ಬೆಂಗಳೂರಿನಲ್ಲಿ ಜ.31ರಂದು ಕರಾವಳಿ ಜನರ 'ನಮ್ಮೂರ ಹಬ್ಬ'

ಬೆಂಗಳೂರು, ಜ.28 : ಉದ್ಯಾನ ನಗರಿ ಬೆಂಗಳೂರಿನಲ್ಲಿ ಕರಾವಳಿಯ ಖಾದ್ಯ, ಕ್ರೀಡೆ ಹಾಗೂ ಸಾಂಸ್ಕೃತಿಕ ಉತ್ಸವ 'ನಮ್ಮೂರ ಹಬ್ಬ 2015'ಕ್ಕೆ ವೇದಿಕೆ ಸಿದ್ಧವಾಗಿದೆ. ಜನವರಿ 31 ಮತ್ತು ಫೆಬ್ರವರಿ 1ರಂದು ನಮ್ಮೂರ ಹಬ್ಬ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರು ಹಬ್ಬವನ್ನು ಉದ್ಘಾಟಿಸಲಿದ್ದಾರೆ.

ಜನವರಿ 31 ಶನಿವಾರ ಮತ್ತು ಫೆಬ್ರವರಿ 1 ಭಾನುವಾರ ಜಯನಗರ 5ನೇ ಬ್ಲಾಕ್‌ನಲ್ಲಿರುವ ಚಂದ್ರಗುಪ್ತ ಮೌರ್ಯ ಕ್ರೀಡಾಂಗಣ (ಶಾಲಿನಿ ಗ್ರೌಂಡ್) ನಲ್ಲಿ 'ನಮ್ಮೂರ ಹಬ್ಬ 2015' ನಡೆಯಲಿದೆ. ನಮ್ಮೂರ ಹಬ್ಬದಲ್ಲಿ ಕರಾವಳಿಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅಭಿನಂದನ ಸಾಂಸ್ಕೃತಿಕ ಟ್ರಸ್ಟ್ ಮನವಿ ಮಾಡಿದೆ.

Nammora Habba

ಜನವರಿ 31ರಂದು ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ನಮ್ಮೂರ ಹಬ್ಬ 2015'ಅನ್ನು ಉದ್ಘಾಟಿಸಲಿದ್ದಾರೆ. ಇದು ಕರಾವಳಿ ಭಾಗರ ಜನರ ಹಬ್ಬ. ಬೆಂಗಳೂರಿನಲ್ಲಿ ಸುಮಾರು 15 ಲಕ್ಷ ಕರಾವಳಿ ಜನರು ನೆಲೆಸಿದ್ದಾರೆ. ಯುವ ಪೀಳಿಗೆಗೆ ಕರಾವಳಿ ಸಂಸ್ಕೃತಿ ಪರಿಚಯಿಸಲು ಹಬ್ಬ ನಡೆಸಲಾಗುತ್ತದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. [ಮಂಗಳೂರಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ]

'ನಮ್ಮೂರ ಹಬ್ಬದ ಅಂಗವಾಗಿ ಫೆಬ್ರವರಿ 1 ರಂದು ಕ್ರೀಡಾ ಮತ್ತು ಮನೋರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. 50 ಮೀಟರ್ ಓಟ, ಒಂಟಿ ಕಾಲಿನ ಓಟ, ಚಿತ್ರಕಲೆ, ವಾಲಿಬಾಲ್ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿವೆ. [ನಮ್ಮೂರ ಹಬ್ಬ ಫೇಸ್ ಬುಕ್ ಪುಟ]

ಪ್ರಶಸ್ತಿ ವಿತರಣೆ : ನಮ್ಮೂರ ಹಬ್ಬವನ್ನು ಆಯೋಜಿಸುವ ಅಭಿನಂದನ ಟ್ರಸ್ಟ್ 'ಕಿರೀಟ' ಪ್ರಶಸ್ತಿಯನ್ನು ನೀಡುತ್ತದೆ. ಈ ಬಾರಿ ವೈಯಕ್ತಿಕ ಸಾಧನೆಯ ವಿಭಾಗದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಮತ್ತು ಕಬಡ್ಡಿ ವಿಶ್ವ ಕಪ್ ಗೆದ್ದು ತಂದ ಭಾರತೀಯ ಕಬಡ್ಡಿ ತಂಡದ ನಾಯಕಿ ಮಮತಾ ಪೂಜಾರಿಯವರಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಸಂಘ ಸಂಸ್ಥೆಗಳ ವಿಭಾಗದಲ್ಲಿ 40 ವರ್ಷಗಳಿಂದ ಯಕ್ಷಗಾನದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮೋಹನ್ ಹೊಳ್ಳ ಅವರ ನೇತೃತ್ವದ 'ಯಕ್ಷ ದೇಗುಲ' ಸಂಸ್ಥೆಗೆ ಹಾಗು ವಿದೇಶದಲ್ಲಿ ಕನ್ನಡಪರ ವಾತಾವರಣ ನಿರ್ಮಿಸಿಕೊಂಡು ನಾಡು ನುಡಿಗಾಗಿ ದುಡಿಯುತ್ತಿರುವ 'ಅಬುದಾಬಿ ಕನ್ನಡ ಸಂಘ'ಕ್ಕೆ ಪ್ರಶಸ್ತಿಯನ್ನು ನೀಡಲಾಗುತ್ತದೆ. ಹಬ್ಬದ ಬಗ್ಗೆ ಹೆಚ್ಚಿನ ಮಾಹಿತಿಗೆ 9886046878, 9844022692 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+