಹಾಗೂ ಇನ್ನಿತರ ಕಾರಣಗಳಿಂದ ವಿಳಂಬ ವಾಗಿತ್ತು.

ಇದರಿಂದಾಗಿ ಐಟಿ ಉದ್ಯೋಗಿಗಳು ಸೇರಿದಂತೆ ಸಾರ್ವಜನಿಕರು ವೈಟ್ಫಿಲ್ಡ್ಗೆ ತೆರಳಲು ಬಿಎಂಟಿಸಿಯ ಮೆಟ್ರೋ ಫಿಡರ್ ಬಸ್ ಅನ್ನು ಅವಲಂಬಿಸಿದ್ದರು. ಎಂಜಿ ರಸ್ತೆ, ಕೆಂಗೇರಿ ಭಾಗದಿಂದ ಸಂಚರಿಸುವವರು ಬೈಯಪ್ಪನಹಳ್ಳಿಗೆ ಇಳಿದು ಅಲ್ಲಿಂದ ಬಸ್ ಮೂಲಕ ಕೆ.ಆರ್ ಪುರಂ ಗೆ ತೆರಳಿ ಮತ್ತೆ ಅಲ್ಲಿಂದ ಮೆಟ್ರೋ ಮೂಲಕ ಕಾಡುಗೋಡಿ ತಲುಪಬೇಕಿತ್ತು.
ಆದರೆ ಅಕ್ಟೋಬರ್ 7ರಿಂದ ಈ ಸಮಸ್ಯೆಗೆ ಶಾಶ್ವತ ಮುಕ್ತಿ ದೊರೆಯಲಿದ್ದು, ಪ್ರಯಾಣಿಕರ ಬಹುದಿನಗಳ ಕನಸು ನನಸಾಗಲಿದೆ. ಈಗಾಗಲೇ ಮೆಟ್ರೋ ರೈಲು ಬದಲಾವಣೆ ಸ್ಥಳ (ಜಂಕ್ಷನ್) ಆಗಿರುವ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಸಾಮಾನ್ಯಕ್ಕಿಂತಲೂ ಹೆಚ್ಚು ಪ್ರಯಾಣಿಕರ ಆಗಮನವಾಗುತ್ತಿದೆ. ನೇರಳೆ ಮಾರ್ಗದಲ್ಲಿ ಓಡಾಡುವವರ ಸಂಖ್ಯೆ ಮೊದಲಿಗಿಂತಲೂ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications