ಬೆಂಗಳೂರಿನಲ್ಲಿ ಸ್ತನ ಕ್ಯಾನ್ಸರ್ ತಪಾಸಣಾ ಶಿಬಿರ
ಬೆಂಗಳೂರು, ಅ.13: ಹೃದಯ ಆರೋಗ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ನಾರಾಯಣ ಹೆಲ್ತ್ ಕೇರ್ ಇದೀಗ ಸ್ತನ ಕ್ಯಾನ್ಸರ್ ವಿರುದ್ಧ ಹೋರಾಟಕ್ಕೆ ಸಿದ್ಧವಾಗಿದೆ. ಅಕ್ಟೋಬರ್ 15ರಿಂದ 31ರವರೆಗೆ ಸ್ತನ ಕ್ಯಾನ್ಸರ್ ಪರೀಕ್ಷಾ ಶಿಬಿರ ಏರ್ಪಡಿಸಿದೆ.
ಹೆಣ್ಣು ಮಕ್ಕಳನ್ನು ಕಾಡಿ ಅವರ ಜೀವಕ್ಕೆ ಕಂಟಕ ತರುವ ಸ್ತನ ಕ್ಯಾನ್ಸರ್ಗೆ ಮುಕ್ತಿ ಕಾಣಿಸಲು ಶಿಬಿರ ಏರ್ಪಡಿಸಲಾಗಿದೆ. ನಗರದ ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ರೋಗ ತಡೆಗೆ ಮುಂಜಾಗೃತಾ ಕ್ರಮ ಅವಶ್ಯ. ಇಲ್ಲಿ ಎಲ್ಲರೂ ಮುಕ್ತವಾಗಿ ಪರೀಕ್ಷೆ ಮಾಡಿಸಿಕೊಳ್ಳಬಹುದು ಎಂದು ಸಂಸ್ಥೆ ತಿಳಿಸಿದೆ.[ಹಿರಿಯ ನಾಗರಿಕರಿಗೆ ನಾರಾಯಣ ಹೆಲ್ತ್ ಕಾರ್ಡ್ ವಿತರಣೆ]

2012ರಲ್ಲಿ ಪ್ರಪಂಚದಾದ್ಯಂತ 70 ಸಾವಿರಕ್ಕೂ ಅಧಿಕ ಮಹಿಳೆಯರು ಈ ಮಾರಕ ರೋಗಕ್ಕೆ ಬಲಿಯಾಗಿದ್ದರು. ಭಾರತದ 28 ಮಹಿಳೆಯರಲ್ಲಿ ಒಬ್ಬರಿಗೆ ಸ್ತನ ಕ್ಯಾನ್ಸರ್ ಸಾಧ್ಯತೆಯಿದೆ. ಅಲ್ಲದೇ ನಗರ ಪ್ರದೇಶದಲ್ಲಿ ವಾಸಿಸುವ 22 ಮಹಿಳೆಯರಲ್ಲಿ ಒಬ್ಬರಿಗೆ ರೋಗ ಕಾಣಿಸಿಕೊಳ್ಳಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ಹೇಳಿದೆ.[ಬೆಂಗಳೂರು, ಭಾರತದ ನೂತನ ಸ್ತನ ಕ್ಯಾನ್ಸರ್ ರಾಜಧಾನಿ!]
ಇಳಿ ವಯಸ್ಸಿನ ಮಹಿಳೆಯರನ್ನು ಪೀಡಿಸುವ ರೋಗಕ್ಕೆ ಅನೇಕ ಮುಂಜಾಗೃತಾ ಕ್ರಮಗಳು ಅಗತ್ಯ. ಜತೆಗೆ ಇಂಥ ತಪಾಸಣೆಗಳು ರೋಗವನ್ನು ಪ್ರಾಥಮಿಕ ಹಂತದಲ್ಲೇ ಪತ್ತೆ ಮಾಡಲು ನೆರವಾಗುತ್ತವೆ. ಇತ್ತೀಚೆಗೆ 30 ರಿಂದ 50 ವರ್ಷದ ನಡುವಿನ ಮಹಿಳೆಯರಲ್ಲೂ ರೋಗ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. mm
ನಗರದ ಮುಜುಂದಾರ್ ಕ್ಯಾನ್ಸರ್ ಕೇಂದ್ರದಲ್ಲಿ ಶಿಬಿರ ಆಯೋಜನೆ ಮಾಡಲಾಗಿದೆ. ಸ್ತನ ಗಡ್ಡೆ ಪರೀಕ್ಷೆ ಮತ್ತಿತರ ಕ್ಯಾನ್ಸರ್ ಸಂಬಂಧಿ ತಪಾಸಣೆಗಳನ್ನು ನಡೆಸಲಾಗುವುದು. ಹೆಚ್ಚಿನ ಮಾಹಿತಿಗೆ 080-67730096ನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ...
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications