Breaking: ನಮ್ಮ ಮೆಟ್ರೋ: ರೈಲಿನ ಅಡಿಗೆ ಹಾರಿ ಯುವಕ ಆತ್ಮಹತ್ಯೆ!, ಕೆಲಕಾಲ ಸಂಚಾರ ಸ್ಥಗಿತ
ನಮ್ಮ ಮೆಟ್ರೋದಲ್ಲಿ ಶುಕ್ರವಾರ ಡಿಸೆಂಬರ್ 05 ರಂದು ಮತ್ತೊಂದು ಅವಘಡ ಸಂಭವಿಸಿದೆ. ಬೆಂಗಳೂರಿನ ನಮ್ಮ ಮೆಟ್ರೋದ ಹಳಿಗಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರಿನ ನಮ್ಮ ಮೆಟ್ರೋದ ನೇರಳೆ ಮಾರ್ಗದ ಕೆಂಗೇರಿ ನಿಲ್ದಾಣದಲ್ಲಿ ಶುಕ್ರವಾರ ಯವಕನೊಬ್ಬ ಮೈಟ್ರೋ ರೈಲು ಬರುವಾಗ ಏಕಾಏಕಿ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇನ್ನು ಶುಕ್ರವಾರ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ವಿಜಯಪುರ ಮೂಲದ ಶಾಂತನಗೌಡ ಪಾಟೀಲ ಎಂದು ಗುರುತಿಸಲಾಗಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡರು ಎನ್ನುವ ವಿಷಯ ಇನ್ನಷ್ಟೇ ತಿಳಿಯಬೇಕಾಗಿದೆ. ಈ ವಿಚಾರದಲ್ಲಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದಿದ್ದಾರೆ.

ಯುವಕ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಈ ಭಾಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಾಸ ಆಗಿದೆ. ನೇರಳೆ ಮಾರ್ಗದ ಮೆಟ್ರೋ ರೈಲುಗಳು ಪ್ರಸ್ತುತ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮಾತ್ರ ಸಂಚರಿಸುತ್ತಿವೆ. ಮೈಸೂರು ರಸ್ತೆ ಮತ್ತು ಚಲಘಟ್ಟ ನಡುವಿನ ಸೇವೆಗಳು ಕೆಂಗೇರಿ ನಿಲ್ದಾಣದಲ್ಲಿ ಸಂಭವಿಸಿದ ಆತ್ಮಹತ್ಯೆ ಪ್ರಯತ್ನದ ಕಾರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ. ಸ್ಥಿತಿ ಸುಧಾರಿಸಿದ ನಂತರ ಸೇವೆಗಳು ಪುನರಾರಂಭವಾಗುತ್ತವೆ. ಉಂಟಾದ ತೊಂದರೆಗೆ ವಿಷಾದಿಸುತ್ತೇವೆ ಎಂದು ಮೆಟ್ರೋ ಸಂದೇಶ ಹಂಚಿಕೊಂಡಿತ್ತು.
ಮೆಟ್ರೋ ಮಾಹಿತಿ
ಜ್ಞಾನಭಾರತಿ ಮತ್ತು ಚಲ್ಲಘಟ್ಟ ನಡುವಿನ ಸೇವೆಗಳು ಇಂದು ಬೆಳಿಗ್ಗೆ 9.40 ಗಂಟೆಯಿಂದ ಸಂಪೂರ್ಣವಾಗಿ ಪುನರ್ ಆರಂಭಿಸಲಾಗಿದೆ. ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲುಗಳು ಈಗ ಎಂದಿನಂತೆ ಸಂಚರಿಸುತ್ತಿವೆ ಎಂದು ಸಾರ್ವಜನಿಕ ಸಂಪರ್ಕಧಿಕಾರಿ ಅಪ್ಡೇಟ್ಸ್ ನೀಡಿದ್ದಾರೆ.
Man from Vijayapura jumps on metro track in Kengeri metro station Bengaluru, dies
— Karnataka Portfolio (@karnatakaportf) December 5, 2025
A 38-year-old man died after allegedly falling onto the tracks at the Kengeri metro station in southwestern Bengaluru on Friday morning, officials said.After the incident, trains on the Purple Line… pic.twitter.com/rU53EbxwLK
ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಆಗ್ರಹ: ಇನ್ನು ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜನ ಆಗ್ರಹಿಸುತ್ತಲ್ಲೇ ಇದ್ದಾರೆ. ಈ ನಿಟ್ಟಿನಲ್ಲಿ ಮೆಟ್ರೋ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದ್ದಾರಾದರೂ, ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಂಡಿಲ್ಲ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications