Namma Metro: ಹಳದಿ ಮಾರ್ಗದಲ್ಲಿ ಪ್ರಯೋಗಿಕ ಸಂಚಾರ ಆರಂಭ; ತೇಜಸ್ವಿ ಸೂರ್ಯ ಹೇಳಿದ್ದೇನು?
ನಮ್ಮ ಮೆಟ್ರೋದ ಬಹುನಿರೀಕ್ಷಿತ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಆರಂಭದ ಮಹತ್ವದ ಅಪ್ಡೇಟ್ ಸಿಕ್ಕಿದೆ. ಇಂದು ಹಳದಿ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋ ರೈಲು ತನ್ನ ಮೊದಲ ಪ್ರಾಯೋಗಿಕ ಸಂಚಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
ಆರ್ ವಿ ರಸ್ತೆಯಿಂದ ಬೊಮ್ಮಸಂದ್ರ ನಡುವೆ 18.8 ಕಿಮೀ ಹಳದಿ ಮಾರ್ಗದಲ್ಲಿ ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ರೈಲು ಯಶಸ್ವಿಯಾಗಿ ಸಂಚರಿಸಿದೆ.

ಪ್ರಾಯೋಗಿಕ ಸಂಚಾರದ ವಿಡಿಯೋವನ್ನು ಹಂಚಿಕೊಂಡಿರುವ ಸಂಸದ ತೇಜಸ್ವಿ ಸೂರ್ಯ, ಬಿಎಂಆರ್ ಸಿಎಲ್ ಹಳದಿ ಮಾರ್ಗದಲ್ಲಿ (RV ರಸ್ತೆಯಿಂದ ಬೊಮ್ಮಸಂದ್ರಕ್ಕೆ) ತನ್ನ ಮೊದಲ ಪ್ರಯೋಗವನ್ನು ಇಂದು ಪೂರ್ಣಗೊಳಿಸಿದೆ.
ಮೋದಿ 3.0 ರ ಮೊದಲ ವರ್ಷದಲ್ಲಿ ಈ 18.8 ಕಿಮೀ ಲೈನ್ನಲ್ಲಿ ಸಂಚಾರ ಪ್ರಾರಂಭಿಸುವುದು ನನ್ನ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ. ರೈಲುಗಳನ್ನು ನಿರ್ವಹಿಸಲು ಟಿಟಾಘರ್ನಿಂದ ರೋಲಿಂಗ್ ಸ್ಟಾಕ್ ಮತ್ತು ಟಿಸಿಎಂಎಸ್ ಸಾಫ್ಟ್ವೇರ್ನ ಆರಂಭಿಕ ವಿತರಣೆಗೆ ಒತ್ತಾಯಿಸುತ್ತೇನೆ.
ಯಾವುದೇ ಸಂಭಾವ್ಯ ಅಡಚಣೆಗಳನ್ನು ಪರಿಹರಿಸಲು ಶೀಘ್ರದಲ್ಲೇ ಮಧ್ಯಸ್ಥಗಾರರ ಸಭೆಯನ್ನು ಕರೆಯಲಾಗುವುದು ಎಂದು ಹೇಳಿದ್ದಾರೆ.
BMRCL completed its first trial run on the Yellow Line (RV Road to Bommasandra) today.
— Tejasvi Surya (@Tejasvi_Surya) June 13, 2024
Commencing the ops on this 18.8 km line is one of my top priorities in the first year of Modi 3.0. Will push for the early delivery of rolling stock from Titagarh as well as the TCMS software… pic.twitter.com/ZhicZ15pTE
ಈ ವರ್ಷವೇ ಸಂಚಾರ ಆರಂಭ
ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರದ ಬಗ್ಗೆ ಸಾಕಷ್ಟು ನಿರೀಕ್ಷೆ ಹೊಂದಲಾಗಿದೆ. ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವಲ್ಲಿ ಈ ಮೆಟ್ರೋ ಮಾರ್ಗ ಸಾಕಷ್ಟು ಕೊಡುಗೆ ನೀಡುವ ಸಾಧ್ಯತೆ ಇದೆ.
ಅದರಲ್ಲೂ ಬೆಂಗಳೂರಿನ ಪ್ರಮುಖ ಐಟಿ ಕಂಪನಿಗಳ ಉದ್ಯೋಗಿಗಳಿಗೆ ಹಳದಿ ಮಾರ್ಗವು ಸಾಕಷ್ಟು ಪ್ರಯೋಜನಕಾರಿಯಾಗಲಿದೆ. ಅಂದುಕೊಂಡಂತೆ ಆಗಿದ್ದರೆ ಈ ವೇಳೆಗಾಗಲೇ ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗಬೇಕಿತ್ತು. ಆದರೆ ಹಲವು ಕಾರಣಗಳಿಂದ ಈ ವರ್ಷಾಂತ್ಯದಲ್ಲಿ ಕಾರ್ಯಾರಂಭ ಮಾಡಲು ಸಜ್ಜಾಗಿದೆ.
ಚೀನಾದಿಂದ ಮೊದಲ ಸೆಟ್ ಚಾಲಕ ರಹಿತ ರೈಲು ಬೆಂಗಳೂರಿಗೆ ಬಂದಿದ್ದು, ಇನ್ನೂ ಹಲವು ಸೆಟ್ಗಳು ಬರಬೇಕಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications