Namma yatri: ನಮ್ಮ ಯಾತ್ರಿಯಿಂದ ನಿರ್ಗಮಿಸಿದ ಆಟೋ ಚಾಲಕರ ಒಕ್ಕೂಟ, ಯಾಕೆ ಹಾಗೂ ಇದಕ್ಕೆ ಆ್ಯಪ್ನ ಸ್ಪಷ್ಟನೆ ಏನು?
ಬೆಂಗಳೂರು, ಡಿಸೆಂಬರ್, 13: ಇತ್ತೀಚೆಗಷ್ಟೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಮ್ಮ ಯಾತ್ರಿ ಆ್ಯಪ್ ತುಂಬಾ ಸದ್ದು ಮಾಡಿತ್ತು. ಹಾಗೆಯೇ ಆಟೋ ಚಾಲಕರಿಗೆ ನೆರವಾಗುವಂತೆ ಆ್ಯಪ್ ಭರವಸೆ ನೀಡಿದ್ದು, ಪ್ರಯಾಣಿಕರಿಗೆ ಕಡಿಮೆ ದರದಲ್ಲಿ ಸೇವೆ ಒದಗಿಸುವುದೇ ಈ ಆ್ಯಪ್ನ ಉದ್ದೇಶವಾಗಿದೆ. ಆದ್ದರಿಂದ ದಿನದಿಂದ ದಿನಕ್ಕೆ ಇದನ್ನು ಬಳಕೆ ಮಾಡುವವರ ಸಂಖ್ಯೆಯೂ ಹೆಚ್ಚಾಗಿತ್ತು. ಆದರೆ ಇದೀಗ ಇದರಿಂದ ನಿರ್ಗಮಿಸಲು ಅದೇ ಆಟೋ ಚಾಲಕರ ಸಂಘ ನಿರ್ಧಾರ ಮಾಡಿದೆ ಎನ್ನಲಾಗಿದ್ದು, ಇದಕ್ಕೆ ಇದೇ ಆ್ಯಪ್ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದೆ.
Setting the record straight. Here's our official statement: pic.twitter.com/vTl45Nic9K
— Namma Yatri (@nammayatri) December 11, 2023
ನಗರದ ಪ್ರಮುಖ ಆಟೋ ರಿಕ್ಷಾ ಒಕ್ಕೂಟಗಳಲ್ಲಿ ಒಂದಾದ ಆಟೋ ರಿಕ್ಷಾ ಚಾಲಕರ ಸಂಘ ಒಎನ್ಡಿಸಿ ಬೆಂಬಲಿತ 'ರೈಡ್' ಅಪ್ಲಿಕೇಶನ್ 'ನಮ್ಮ ಯಾತ್ರಿ'ಯಿಂದ ನಿರ್ಗಮಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೆಲ ಚಾಲಕರು ಇನ್ನೂ ಆ್ಯಪ್ ಬಳಸುವುದಾಗಿ ಹೇಳಿರುವುದರಿಂದ 'ನಮ್ಮ ಯಾತ್ರಿ' ಕಾರ್ಯಾಚರಣೆಯು ಬೆಂಗಳೂರಿನಲ್ಲಿ ಸಂಪೂರ್ಣವಾಗಿ ಸ್ಥಗಿತ ಆಗಿಲ್ಲ. ಬೆಂಗಳೂರಿನಲ್ಲಿ ಆಟೋ ಚಾಲಕರಿಂದ ತೊಂದರೆ ಎದುರಿಸುತ್ತಿದ್ದ ಪ್ರಯಾಣಿಕರೂ 'ಯಾತ್ರಿ' ಮುಂದುವರೆದಿರುವುದನ್ನು ತಿಳಿದು ನಿಟ್ಟುಸಿರು ಬಿಟ್ಟಿದ್ದಾರೆ ಎನ್ನಲಾಗಿದೆ.

ಅಪ್ಲಿಕೇಶನ್ ಚಾಲನೆಯ ಸಮಯದಲ್ಲಿ ಆಟೋ ಚಾಲಕರ ಸಂಘ ಪ್ರಮುಖ ಪಾತ್ರ ವಹಿಸಿತ್ತು. ಆದರೆ ಸಂಘದ ಬೇಡಿಕೆಗಳನ್ನು ಈಡೇರಿಸುವಲ್ಲಿ 'ನಮ್ಮ ಯಾತ್ರಿ' ಇದೀಗ ವಿಫಲ ಆಗಿದೆ ಎಂದು ತಿಳಿದುಬಂದಿದೆ. ಪ್ರಾರಂಭದಿಂದಲೂ ಎಆರ್ಡಿಯು ನಮ್ಮ ಯಾತ್ರಿ ಆ್ಯಪ್ನ ಭಾಗವಾಗಿತ್ತು. ಆ್ಯಪ್ ಬಿಡುಗಡೆ ಆಗುವ ಮೊದಲೇ ಒಟ್ಟು 10,000 ಚಾಲಕರು ಈ ವ್ಯವಸ್ಥೆಗೆ ಕೈಜೋಡಿಸಿದ್ದರು.
ನಂತರ ಇನ್ನೂ 50,000 ಚಾಲಕರು ನೋಂದಣಿ ಮಾಡಿಕೊಂಡರು. ಆದರೆ 'ನಮ್ಮ ಯಾತ್ರಿ' ನಂತರದ ದಿನಗಳಲ್ಲಿ ನಮ್ಮನ್ನು ನಿರ್ಲಕ್ಷಿಸಿತು ಎಂದು ಆಟೋ ಚಾಲಕರ ಸಂಘದ ಪ್ರತಿನಿಧಿಯೊಬ್ಬರು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಪ್ರತಿ ಸವಾರಿಗೆ ಇಂತಿಷ್ಟು ಎಂದು ಕಮಿಷನ್ ಸಂಗ್ರಹಿಸುವ ಓಲಾ, ಉಬರ್ ಮತ್ತು ರ್ಯಾಪಿಡೊದಂತಹ ಅಗ್ರಿಗೇಟರ್ಗಳಿಗೆ 'ನಮ್ಮ ಯಾತ್ರಿ' ಪರ್ಯಾಯ ಎಂದು ಹೇಳಲಾಗುತ್ತಿತ್ತು.
ಆ್ಯಪ್ ನಡೆಸುವ ಸಂಸ್ಥೆಗೆ ಯಾವುದೇ ಕಮಿಷನ್ ನೀಡದೇ ಚಾಲಕರು ಸವಾರಿ ಬಾಡಿಗೆಯ ಸಂಪೂರ್ಣ ಹಣ ಪಡೆಯುವ ವ್ಯವಸ್ಥೆಯು ಈ ಆ್ಯಪ್ ಜನಪ್ರಿಯಗೊಳ್ಳಲು ಪ್ರಮುಖ ಕಾರಣ ಆಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ 'ನಮ್ಮ ಯಾತ್ರಿ' ಸಹ ಚಾಲಕರಿಗೆ ಚಂದಾದಾರಿಕೆ ಶುಲ್ಕ ವಿಧಿಸಲು ಆರಂಭಿಸಿತು. ಅಲ್ಲಿ ಅವರು ದಿನಕ್ಕೆ 25 ರೂಪಾಯಿ ಮತ್ತು ಪ್ರತಿ ಸವಾರಿಗೆ 3.50 ರೂಪಾಯಿ ಪಾವತಿಸಬೇಕೆನ್ನುವ ಷರತ್ತು ಹಾಕಲಾಗಿತ್ತು. ಈ ಹಣವನ್ನು ಆ್ಯಪ್ ಸುಧಾರಣೆಗೆ ಬಳಸಲಾಗುವುದು ಎನ್ನುವ ಮಾಹಿತಿ ನೀಡಲಾಗಿತ್ತು.
ಈ ಹಣ ಹೊರತುಪಡಿಸಿದರೆ ಇತರ ಯಾವುದೇ ರೀತಿಯಲ್ಲಿ ನಾವು ಚಾಲಕರಿಂದ ಅಥವಾ ಗ್ರಾಹಕರಿಂದ ಯಾವುದೇ ಹಣವನ್ನು ಸಂಗ್ರಹಿಸುತ್ತಿರಲಿಲ್ಲ. ನಮ್ಮ ಯಾತ್ರಿ ಫಿನ್ ಟೆಕ್ ಬ್ರಾಂಡ್ ಜುಸ್ಪೇ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಒಡೆತನದಲ್ಲಿದೆ. ಈ ವರ್ಷದ ಅಕ್ಟೋಬರ್ವರೆಗೆ ಬೆಂಗಳೂರಿನ 'ನಮ್ಮ ಯಾತ್ರಿ' ಆ್ಯಪ್ ತನ್ನ ಚಾಲಕರಿಗೆ 189 ಕೋಟಿ ರೂಪಾಯಿ ಆದಾಯ ಗಳಿಸಲು ನೆರವಾಗಿದೆ. ಶೂನ್ಯ ಕಮಿಷನ್ ಮಾದರಿಯ ಮೂಲಕ ಆಟೋ ಚಾಲಕರಿಗೆ ಸುಮಾರು 19 ಕೋಟಿ ರೂ. ಉಳಿತಾಯ ಆಗಿದೆ ಎಂದು 'ನಮ್ಮ ಯಾತ್ರಿ' ತಿಳಿಸಿದೆ. ತನ್ನ ವಿರುದ್ಧ ಕೇಳಿಬಂದ ಆಕ್ಷೇಪಗಳಿಗೆ 'ನಮ್ಮ ಯಾತ್ರಿ' ಆ್ಯಪ್ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದೆ. ನಮ್ಮ ಕಾರ್ಯನಿರ್ವಹಣೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ತಿಳಿಸಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
2026ರ 'ಹೊಸ ಆಧಾರ್ ಆ್ಯಪ್'ನಲ್ಲಿರುವ ಟಾಪ್ 8 ಫೀಚರ್ಸ್ ಏನು ಗೊತ್ತಾ? ಇಲ್ಲಿದೆ ಮಾಹಿತಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications