ಇನ್ಫೋಸಿಸ್ ಗೆ ಬಂದ ನಿಲೇಕಣಿಗೆ ಮೂರ್ತಿ ಹೇಳಿದ ಕಿವಿಮಾತೇನು?
ಇನ್ಫೋಸಿಸ್ ಗೆ ಹಿಂದಿರುಗಿದ ನಂದನ್ ನಿಲೇಕಣಿ ಅವರಿಗೆ ನಾರಾಯಣ ಮೂರ್ತಿ ಕಿವಿಮಾತು. ಇನ್ಫೋಸಿಸ್ ಸಂಸ್ಥೆಯ ಸಹ- ಸಂಸ್ಥಾಪಕರಾಗಿರುವ ನಾರಾಯಣ ಮೂರ್ತಿ. ಕಂಪನಿಯ ಆಡಳಿತದಲ್ಲಿ ಈವರೆಗೆ ಆಗಿರುವ ಲೋಪದೋಷಗಳನ್ನು ಸರಿಪಡಿಸುವಂತೆ ಕಿವಿಮಾತು.
ಬೆಂಗಳೂರು, ಆಗಸ್ಟ್ 30: ಖ್ಯಾತ ಸಾಫ್ಟ್ ವೇರ್ ಸಂಸ್ಥೆಯಾದ ಇನ್ಫೋಸಿಸ್ ಗೆ ನೂತನ ಮುಖ್ಯಸ್ಥರಾಗಿ ಮರುನೇಮಕಗೊಂಡಿರುವ ನಂದನ್ ನಿಲೇಕಣಿಯವರನ್ನು ಅಭಿನಂದಿಸಿರುವ ಸಂಸ್ಥೆಯ ಸಹ-ಸಂಸ್ಥಾಪಕರಾದ ನಾರಾಯಣ ಮೂರ್ತಿ, ಅವರಿಗೊಂದು ಕಿವಿಮಾತನ್ನೂ ಹೇಳಿದ್ದಾರೆ.
ಆಂತರಿಕ ಆಡಳಿತದ ವಿಚಾರದಲ್ಲಿ ಇನ್ಫೋಸಿಸ್ ಸಂಸ್ಥೆಯು ಅನೇಕ ತಪ್ಪುಗಳನ್ನು ಮಾಡಿಕೊಂಡಿದ್ದು ಅದೆಲ್ಲವನ್ನೂ ಸರಿಪಡಿಸುವಂತೆ ನಂದನ್ ನಿಲೇಕಣಿಯವರಿಗೆ ಅವರು ಕಿವಿಮಾತು ಹೇಳಿದ್ದಾರೆ.

ಇನ್ಫೋಸಿಸ್ ನಲ್ಲಿ ಆಡಳಿತಾತ್ಮಕ ದೋಷಗಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಇತ್ತೀಚೆಗೆ ಸಂಸ್ಥೆಯ ಸಿಇಒ ಆಗಿದ್ದ ವಿಶಾಲ್ ಸಿಕ್ಕಾ ಅವರು ರಾಜಿನಾಮೆ ಸಲ್ಲಿಸಿದ್ದರು. ಅದರ ಬೆನ್ನಲ್ಲೇ (ಕಳೆದ ವಾರ) ಆಡಳಿತ ಮಂಡಳಿಯ ನಾಲ್ವರು ಸದಸ್ಯರು ಹಾಗೂ ಆಡಳಿತ ಮಂಡಳಿಯ ಮುಖ್ಯಸ್ಥ ಆರ್. ಶೇಷಸಾಯಿ ಅವರು ಅಧಿಕಾರ ತ್ಯಜಿಸಿದ್ದರು.
Recommended Video

ನಂದನ್ ಅವರಿಗೆ ಕಿವಿಮಾತು ಹೇಳುವಾಗ ಈ ಎಲ್ಲವನ್ನೂ ಪ್ರಸ್ತಾಪಿಸಿರುವ ನಾರಾಯಣ ಮೂರ್ತಿ, ಇತ್ತೀಚೆಗೆ ಕಂಪನಿ ತೊರೆದ ಆಡಳಿತ ಮಂಡಳಿಯ ಸದಸ್ಯರಾದ ಜೆಫ್ರಿ ಲೇಹ್ಮನ್ ಹಾಗೂ ರೂಪಾ ಕುಡ್ವಾ ಅವರ ವಿರುದ್ಧ ಹರಿಹಾಯ್ದರು.
''ಈ ಹಿಂದೆ, ಕಂಪನಿಯ ಹಣಕಾಸು ವಿಭಾಗದ ಮುಖ್ಯಸ್ಥರಾಗಿದ್ದ ರಾಜೀವ್ ಬನ್ಸಾಲ್ ಅವರು ಕಂಪನಿ ತೊರೆದಾಗ ಕಂಪನಿಯಿಂದ 17.38 ಕೋಟಿ ರು. ಪರಿಹಾರ ರೂಪವಾಗಿ ನೀಡಲಾಗಿತ್ತು. ಇದನ್ನು ಪ್ರಶ್ನಿಸಿದ್ದಕ್ಕೆ ನನ್ನ ಬಳಿ ಉತ್ತರ ನೀಡಲು ಬಂದಿದ್ದ ಜೆಫ್ರಿ ಹಾಗೂ ರೂಪಾ, ಒಂದು ಒಪ್ಪಂದದ ಪ್ರತಿಯೊಂದನ್ನು ನನ್ನ ಮುಂದಿಟ್ಟು, ಇದಕ್ಕೆ ಸಹಿ ಹಾಕಿರಿ ಎಂದು ತಿಳಿಸಿದರು. ಇದೇನೆಂದು ನಾನು ಕೇಳಿದ್ದಕ್ಕೆ ಇದು ವಿಚಾರ ಗೌಪ್ಯವಾಗಿಡುವಂಥ ಒಪ್ಪಂದ ಎಂದು ತಿಳಿಸಿದರು. ಇಂಥವು ಅನೇಕ ಆಡಳಿತಾತ್ಮಕ ಲೋಪ ದೋಷಗಳು ಇವೆ. ಇಂಥವುಗಳನ್ನು ಸರಿಪಡಿಸಲೇಬೇಕಿದೆ'' ಎಂದು ಅವರು ತಿಳಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications