ಸೌಂದರ್ಯ ಲಹರಿ ಪ್ರತಿ ಮಂತ್ರದಲ್ಲೂ ಮಹತ್ವವಿದೆ : ಮೋದಿ
ಬೆಂಗಳೂರು, ಅಕ್ಟೋಬರ್ 29 : ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದರು. ಯಡತೊರೆಮಠದ ವೇದಾಂತ ಭಾರತಿ ಸಂಸ್ಥೆಯು ಆಯೋಜಿಸಿರುವ ಸೌಂದರ್ಯಲಹರೀ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಂಡಿದ್ದಾರೆ.
ಭಾನವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ದೂರದ ಊರುಗಳಿಂದ ಬಂದಿರುವ ಸಾವಿರಾರು ಮಹಿಳೆಯರು ಮತ್ತು ಕಾರ್ಯಕರ್ತರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಶಂಕರಭಾರತೀ ಮಹಾಸ್ವಾಮೀಜಿ, ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್, ಡಿ.ವಿ.ಸದಾನಂದ ಗೌಡ ಸೇರಿದಂತೆ ವಿವಿಧ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ.
ಮೋದಿ ಭಾಷಣದ ಮುಖ್ಯಾಂಶಗಳು
* ಪಾರಾಯಣಕ್ಕೆ ಬಂದ ನಿಮಗೆಲ್ಲರಿಗೂ ಸ್ವಾಗತ ಎಂದು ಕನ್ನಡದಲ್ಲಿ ಭಾಷಣ ಆರಂಭ. ಸೌಂದರ್ಯ ಲಹರಿ ಪಾರಾಯಣಕ್ಕೆ ಬಂದ ಎಲ್ಲ ಸಹೋದರಿಯರಿಗೆ ಸ್ವಾಗತ ಎಂದ ಮೋದಿ
* ಶಂಕರ ಭಾರತಿ ಸ್ವಾಮೀಜಿಗಳಿಗೆ ನನ್ನ ಪ್ರಣಾಮಗಳು
* ಒಂದೇ ಜಾಗದಲ್ಲಿ ಒಂದೇ ಸ್ವರದಲ್ಲಿ ಸೌಂದರ್ಯ ಲಹರಿ ಪಠಣ ಒಳ್ಳೆಯ ಕಾರ್ಯ, ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ನನ್ನ ಸೌಭಾಗ್ಯ. ಮಹಾ ಸಮರ್ಪಣೆಗೆ ಬಂದ ನಿಮ್ಮೆಲ್ಲರನ್ನು ನೋಡಿ ಸಂತಸವಾಗಿದೆ
* ಕೆಲವು ದಿನಗಳ ಹಿಂದೆ ನಾನು ಕೇದಾರನಾಥಕ್ಕೆ ಹೋಗಿದ್ದೆ. ಅಲ್ಲಿಗೆ ಹೋದಾಗಲೆಲ್ಲ ಶಂಕರರ ಬಗ್ಗೆ ಗೌರವ ಹೆಚ್ಚಾಗುತ್ತದೆ. ಇಷ್ಟೆಲ್ಲಾ ಆಧುನಿಕ ಸೌಕರ್ಯಗಳಿದ್ದರೂ ಅಲ್ಲಿಗೆ ಹೋಗುವುದು ಕಷ್ಟ. ಆದರೆ, ಅವರು ಸಾವಿರಾರು ವರ್ಷಗಳ ಹಿಂದೆಯೇ ದೇಶದ ಮೂಲೆಮೂಲೆ ಸಂಚರಿಸಿ ಅಧ್ಯಾತ್ಮ ಜಾಗೃತಿ ಮೂಡಿಸಿದ್ದರು
* ನಾನು ಹಲವು ವರ್ಷಗಳಿಂದ ನವರಾತ್ರಿ ವ್ರತ ಆಚರಿಸುತ್ತಿದ್ದೇನೆ. ನಾನು ಹೇಳುವ ದೇವಿಸ್ತುತಿಗಳಲ್ಲಿ ಶಂಕರಾಚಾರ್ಯರ ಸೌಂದರ್ಯ ಲಹರಿಯೂ ಸೇರಿದೆ. ಇದರ ಪ್ರತಿ ಮಂತ್ರದಲ್ಲೂ ಮಹತ್ವದ ಭಾವವಿದೆ
* ಸಾವಿರಾರು ಜನರು ಒಂದೇ ಕಡೆ ಒಕ್ಕೊರಲಿನಿಂದ ಮಂತ್ರ ಹೇಳುವುದರಿಂದ ದೊಡ್ಡ ಮಟ್ಟದ ಶಕ್ತಿ ಸಂಚಯವಾಗುತ್ತೆ. ಈಗ ಇಲ್ಲಿ ನೆರೆದಿರುವವರು ಪಾರಾಯಣ ಮಾಡಿರುವುದರಿಂದ ಉಂಟಾಗಿರುವ ಶಕ್ತಿಯ ಅಲೆಗಳ ಅನುಭವ ನನಗೆ ಆಗುತ್ತಿದೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ










Click it and Unblock the Notifications