ಬೆಂಗಳೂರು ಟ್ರಾಫಿಕ್ ಸಮಸ್ಯೆ; ಮೋದಿ ಕೊಟ್ಟ ಗಡುವು ಏನು?
ಬೆಂಗಳೂರು, ಜೂ. 21: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಂಗಳೂರಿಗೆ ಆಗಮಿಸಿದ್ದರು. ನಗರದ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಅವರು 40 ತಿಂಗಳುಗಳ ಗಡುವನ್ನು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ 28,000 ಕೋಟಿ ರೂ.ಗಳ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಪ್ರಧಾನಿ ಮೋದಿ, "ಬೆಂಗಳೂರನ್ನು ಸುಗಮ ಸಂಚಾರ ಮುಕ್ತಗೊಳಿಸಲು ಮೆಟ್ರೋ, ರೈಲು, ಅಂಡರ್ಪಾಸ್, ಫ್ಲೈಓವರ್ ಮತ್ತು ರಸ್ತೆ ಯೋಜನೆಗಳನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕ ಸಂಪರ್ಕವನ್ನು ಸುಧಾರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಧ್ಯವಿರುವ ಎಲ್ಲ ವಿಧಾನಗಳಲ್ಲಿ ಕಾರ್ಯನಿರ್ವಹಿಸುತ್ತಿವೆ" ಎಂದರು.
"ಈ ಯೋಜನೆಗಳು ಸುಲಭವಾಗಿ ಜೀವನ ನಡೆಸಲು ಮತ್ತು ಸುಲಭವಾಗಿ ವ್ಯಾಪಾರ ವಹಿವಾಟು ನಡೆಸಲು ಸಹಾಯ ಮಾಡುತ್ತದೆ" ಎಂದು ಅವರು ಹೇಳಿದರು.

ಉಪನಗರ ರೈಲು ಸಂಪರ್ಕ ಒದಗಿಸುವ ಬಗ್ಗೆ ಚರ್ಚೆ
ದೇಶದಲ್ಲಿ 40 ವರ್ಷಗಳ ಆಡಳಿತದಲ್ಲಿ ಕಾಂಗ್ರೆಸ್ ನಗರದ ಅಭಿವೃದ್ಧಿಯನ್ನು ನಿರ್ಲಕ್ಷಿಸಿದೆ. ಆದರೆ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರವು ಕಳೆದ ಕೆಲವು ವರ್ಷಗಳಲ್ಲಿ ನಗರ ಆಡಳಿತಕ್ಕೆ ಹೊಸ ಆಲೋಚನೆಗಳು ಮತ್ತು ವಿಧಾನಗಳನ್ನು ತಂದಿದೆ. 1980 ರ ದಶಕದಿಂದಲೂ ಬೆಂಗಳೂರಿನ ಕೆಲವು ಭಾಗಗಳಿಗೆ ಉಪನಗರ ರೈಲು ಸಂಪರ್ಕವನ್ನು ಒದಗಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ ಅದನ್ನು ಕಾರ್ಯಗತಗೊಳಿಸಲು ಯಾವುದೇ ಪ್ರಯತ್ನಗಳು ನಡೆದಿಲ್ಲ. ಸುಮಾರು 40 ವರ್ಷಗಳು ಚರ್ಚೆಯಲ್ಲಿಯೇ ಕಳೆದಿವೆ. ಈ ಯೋಜನೆಯು 16 ವರ್ಷಗಳಿಂದ ಕಡತಗಳಲ್ಲಿ ಸಿಲುಕಿಕೊಂಡಿದೆ ಎಂದು ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಆದರೆ ಈ ಯೋಜನೆಗಳನ್ನು 40 ತಿಂಗಳಲ್ಲಿ ಪೂರ್ಣಗೊಳಿಸಲು ನಾನು ಶ್ರಮಿಸುತ್ತೇನೆ ಎಂದು ನಾನು ಬೆಂಗಳೂರಿನ ಜನರಿಗೆ ಭರವಸೆ ನೀಡುತ್ತೇನೆ. ಅವರ ಕನಸನ್ನು ನನಸು ಮಾಡಿ ಎಂದು ಮೋದಿ ಸೂಚನೆ ನಿಡಿದರು.

ಏಕ್ ಭಾರತ್, ಶ್ರೇಷ್ಠ್ ಭಾರತ'ದ ಮನೋಭಾವ
ತೂಗುಯ್ಯಾಲೆಯಲ್ಲಿದ್ದ ಈ ಯೋಜನೆಯನ್ನು ಪೂರ್ಣಗೊಳಿಸುವ ಅವಕಾಶ ಸಿಕ್ಕಿದೆ ಎಂದ ಅವರು, 40 ವರ್ಷಗಳ ಹಿಂದೆಯೇ ಈ ಯೋಜನೆ ಅನುಷ್ಠಾನಗೊಂಡಿದ್ದರೆ ಬೆಂಗಳೂರು ನಗರ ಇನ್ನಷ್ಟು ಉತ್ತಮ ಹಾಗೂ ಬಲಿಷ್ಠವಾಗುತ್ತಿತ್ತು. ಬೆಂಗಳೂರು ದೇಶದ ಲಕ್ಷಾಂತರ ಯುವಕರ ಕನಸಿನ ನಗರವಾಗಿದೆ. ಇದು 'ಏಕ್ ಭಾರತ್, ಶ್ರೇಷ್ಠ್ ಭಾರತ'ದ ಮನೋಭಾವದ ಪ್ರತಿಬಿಂಬವಾಗಿದೆ. ಬೆಂಗಳೂರಿನ ಅಭಿವೃದ್ಧಿಯು ಲಕ್ಷಾಂತರ ಕನಸುಗಳ ಪೋಷಣೆಯಾಗಿದೆ. ಅದಕ್ಕಾಗಿಯೇ ಕಳೆದ ಎಂಟು ವರ್ಷಗಳಲ್ಲಿ, ಬೆಂಗಳೂರಿನ ಸಾಮರ್ಥ್ಯವನ್ನು ಹೆಚ್ಚಿಸಲು ಕೇಂದ್ರವು ಅವಿರತವಾಗಿ ಶ್ರಮಿಸುತ್ತಿದೆ ಎಂದು ಮೋದಿ ಹೇಳಿದರು.

ಆರ್ಥಿಕ ಅಭಿವೃದ್ಧಿಗೆ ಅದರ ಕೊಡುಗೆ
ಬೆಂಗಳೂರಿನ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಯ ಕುರಿತು ಮಾತನಾಡಿದ ಪ್ರಧಾನಿ, ನಗರವು ಆತ್ಮನಿರ್ಭರ ಭಾರತಕ್ಕೆ ಸ್ಫೂರ್ತಿ ನೀಡಿದ 21 ನೇ ಶತಮಾನದ ಯಶಸ್ಸಿನ ಕಥೆಯಾಗಿದೆ. ಈ ನಗರವು ಯುವಕರು, ಉದ್ಯಮಶೀಲತೆ, ನಾವೀನ್ಯತೆ ಮತ್ತು ಖಾಸಗಿ ವಲಯದ ಒಳಗೊಳ್ಳುವಿಕೆಯ ಸಾಮರ್ಥ್ಯವನ್ನು ತೋರಿಸಿದೆ. ಇದು ಖಾಸಗಿ ವಲಯದ ಬಗ್ಗೆ ಮತ್ತು ಆರ್ಥಿಕ ಅಭಿವೃದ್ಧಿಗೆ ಅದರ ಕೊಡುಗೆಯ ಬಗ್ಗೆ ಅವರ ಮನಸ್ಥಿತಿಯನ್ನು ಬದಲಾಯಿಸಲು ಜನರಿಗೆ ಕಲಿಸುತ್ತದೆ. ಕಳೆದ ಎಂಟು ವರ್ಷಗಳಲ್ಲಿ 100 ಬಿಲಿಯನ್ ಡಾಲರ್ ಕಂಪನಿಗಳನ್ನು ರಚಿಸಲಾಗಿದೆ ಮತ್ತು ಪ್ರತಿ ತಿಂಗಳು ಹೊಸದನ್ನು ಸೇರಿಸಲಾಗುತ್ತಿದೆ ಎಂದರು.

ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ದಿನ
ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೋದಿ ಅವರು ಆರಂಭಿಸಿರುವ ಯೋಜನೆಗಳಿಂದ ಕರ್ನಾಟಕದ ಜಿಎಸ್ಡಿಪಿ (ಒಟ್ಟು ರಾಜ್ಯದ ಆಂತರಿಕ ಉತ್ಪನ್ನ) ಶೇ.2ರಷ್ಟು ಏರಿಕೆಯಾಗಲಿದೆ. ರಾಜ್ಯದ ಅಭಿವೃದ್ಧಿ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ದಿನ ಇದಾಗಿದೆ. ಇದು ವಾಸ್ತವದಲ್ಲಿ ನಗರದ ಹೃದಯ ಭಾಗದಿಂದ ಹೊರವಲಯದ ವಿವಿಧ ಪ್ರದೇಶಗಳಿಗೆ ಸಂಪರ್ಕವನ್ನು ಒದಗಿಸುತ್ತದೆ ಎಂದು ಹೇಳಿದರು.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications