ಶಿವಾಜಿನಗರದಲ್ಲಿ ನಾರಾಯಣ ಹೃದಯಾಲಯದ ಆಸ್ಪತ್ರೆ ಸ್ಥಾಪನೆ
ಬೆಂಗಳೂರು, ಸೆಪ್ಟೆಂಬರ್ 16 : ನಾರಾಯಣ ಹೃದಯಾಲಯದ 100 ಹಾಸಿಗೆಗಳ ಆಸ್ಪತ್ರೆ ಬೆಂಗಳೂರಿನ ಶಿವಾಜಿನಗರದಲ್ಲಿ ಸ್ಥಾಪನೆಯಾಗಲಿದೆ. ಈಗಾಗಲೇ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಬಿಬಿಎಂಪಿ ಕಟ್ಟಡ ನಿರ್ಮಾಣಕ್ಕೆ ಸುಮಾರು 12 ಕೋಟಿ ರೂ. ವೆಚ್ಚ ಮಾಡಿದೆ.
ಶುಕ್ರವಾರ ನಾರಾಯಣ ಹೃದಯಾಲಯದ ಸಂಸ್ಥಾಪಕ ಅಧ್ಯಕ್ಷ ಡಾ. ದೇವಿಶೆಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.[ಗೋಣಿಕೊಪ್ಪ ಆಸ್ಪತ್ರೆಯಲ್ಲಿ ಧೂಳು ಹಿಡಿದ ಎಕ್ಸ್ ರೇ ಯಂತ್ರ]

ಈ ಭೇಟಿಯ ಬಳಿಕ ಮಾತನಾಡಿದ ಸಚಿವ ರೋಷನ್ ಬೇಗ್ ಅವರು, 'ಬಡವರಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ಒದಗಿಸಲು ನಾರಾಯಣ ಹೃದಯಾಲಯದ ಜೊತೆಗೂಡಿ ಶಿವಾಜಿನಗರದಲ್ಲಿ ಆಸ್ಪತ್ರೆಯನ್ನು ಆರಂಭಿಸಲಾಗುತ್ತಿದೆ' ಎಂದು ತಿಳಿಸಿದರು.[ಕಾಸರಗೋಡು ಸರ್ಕಾರಿ ಆಸ್ಪತ್ರೆಯಲ್ಲಿ ಸಮಸ್ಯೆಗಳೇ ಹೆಚ್ಚು]
'ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾರ್ಯವನ್ನು ಬಿಬಿಎಂಪಿ ಈಗಾಗಲೇ ಆರಂಭಿಸಿದೆ. ಇದಕ್ಕಾಗಿ ಸುಮಾರು 12 ಕೋಟಿ ವೆಚ್ಚ ಮಾಡಲಾಗಿದೆ. ಡಾ.ದೇವಿಶೆಟ್ಟಿ ಅವರು, 20 ಕೋಟಿಗೂ ಅಧಿಕ ಮೌಲ್ಯದ ವೈದ್ಯಕೀಯ ಉಪಕರಣಗಳನ್ನು ಒದಗಿಸಲಿದ್ದಾರೆ' ಎಂದರು.[ಚಿತ್ರಗಳು : ಬೆಂಗಳೂರಲ್ಲಿ ಧರ್ಮಸ್ಥಳ ಆಯುರ್ವೇದ ಆಸ್ಪತ್ರೆ ಉದ್ಘಾಟನೆ]
100 ಹಾಸಿಗೆಗಳ ಆಸ್ಪತ್ರೆ ಇದಾಗಿದ್ದು, ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ನಿರ್ಮಾಣಕ್ಕೆ ನೆರವು ನೀಡುತ್ತಿರುವ ಡಾ.ದೇವಿಶೆಟ್ಟಿ ಅವರಿಗೆ ಸಚಿವರು ಧನ್ಯವಾದ ಸಲ್ಲಿಸಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications