ಕ್ಯಾನ್ಸರ್ ಗುಣಮುಖರಿಗೆ ನಾರಾಯಣ ಹೆಲ್ತ್ ಸಿಟಿ ನಮನ
ಬೆಂಗಳೂರು, ಫೆಬ್ರವರಿ 04: ಕ್ಯಾನ್ಸರ್ ರೋಗದಿಂದ ಗುಣಮುಖರಾಗಿ ಬದುಕುಳಿದವರ ಧೈರ್ಯ ಹಾಗೂ ಮಾನಸಿಕ ಸ್ಥೈರ್ಯವನ್ನು ಗೌರವಿಸುತ್ತಾ ನಾರಾಯಣ ಹೆಲ್ತ್ ಸಿಟಿ ಇಂದು ನಗರದಲ್ಲಿ 60ಕ್ಕೂ ಜನರನ್ನು ಗೌರವಿಸಿತು.
ಕಾರ್ಯಕ್ರಮದಲ್ಲಿ ನಾರಾಯಣ ಹೆಲ್ತ್ ಸಿಟಿಯ ವೈದ್ಯರು ಮತ್ತು ಕ್ಯಾನ್ಸರ್ ರೋಗದ ವಿರುದ್ಧ ಯಶಸ್ವಿಯಾಗಿ ಹೋರಾಡಿ ಸಂಪೂರ್ಣವಾಗಿ ಗುಣಮುಖರಾದ ಮಕ್ಕಳು ಹಾಗೂ ವಯಸ್ಕರು ಪಾಲ್ಗೊಂಡಿದ್ದರು.
ಈ ಸಂವಾದದಲ್ಲಿ 60ಕ್ಕೂ ಅಧಿಕ ಕ್ಯಾನ್ಸರ್ ರೋಗಿಗಳು ಹಾಗೂ ಅವರ ಕುಟುಂಬದ ಸದಸ್ಯರು ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಜನಪ್ರಿಯ ನಟಿ ಹರ್ಷಿಕಾ ಪೂಣಚ್ಚ ಅವರು "ಸಮಗ್ರ ಕ್ಯಾನ್ಸರ್ ತಪಾಸಣಾ ಪ್ಯಾಕೇಜ್' ಅನ್ನು ಬಿಡುಗಡೆ ಮಾಡಿದರು.

ಕ್ಯಾನ್ಸರ್ ರೋಗದ ಚಿಕಿತ್ಸೆಗೆ ಒಳಗಾಗುತ್ತಿರುವ ರೋಗಿಗಳಲ್ಲಿ ಜೀವನೋತ್ಸಾಹವನ್ನು ಮೂಡಿಸುವ ಗುರಿಯನ್ನು ಹೊಂದಿದ್ದ ಈ ಕಾರ್ಯಕ್ರಮದಲ್ಲಿ ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಯಶಸ್ವಿಯಾಗಿ ಚೇತರಿಸಿಕೊಂಡ ರೋಗಿಗಳು ತಮ್ಮ ಅನುಭವವನ್ನು ಹಂಚಿಕೊಂಡರು.
Today is #WorldCancerDay2018
— MMerMorgan (@MMountainMMer) February 4, 2018
Cancer changed our lives forever on March 1, 2016.
My partner was diagnosed with Chronic Lymphocytic Leukaemia.
No one knows what the future holds, but we won’t let cancer take over our world. pic.twitter.com/Dzqy22fmsT
'ಈ ಕಾರ್ಯಕ್ರಮದ ಭಾಗಿಯಾಗಲು ನನಗೆ ಹೆಮ್ಮೆಯಾಗಿದೆ. ಕ್ಯಾನ್ಸರ್ ರೋಗದ ವಿರುದ್ಧ ಹೋರಾಟ ನಡೆಸಲು ಚಿಕಿತ್ಸೆ ಅಷ್ಟೇ ಅಲ್ಲ, ಧೈರ್ಯವೂ ಅಗತ್ಯ. ವಾಸ್ತವವಾಗಿ, ಕ್ಯಾನ್ಸರ್ ವಿರುದ್ಧ ಯಶಸ್ವಿಯಾಗಿ ಹೋರಾಡಿ ಗೆದ್ದಿರುವ ನೀವು ಎಲ್ಲರೂ ನಮ್ಮೆಲ್ಲರ ನಡುವಿನ ನಾಯಕರು' ಎಂದು ನಟಿ ಹರ್ಷಿಕಾ ಪೂಣಚ್ಚ ಹೇಳಿದರು. ಇವರ ಸಂಬಂಧಿಯೊಬ್ಬರು ಕ್ಯಾನ್ಸರ್ ಗೆ ತುತ್ತಾಗಿದ್ದರು.
ಸಂವಾದವನ್ನು ಹೊರತುಪಡಿಸಿ ಕಾರ್ಯಕ್ರಮದಲ್ಲಿ ನಗೆ ಕಾರ್ಯಕ್ರಮ, ಮ್ಯಾಜಿಕ್ ಶೋ, ಕ್ಯಾರಿಕೇಚರ್ ಆರ್ಟ್, ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆ ನಡೆಯಿತು.

ಕ್ಯಾನ್ಸರ್ ಒಂದು ಗಂಭೀರ ಸ್ವರೂಪದ ಕಾಯಿಲೆ, ಹೆಚ್ಚಿನ ಸಾವುಗಳಿಗೆ ಕಾರಣವಾಗಲಿದೆ. ಅನೇಕ ರೀತಿಯ ಕ್ಯಾನ್ಸರ್ ರೋಗಗಳಿವೆ. ಇದರಲ್ಲಿ ಚರ್ಮದ ಕ್ಯಾನ್ಸರ್, ಬ್ಲಡ್ ಕ್ಯಾನ್ಸರ್, ಗಂಟಲು ಕ್ಯಾನ್ಸರ್, ಶ್ವಾಸಕೋಸದ ಕ್ಯಾನ್ಸರ್ ಸೇರಿವೆ.
Today is #WorldCancerDay. Here are some ways to reduce your #cancer risk. Let's beat cancer! https://t.co/tWK9hULKYd pic.twitter.com/nRWTXXysJn
— WHO (@WHO) February 3, 2018
ಈ ಪ್ರಕಾರದ ಕ್ಯಾನ್ಸರ್ನಿಂದ ಬಳಲುತ್ತಿರುವ ರೋಗಿಗಳು ಅಗತ್ಯ, ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಕ್ಯಾನ್ಸರ್ ಕುರಿತು ನಕಾರಾತ್ಮಕ ಅಭಿಪ್ರಾಯಗಳೂ ಬದುಕಿನ ಮೇಲೆ ಭರವಸೆ ಕಳೆದುಕೊಳ್ಳಲು ಕಾರಣವಾಗಲಿದೆ.. ಕ್ಯಾನ್ಸರ್ ಗೆ ತುತ್ತಾದ ಜನರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಆಗಬೇಕಿರುವುದು ಅಗತ್ಯ.
ನಾರಾಯಣ ಹೆಲ್ತ್ ಸಿಟಿ: ನಾರಾಯಣ ಹೆಲ್ತ್ ಸಿಟಿ ಬೆಂಗಳೂರಿನ ಬೊಮ್ಮಸಂದ್ರದಲ್ಲಿದೆ. ಇಲ್ಲಿ ನಾರಾಯಣ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಕ್ ಸೈನ್ಸ್ (ಎನ್ಐಸಿಎಸ್), ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ಗಳು ಹೃದ್ರೋಗ ಮತ್ತು ಹೃದ್ರೋಗ ಶಸ್ತ್ರಚಿಕಿತ್ಸೆಗೆ ಪೂರಕವಾಗಿ ನಡೆಸಲಾಗುತ್ತಿದೆ. ಇಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಆರೈಕೆ ಮಾಡುವ ಮಜುಂದಾರ್ ಶಾ ಮೆಡಿಕಲ್ ಸೆಂಟರ್ ಕೂಡಾ ಇದ್ದು, ಭಾರತದ ಅತಿದೊಡ್ಡ ಬೋನ್ ಮಾರೊ ಕಸಿ ಘಟಕವು ಕೂಡಾ ಇಲ್ಲಿಯೇ ಇದೆ. ಎನ್ಎಚ್ ಹೆಲ್ತ್ ಸಿಟಿಯಲ್ಲಿ ಸ್ಟೆಮ್ ಸೆಲ್ ಬ್ಯಾಂಕ್ ಕೂಡಾ ಇದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications