Namma Metro: ಹಳದಿ ಮಾರ್ಗದಲ್ಲಿ ಪ್ರಯೋಗಿಕ ಸಂಚಾರ ಆರಂಭ; ತೇಜಸ್ವಿ ಸೂರ್ಯ ಹೇಳಿದ್ದೇನು?
ನಮ್ಮ ಮೆಟ್ರೋದ ಬಹುನಿರೀಕ್ಷಿತ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಆರಂಭದ ಮಹತ್ವದ ಅಪ್ಡೇಟ್ ಸಿಕ್ಕಿದೆ. ಇಂದು ಹಳದಿ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋ ರೈಲು ತನ್ನ ಮೊದಲ ಪ್ರಾಯೋಗಿಕ ಸಂಚಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
ಆರ್ ವಿ ರಸ್ತೆಯಿಂದ ಬೊಮ್ಮಸಂದ್ರ ನಡುವೆ 18.8 ಕಿಮೀ ಹಳದಿ ಮಾರ್ಗದಲ್ಲಿ ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ರೈಲು ಯಶಸ್ವಿಯಾಗಿ ಸಂಚರಿಸಿದೆ.

ಪ್ರಾಯೋಗಿಕ ಸಂಚಾರದ ವಿಡಿಯೋವನ್ನು ಹಂಚಿಕೊಂಡಿರುವ ಸಂಸದ ತೇಜಸ್ವಿ ಸೂರ್ಯ, ಬಿಎಂಆರ್ ಸಿಎಲ್ ಹಳದಿ ಮಾರ್ಗದಲ್ಲಿ (RV ರಸ್ತೆಯಿಂದ ಬೊಮ್ಮಸಂದ್ರಕ್ಕೆ) ತನ್ನ ಮೊದಲ ಪ್ರಯೋಗವನ್ನು ಇಂದು ಪೂರ್ಣಗೊಳಿಸಿದೆ.
ಮೋದಿ 3.0 ರ ಮೊದಲ ವರ್ಷದಲ್ಲಿ ಈ 18.8 ಕಿಮೀ ಲೈನ್ನಲ್ಲಿ ಸಂಚಾರ ಪ್ರಾರಂಭಿಸುವುದು ನನ್ನ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ. ರೈಲುಗಳನ್ನು ನಿರ್ವಹಿಸಲು ಟಿಟಾಘರ್ನಿಂದ ರೋಲಿಂಗ್ ಸ್ಟಾಕ್ ಮತ್ತು ಟಿಸಿಎಂಎಸ್ ಸಾಫ್ಟ್ವೇರ್ನ ಆರಂಭಿಕ ವಿತರಣೆಗೆ ಒತ್ತಾಯಿಸುತ್ತೇನೆ.
ಯಾವುದೇ ಸಂಭಾವ್ಯ ಅಡಚಣೆಗಳನ್ನು ಪರಿಹರಿಸಲು ಶೀಘ್ರದಲ್ಲೇ ಮಧ್ಯಸ್ಥಗಾರರ ಸಭೆಯನ್ನು ಕರೆಯಲಾಗುವುದು ಎಂದು ಹೇಳಿದ್ದಾರೆ.
BMRCL completed its first trial run on the Yellow Line (RV Road to Bommasandra) today.
— Tejasvi Surya (@Tejasvi_Surya) June 13, 2024
Commencing the ops on this 18.8 km line is one of my top priorities in the first year of Modi 3.0. Will push for the early delivery of rolling stock from Titagarh as well as the TCMS software… pic.twitter.com/ZhicZ15pTE
ಈ ವರ್ಷವೇ ಸಂಚಾರ ಆರಂಭ
ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರದ ಬಗ್ಗೆ ಸಾಕಷ್ಟು ನಿರೀಕ್ಷೆ ಹೊಂದಲಾಗಿದೆ. ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವಲ್ಲಿ ಈ ಮೆಟ್ರೋ ಮಾರ್ಗ ಸಾಕಷ್ಟು ಕೊಡುಗೆ ನೀಡುವ ಸಾಧ್ಯತೆ ಇದೆ.
ಅದರಲ್ಲೂ ಬೆಂಗಳೂರಿನ ಪ್ರಮುಖ ಐಟಿ ಕಂಪನಿಗಳ ಉದ್ಯೋಗಿಗಳಿಗೆ ಹಳದಿ ಮಾರ್ಗವು ಸಾಕಷ್ಟು ಪ್ರಯೋಜನಕಾರಿಯಾಗಲಿದೆ. ಅಂದುಕೊಂಡಂತೆ ಆಗಿದ್ದರೆ ಈ ವೇಳೆಗಾಗಲೇ ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗಬೇಕಿತ್ತು. ಆದರೆ ಹಲವು ಕಾರಣಗಳಿಂದ ಈ ವರ್ಷಾಂತ್ಯದಲ್ಲಿ ಕಾರ್ಯಾರಂಭ ಮಾಡಲು ಸಜ್ಜಾಗಿದೆ.
ಚೀನಾದಿಂದ ಮೊದಲ ಸೆಟ್ ಚಾಲಕ ರಹಿತ ರೈಲು ಬೆಂಗಳೂರಿಗೆ ಬಂದಿದ್ದು, ಇನ್ನೂ ಹಲವು ಸೆಟ್ಗಳು ಬರಬೇಕಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಏ.5ರಂದು ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತ, ಕಾರಣವೇನು? -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ












Click it and Unblock the Notifications