ಕನ್ನಡಿಗರನ್ನ ಗೂಂಡಾ ರೀತಿ ಬಿಂಬಿಸಿದ್ರೆ ಸುಮ್ಮನಿರಲ್ಲ: ಕರವೇ ನಾರಾಯಣಗೌಡ ಖಡಕ್ ಎಚ್ಚರಿಕೆ
ಕನ್ನಡಿಗನ ಮೇಲೆ ವಿಂಗ್ ಕಮಾಂಡರ್ ಮಾರಣಾಂತಿಕ ಹಲ್ಲೆ ಪ್ರಕರಣವೂ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಅಧಿಕಾರಿಯ ಅಸಲಿ ಮುಖವಾಡ ಕಳಚಿದ್ದು, ಬೀದಿ ಗಲಾಟೆಯನ್ನು ಭಾಷಾ ವಿವಾದ ಮಾಡಲು ಹೊರಟಿದ್ದ ಬಣ್ಣವೂ ಬಯಲಾಗಿದೆ. ವಿಂಗ್ ಕಮಾಂಡರ್ ಬಂಧನಕ್ಕೆ ಎಲ್ಲೆಡೆ ಒತ್ತಾಯ ಕೇಳಿಬಂದಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಕಾನೂನು ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಕೂಡ ಈ ವಿಚಾರವಾಗಿ ಪರಭಾಷಿಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕನ್ನಡದ ನೆಲದಲ್ಲಿ ಕನ್ನಡಿಗರ ಮೇಲೆ ಹಲ್ಲೆ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ನಿನ್ನೆ ನಡೆದಿರುವ ಪ್ರಕರಣ ಇದಕ್ಕೆ ತಾಜಾ ಉದಾಹರಣೆ. ರಸ್ತೆಯಲ್ಲಿ ಆದ ಗಲಾಟೆಯನ್ನು ಭಾಷಾ ಗಲಾಟೆಯೆಂದು ಬಿಂಬಿಸಿ ಸೇನೆಯ ಪ್ರಭಾವ ಬಳಸಿ, ಕನ್ನಡಿಗರ ಮೇಲೆಯೇ ದೂರು ದಾಖಲಿಸಲಾಯಿತು. ಇದು ಮಾತ್ರವಲ್ಲ, ಈ ಬಗ್ಗೆ ವಿಂಗ್ ಕಮಾಂಡರ್ ಎಂದು ಹೇಳಿಕೊಂಡ ವ್ಯಕ್ತಿ ಸುಳ್ಳುಗಳನ್ನು ಹೇಳಿ ವಿಡಿಯೋ ಮಾಡಿ ಕನ್ನಡಿಗರನ್ನು ದುಷ್ಕರ್ಮಿಗಳು, ರೌಡಿಗಳು ಎಂದು ಬಿಂಬಿಸುವ ಪ್ರಯತ್ನ ಮಾಡಲಾಯಿತು ಎಂದು ಕಿಡಿಕಾರಿದ್ದಾರೆ.

ನಿನ್ನೆ ಬೆಳಿಗ್ಗೆಯಿಂದಲೂ ಇಂಗ್ಲಿಷ್, ಹಿಂದಿ ಚಾನಲ್ಗಳು ಕನ್ನಡಿಗರ ಮೇಲೆ ಯುದ್ಧವನ್ನೇ ಸಾರಿದ್ದವು. ಕನ್ನಡಿಗರನ್ನು ಥಗ್ಸ್ ಎಂದು ಕರೆಯಲಾಯಿತು. ಕನ್ನಡಿಗರು ಗೂಂಡಾಗಳು, ಅಸಹಿಷ್ಣುಗಳು ಎಂದು ಬಿಂಬಿಸಲಾಯಿತು. ಕೊನೆಗೆ ವಿಂಗ್ ಕಮಾಂಡರ್ ಮಾಡಿದ ದೌರ್ಜನ್ಯದ ವಿಡಿಯೋಗಳು ಸಾಲು ಸಾಲಾಗಿ ಹೊರಬಂದ ಮೇಲೆ ಎಲ್ಲವೂ ಬಾಯಿಮುಚ್ಚಿಕೊಂಡು ಕುಳಿತವು. ಈ ನಾಚಿಗೆಗೆಟ್ಟ ದೇಶದ್ರೋಹಿ ಮಾಧ್ಯಮಗಳಿಗೆ ಕನ್ನಡಿಗನ ಮೇಲೆ ನಡೆದ ಹಲ್ಲೆ ಕಣ್ಣಿಗೆ ಕಾಣಲೇ ಇಲ್ಲ. ಅದರ ಕುರಿತು ಕಾರ್ಯಕ್ರಮಗಳನ್ನು ಮಾಡಲೇ ಇಲ್ಲ ಎಂದು ದೂರಿದ್ದಾರೆ.
ನಿನ್ನೆ ಆ ಹುಡುಗನನ್ನು ಪೊಲೀಸರು ಬಂಧಿಸಿದಾಗಿನಿಂದಲೂ ಬ್ಯಾಟರಾಯನಪುರ ವ್ಯಾಪ್ತಿಯ ಕವರೇ ಪದಾಧಿಕಾರಿಗಳು ಪೋಲೀಸ್ ಠಾಣೆಯಲ್ಲೇ ಇದ್ದು ಆ ಹುಡುಗನಿಗೆ ಸಹಕಾರ ನೀಡಿದ್ದಾರೆ. ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಜಾವಗಲ್, ಕರವೇ ಕಾರ್ಯಕರ್ತ ದೇವರಾಜ್ ರಾತ್ರಿ 2 ಗಂಟೆಯವರೆಗೆ ಅಲ್ಲೇ ಇದ್ದು, ವಿಂಗ್ ಕಮಾಂಡರ್ ಮೇಲೆ ಎಫ್ಐಆರ್ ಮಾಡುವಂತೆ ಹೋರಾಟ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಬೆಳಿಗ್ಗೆ ನಮ್ಮ ರಾಜ್ಯ ಮಹಿಳಾ ಘಟಕದ ಗೌರವಾಧ್ಯಕ್ಷರಾದ ಅಶ್ವಿನಿ ಗೌಡ, ಪದ್ಮನಾಭನಗರ ಕ್ಷೇತ್ರ ಘಟಕದ ಅಧ್ಯಕ್ಷ ಮನುಗೌಡ ಮತ್ತು ಹಲವಾರು ಕಾರ್ಯಕರ್ತರು ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿ, ಹಲ್ಲೆ ನಡೆಸಿದ ವ್ಯಕ್ತಿಯ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ. ಆ ಹುಡುಗನಿಗೆ ಬೇಕಾದ ಎಲ್ಲ ಕಾನೂನು ಸಹಕಾರವನ್ನೂ ಸಹ ಕರವೇ ನೀಡಲಿದೆ. ಬೀದಿ ಜಗಳವನ್ನು ಭಾಷಾ ಸಮಸ್ಯೆ ಎಂಬಂತೆ ಬಿಂಬಿಸಿ ಸಮಾಜದ ಸ್ವಾಸ್ತ್ಯ ಕದಡಲು ಯತ್ನಿಸಿರುವ ಕುರಿತು ಪೊಲೀಸರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದಿದ್ದಾರೆ.
ಕನ್ನಡದ ಯುವಕನ ಮೇಲೆ ಕನ್ನಡದ ನೆಲದಲ್ಲೇ ಹಲ್ಲೆ ನಡೆಸುವ ದುಸ್ಸಾಹಸಕ್ಕೆ ಮುಂದಾಗುವ ವ್ಯಕ್ತಿ ಯಾರೇ ಆದರೂ ಕಾನೂನಿನ ಪ್ರಕಾರ ಸೂಕ್ತ ಕ್ರಮಕ್ಕೆ ಒತ್ತಾಯಿಸುತ್ತೇನೆ. ಈಗಾಗಲೇ ನಾನು ಇನ್ಸ್ಪೆಕ್ಟರ್ ಜೊತೆ ಮಾತಾಡಿದ್ದು, ಕನ್ನಡದ ಹುಡುಗನಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವ ಭರವಸೆ ನೀಡಿದ್ದಾರೆ. ಕನ್ನಡಿಗರ ಮೇಲೆ ಇದೆ ರೀತಿ ದೌರ್ಜನ್ಯಗಳು ನಡೆದರೆ, ಕನ್ನಡಿಗರನ್ನು ಗೂಂಡಾಗಳು ಎಂಬಂತೆ ಬಿಂಬಿಸಲು ಯಾರಾದರೂ ಯತ್ನಿಸಿದರೆ, ನಾವು ಇನ್ನು ಮುಂದೆ ಸುಮ್ಮನೆ ಇರುವುದಿಲ್ಲ ಎಂದು ನಾರಾಯಣ ಗೌಡ ಎಚ್ಚರಿಕೆ ನೀಡಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications