Namma Metro Work: ಬೆಂಗಳೂರಿನಲ್ಲಿ ಮುಚ್ಚಲಿದೆ ಪ್ರಮುಖ ಫ್ಲೈಓವರ್- ಹೆಚ್ಚಲಿದೆ ಸಂಚಾರ ದಟ್ಟಣೆ; ಮಾಹಿತಿ, ವಿವರ
ಬೆಂಗಳೂರು, ಅಕ್ಟೋಬರ್ 24: ಬೆಂಗಳೂರು ಮಹಾನಗರದ ಟ್ರಾಫಿಕ್ ಸಮಸ್ಯೆ ಇನ್ನಷ್ಟು ಉಲ್ಬಣಗೊಳ್ಳಲಿದೆ. ಮೆಟ್ರೋ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ಫ್ಲೈಓವರ್ವೊಂದನ್ನು ತಾತ್ಕಾಲಿಕವಾಗಿ ಮುಚ್ಚಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಫ್ಲೈಓವರ್ ಅನ್ನು ನಾಲ್ಕು ತಿಂಗಳುಗಳ ಕಾಲ ಮುಚ್ಚಲಾಗುವುದು ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೆಟ್ರೋ ನಿರ್ಮಾಣಕ್ಕೆ ಅನುಕೂಲ ಮಾಡಿಕೊಡಲು ಸಿಲ್ಕ್ ಬೋರ್ಡ್ ಜಂಕ್ಷನ್ ಫ್ಲೈಓವರ್ನ ಒಂದು ಬದಿಯನ್ನು ಭಾಗಶಃ ಮುಚ್ಚಲಾಗುವುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಮಾಹಿತಿ ನೀಡಿದೆ.
ನಮ್ಮ ಮೆಟ್ರೋದ ಹೇಳಿಕೆಯ ಪ್ರಕಾರ, ಮಡಿವಾಳ ಬಳಿಯ ಫ್ಲೈಓವರ್ನ ಅಪ್ ಮತ್ತು ಡೌನ್ ರಾಂಪ್ನ ಮುಖ್ಯ ಕ್ಯಾರೇಜ್ವೇಯ ಎರಡೂ ಬದಿಗಳನ್ನು ಮುಚ್ಚಲಾಗುವುದು. 2.5 ಮೀಟರ್ ಅಗಲದ ರಸ್ತೆಯನ್ನು ನಾಲ್ಕು ತಿಂಗಳ ಕಾಲ ಬ್ಯಾರಿಕೇಡ್ ಮಾಡಲಾಗುವುದು.

ನಮ್ಮ ಮೆಟ್ರೋ ಪ್ರಸ್ತುತ ದೇಶದ ಎರಡನೇ ಅತಿದೊಡ್ಡ ಮೆಟ್ರೋ ಜಾಲವಾಗಿದೆ. ಒಟ್ಟು 72.2 ಕಿಮೀ ಉದ್ದವನ್ನು ಇದು ವ್ಯಾಪಿಸಿದೆ. ಹೆಚ್ಚುವರಿಯಾಗಿ, 97.84 ಕಿ.ಮೀ ಉದ್ದದ ನಿರ್ಮಾಣ ಕಾಮಗಾರಿಗಳು ನಡೆಯುತ್ತಿವೆ.
ಅಸ್ತಿತ್ವದಲ್ಲಿರುವ ಮೆಟ್ರೊ ನೆಟ್ವರ್ಕ್ ಎರಡು ಮಾರ್ಗಗಳನ್ನು ಒಳಗೊಂಡಿದೆ. ಅವುಗಳೆಂದರೆ ಹಸಿರು ಮತ್ತು ನೇರಳೆ ಮಾರ್ಗಗಳು. ನೇರಳೆ ಲೈನ್ 42.17 ಕಿಮೀ ದೂರವನ್ನು ಒಳಗೊಂಡಿದೆ. ಇದು 37 ನಿಲ್ದಾಣಗಳನ್ನು ಸಂಪರ್ಕಿಸುತ್ತದೆ. ಆದರೆ, ಹಸಿರು ಮಾರ್ಗವು 3 ಕಿಮೀ ವ್ಯಾಪಿಸಿದೆ. ಇದು 29 ನಿಲ್ದಾಣಗಳನ್ನು ಒಳಗೊಂಡಿದೆ.
ಹಳದಿ, ಗುಲಾಬಿ ಮತ್ತು ನೀಲಿ ಮಾರ್ಗಗಳ ನಿರ್ಮಾಣವು ಪ್ರಸ್ತುತ ನಡೆಯುತ್ತಿದೆ. ಇದು ಮೆಟ್ರೋ ಜಾಲವನ್ನು 97.84 ಕಿಮೀ ವಿಸ್ತರಿಸಲಿದೆ.
ಟ್ರಾಫಿಕ್ ಸಮಸ್ಯೆಗೆ ಡಿಕೆಶಿ ಪರಿಹಾರ
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಟ್ರಾಫಿಕ್ ದಟ್ಟಣೆಯನ್ನು ನಿವಾರಿಸಲು 190 ಕಿಮೀ ಉದ್ದದ ಸುರಂಗದ ಯೋಜನೆಯನ್ನು ಘೋಷಿಸಿದ್ದಾರೆ.
45 ದಿನಗಳಲ್ಲಿ ರಾಜ್ಯ ಸರ್ಕಾರವು ಯೋಜನೆಗೆ ಸಾರ್ವಜನಿಕ ಟೆಂಡರ್ಗಳನ್ನು ಆಹ್ವಾನಿಸುತ್ತದೆ ಎಂದು ತಿಳಿಸಿದ್ದಾರೆ.
ಸುರಂಗ ರಸ್ತೆಯ ಯೋಜನೆಯ ಸಂಪೂರ್ಣ ಅಧ್ಯಯನವನ್ನು ಕಂಪನಿಗಳು ನಡೆಸಲಿವೆ. ಸುರಂಗ ಮಾರ್ಗದ ಲೇನ್ಗಳ ಸಂಖ್ಯೆ ನಾಲ್ಕು ಅಥವಾ ಆರಾಗಿರುತ್ತದೆ ಎಂದು ಡಿಕೆಶಿ ಹೇಳಿದ್ದಾರೆ.
ಹೆಚ್ಚುವರಿಯಾಗಿ, ಗುಂಡಿಗಳ ಸಮಸ್ಯೆಯನ್ನು ಪರಿಹರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಂಜಿನಿಯರ್ಗಳು ಮತ್ತು ಸಂಚಾರ ಪೊಲೀಸರ ಸಹಯೋಗದ ಅಗತ್ಯವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒತ್ತಿ ಹೇಳಿದರು.
ಮಳೆಗಾಲದಲ್ಲಿ ಗುಂಡಿಗಳು ಹೆಚ್ಚಾಗಿ ಬೀಳುತ್ತವೆ. ಆ ಸಂದರ್ಭದಲ್ಲಿ ತಕ್ಷಣ ದುರಸ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications