Namma Metro: ನಾಗಸಂದ್ರ-ಮಾಧವರ ನಡುವೆ ಮೆಟ್ರೋ ಕಾರ್ಯಾಚರಣೆ ಆರಂಭ ಯಾವಾಗ?-ಇಲ್ಲಿದೆ ಮಹತ್ವದ ಅಪ್ಡೇಟ್
Bengaluru Metro: ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದ್ದು, ಇದನ್ನು ಗಮನದಲ್ಲಿಟ್ಟುಕೊಂಡ ಬಿಎಂಆರ್ಸಿಎಲ್ ಈಗಾಗಲೇ ಹಲವೆಡೆ ಮೆಟ್ರೋ ವಿಸ್ತರಣೆಗೆ ಮುಂದಾಗಿದೆ. ಅಲ್ಲದೆ ಕಾಮಗಾರಿಯನ್ನು ಕೂಡ ಕೈಗೆತ್ತಿಕೊಂಡಿದೆ. ಹಾಗೆಯೇ ನಾಗಸಂದ್ರ ಮತ್ತು ಮಾಧವರ ನಡುವಿನ ಮೆಟ್ರೋ ಕಾರ್ಯಾಚರಣೆ ಬಗ್ಗೆ ಮಹತ್ವದ ಮಾಹಿತಿಯೊಂದನ್ನು ಹೊರಹಾಕಿದೆ.
ನಾಗಸಂದ್ರ ಮತ್ತು ಮಾಧವರ ನಡುವಿನ ಮೆಟ್ರೋ 2024ರ ಜುಲೈ ಅಂತ್ಯದ ವೇಳೆಗೆ ಕಾರ್ಯಾರಂಭ ಮಾಡುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಸಿರುವ ಮಾರ್ಗದಲ್ಲಿ 3.7 ಕಿಲೋಮೀಟರ್ ವಿಸ್ತರಣೆಯು 2019ರಿಂದ ವಿಳಂಬವಾಗಿದೆ. ಹಾಗಾದರೆ ಇದಕ್ಕೆ ಕಾರಣ ಏನು ಎಂದು ಇಲ್ಲಿ ತಿಳಿಯೋಣ ಬನ್ನಿ.

ವೆಚ್ಚ ಎಷ್ಟು ಕೋಟಿ?: ಪ್ರಕಾರ, ಈ ವಿಸ್ತರಣೆ ಮಾರ್ಗವು ಮೂರು ನಿಲ್ದಾಣಗಳನ್ನು ಹೊಂದಿದೆ. ಮಂಜುನಾಥ್ ನಗರ, ಚಿಕ್ಕಬಿದರಕಲ್ಲು ಮತ್ತು ಮಾಧವರ ಮಾರ್ಗಗಳನ್ನು ಹೊಂದಿದ್ದು, ಇದಕ್ಕೆ ₹298 ಕೋಟಿ ವೆಚ್ಚವಾಗಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ. ಬಿಎಂಆರ್ಸಿಎಲ್ನ ಹಿರಿಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, "ಈಗಾಗಲೇ ಟ್ರ್ಯಾಕ್ ಕಾಮಗಾರಿ ಪೂರ್ಣಗೊಂಡಿದ್ದು, ಮುಂದಿನ ತಿಂಗಳು ಪ್ರಾಯೋಗಿಕ ಪರಿಶೀಲನೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಜುಲೈ ಅಂತ್ಯದ ವೇಳೆಗೆ ಮೆಟ್ರೋ ಕಾರ್ಯಾಚರಣೆ: ಇನ್ನು ಜುಲೈ ಅಂತ್ಯದ ವೇಳೆಗೆ ಈ ಮಾರ್ಗದಲ್ಲಿ ಮೆಟ್ರೋ ಕಾರ್ಯಾಚರಣೆಯನ್ನು ಪ್ರಾರಂಭಿಸಲು ನಾವು ಯೋಜಿಸುತ್ತಿದ್ದೇವೆ. ಈ ಹೊಸ ವಿಸ್ತರಣೆಯು ಪ್ರಯಾಣಿಕರಿಗೆ ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ (BIEC) ಅನ್ನು ಸಂಪರ್ಕಿಸಲು ಸಹಾಯ ಆದಂತಾಗುತ್ತದೆ.
ಈ ವರ್ಷದ ಫೆಬ್ರವರಿಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, 2025ರ ವೇಳೆಗೆ ನಮ್ಮ ಮೆಟ್ರೋ ನಿರ್ಮಾಣದ 2ನೇ ಹಂತವನ್ನು ಪೂರ್ಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಹೇಳಿದ್ದರು. ಅಲ್ಲದೆ ವಿಮಾನ ನಿಲ್ದಾಣ ಮಾರ್ಗದ ಮೆಟ್ರೋ ಮಾರ್ಗದ ನಿರ್ಮಾಣವನ್ನು ವೇಗಗೊಳಿಸಲು BMRCL ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
"ಬೆಂಗಳೂರು ಮೆಟ್ರೋ ಜಾಗತಿಗುಕ ದರ್ಜೆಯನ್ನು ಹೊಂದಿದ್ದು, ಇದು ನವದೆಹಲಿ ಮೆಟ್ರೋಗಿಂತ ಉತ್ತಮವಾಗಿದೆ. ಅಲ್ಲದೆ, ಮೆಟ್ರೋ ಬೆಂಗಳೂರಿನ ಭವಿಷ್ಯವಾಗಿದೆ," ಎಂದು ಹೇಳಿದ್ದರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
BMTC: 3 ನಿಲ್ದಾಣಗಳಿಂದ ಮೆಟ್ರೋ ಫೀಡರ್ ಬಸ್ ಸೇವೆ ಆರಂಭ: ಸಂಚಾರ ಮಾರ್ಗ, ಸಮಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications