ಚುನಾವಣಾ ಅಭಿಯಾನ, ಮಿಷನ್ 272+ಗೆ ಪ್ರಶಸ್ತಿ
ಬೆಂಗಳೂರು, ನ.18: ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ಸಾಮಾಜಿಕ ಜಾಲತಾಣಗಳನ್ನು ಬಳಸಿ ಜನರನ್ನು ಸೆಳೆದಿದ್ದು ಎಲ್ಲರಿಗೂ ಗೊತ್ತೇ ಇದೆ. ಮೋದಿ ಅವರ ಐತಿಹಾಸಿಕ ಜಯಕ್ಕೆ ಕಾರಣವಾದ ಡಿಜಿಟಲ್ ಹಾಗೂ ಸಮೂಹ ಮಾಧ್ಯಮ ತಂಡಕ್ಕೆ ಡೇಟಾಕ್ವೆಸ್ಟ್ ಪಾಥ್ ಬ್ರೇಕರ್ ಪ್ರಶಸ್ತಿ ಸಿಕ್ಕಿದೆ.
ದೇಶದ ಎಲ್ಲಾ ಸಾರ್ವಜನಿಕರಿಗೂ ಮಾಹಿತಿ ಮತ್ತು ತಂತ್ರಜ್ಞಾನದ ಲಾಭ ಸಿಗಬೇಕು ಎಂಬುದು ಪ್ರಧಾನಿ ಕನಸಾಗಿದೆ. ಸರ್ಕಾರದ ಕನಸು ಹಾಗೂ ಆಶೋತ್ತರಗಳನ್ನು ಜನರಿಗೆ ತಲುಪಿಸಿ ಅವರ ಪ್ರತಿಕ್ರಿಯೆ ಪಡೆಯುವುದು ಆಡಳಿತದಲ್ಲಿ ಮಹತ್ವದ ಪಾತ್ರವಹಿಸಲಿದೆ ಎಂದು ನಮ್ಮ ಸರ್ಕಾರ ನಂಬಿದೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಡಾ. ಅರವಿಂದ್ ಗುಪ್ತಾ ಅವರು ಯುಎಸ್ ನಿಂದ ವಿಡಿಯೋ ಮೂಲಕ ಸಂದೇಶ ಕಳಿಸಿದ್ದರು.

ಮೋದಿ ಅವರ ಐಟಿ ಕ್ರಾಂತಿ : ಸಾಮಾಜಿಕ ಜಾಲ ತಾಣ ಟ್ವಿಟ್ಟರ್, ಫೇಸ್ ಬುಕ್, ಇದೀಗ ಇನ್ಸ್ಟಾ ಗ್ರಾಮ್ ನಲ್ಲಿ ಮೋದಿ ಅವರು ಸಕ್ರಿಯರಾಗಿದ್ದಾರೆ. ಆಲ್ ಇಂಡಿಯಾ ರೇಡಿಯೋ ಮೂಲಕ ಪ್ರತಿ ತಿಂಗಳು ಮನ್ ಕಿ ಬಾತ್ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಪ್ರಧಾನಿ ಅವರ ಕನಸಿನ ಯೋಜನೆಯಾದ 'ಜನ್ ಧನ್ ಯೋಜನೆ' ಕೂಡಾ ಆನ್ ಲೈನ್ ಮೂಲಕವೇ ಲೋಕಾರ್ಪಣೆಗೊಂಡಿದ್ದು ವಿಶೇಷ.
ಮೋದಿ ಅವರು ಡಿಜಿಟಲ್ ಕ್ರಾಂತಿಗೆ ನಾಂದಿ ಹಾಡುವುದಕ್ಕೂ ಮುನ್ನ ಚುನಾವಣೆಯಲ್ಲಿ ಕ್ರಾಂತಿ ಮಾಡಲು ಕಾರಣವಾದ ಮಿಷನ್ 272+ ಗೆ ಡೇಟಾಕ್ವೆಸ್ಟ್ ಪಾಥ್ ಬ್ರೇಕರ್ ಪ್ರಶಸ್ತಿ ಲಭಿಸಿದೆ.
ನಿತಿ ಡಿಜಿಟಲ್ ಸಿಇಒ ಶಶಿ ಶೇಖರ್ ಹಾಗೂ ಒನ್ ಇಂಡಿಯಾ ಸ್ಥಾಪಕ, ವ್ಯವಸ್ಥಾಪಕ ನಿರ್ದೇಶಕ ಬಿ.ಜಿ ಮಹೇಶ್ ಅವರು ಮಿಷನ್ 272+ ತಂಡದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ವಿವಿಧ ಪ್ರಶಸ್ತಿಗಳನ್ನು ನೀಡಿ ಮಾತನಾಡಿದ ಇನ್ಫೋಸಿಸ್ ನ ಸಹ ಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿ, 'ಭಾರತದ ಐಟಿ ಕ್ಷೇತ್ರಕ್ಕೆ ಡೇಟಾ ಕ್ವೇಸ್ಟ್ ತನ್ನದೇ ಆದ ರೀತಿಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದೆ. ಸಾಧಕರನ್ನು ಗುರುತಿಸಿ ಸನ್ಮಾನಿಸುವ ಮೂಲಕ ತಂತ್ರಜ್ಞಾನದಲ್ಲಿನ ಬದಲಾವಣೆ, ಬೆಳವಣಿಗೆ, ಅಭಿವೃದ್ಧಿಗೆ ಕಾರಣವಾಗಿದೆ ಎಂದರು. ಎನ್.ಆರ್ ನಾರಾಯಣ ಮೂರ್ತಿ ಅವರು 1996ರಲ್ಲಿ ಡೇಟಾ ಕ್ವೆಸ್ಟ್ ಐಟಿ ವರ್ಷದ ವ್ಯಕ್ತಿ ಪ್ರಶಸ್ತಿ ಪಡೆದಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications