ಮೋದಿ ಸರ್ಕಾರದಲ್ಲಿ ಒಂದೂ ಹಗರಣವಿಲ್ಲ: ಸದಾನಂದ ಗೌಡ
ಬೆಂಗಳೂರು, ಏಪ್ರಿಲ್ 13: ಕೇಂದ್ರದಲ್ಲಿ ಈ ಹಿಂದೆ ಆಡಳಿತ ನಡೆಸಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಆದರೆ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಅವರು ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಕಲಿದ್ದಲು ಖರೀದಿ, ಹೆಲಿಕಾಪ್ಟರ್ ಖರೀದಿ, ತರಂಗ ಗುಚ್ಛ ಹರಾಜು, ಕಾಮನ್ವೆಲ್ತ್ ಕ್ರೀಡಾಕೂಟದ ಕಾಮಗಾರಿ, ಆದರ್ಶ ಹೌಸಿಂಗ್ ಸೊಸೈಟಿಯಲ್ಲಿ ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ನಡೆಸಿದರು ಎಂದು ಆರೋಪಿಸಿದರು. ಕಳೆದ ಐದು ವರ್ಷಗಳಲ್ಲಿ ಯಾವ ಹಗರಣವೂ ನಡೆದಿಲ್ಲ. ಪ್ರಧಾನಿಯಾಗಲಿ ಅಥವಾ ಅವರ ಸಚಿವ ಸಂಪುಟದ ಯಾವ ಸಚಿವರೇ ಆಗಲಿ ಭ್ರಷ್ಟಾಚಾರ ನಡೆಸಿಲ್ಲ ಎಂದು ಹೇಳಿದರು.
ಭಯೋತ್ಪಾದನೆ ವಿರುದ್ಧ ನರೇಂದ್ರ ಮೋದಿ ಅವರು ಕಠಿಣ ಕ್ರಮ ಕೈಗೊಂಡಿದ್ದಾರೆ. ಜಿಎಸ್ ಟಿ ಜಾರಿ ಮಾಡಿ ಏಕರೂಪ ತೆರಿಗೆ ತಂದಿದ್ದಾರೆ. ಕಪ್ಪು ಹಣಕ್ಕೆ ಕಡಿವಾಣ ಹಾಕಿದ್ದಾರೆ. ಜನಪರ ಆಡಳಿತ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ನಾನು ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದೇನೆ. ಇದರಿಂದಾಗಿ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದೆ. ಇದನ್ನು ಸಹಿಸದ ಕಾಂಗ್ರೆಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು. ಬೆಂಗಳೂರು ಸಬರ್ಬನ್ ರೈಲು ಯೋಜನೆಗೆ ಕೇಂದ್ರ ಬಜೆಟ್ ನಲ್ಲಿ 17 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಮೆಟ್ರೋ 2ನೇ ಹಂತಕ್ಕೆ ಕೇಂದ್ರ ಸರ್ಕಾರ ಬೆನ್ನೆಲುಬಾಗಿ ನಿಂತಿದೆ. ಆದ್ದರಿಂದ ಬಿಜೆಪಿಯನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

ಕೇಂದ್ರ ಸಚಿವನಾಗಿ ನಾನು ರಾಜ್ಯ ಮತ್ತು ಕೇಂದ್ರದ ನಡುವೆ ಕೊಂಡಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಹಲವು ಸಮಸ್ಯೆಗಳ ಪರಿಹಾರಕ್ಕೆ ಯತ್ನಿಸಿದ್ದೇನೆ. ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ಬಿಬಿಎಂಪಿ, ಬಿಡಿಎ , ರಾಜ್ಯ ಸರ್ಕಾರಕ್ಕೆ ಬಿಡಿಸಿಕೊಡಲು ಕೇಂದ್ರ ರಕ್ಷಣಾ ಸಚಿವರನ್ನೇ ಬೆಂಗಳೂರಿಗೆ ಕರೆಸಿದ್ದನ್ನು ಕಾಂಗ್ರೆಸಿಗರು ಮರೆತಂತಿದೆ ಎಂದು ಲೇವಡಿ ಮಾಡಿದರು. ಯಶವಂತಪುರದಲ್ಲಿ ಕೇಂದ್ರೀಯ ವಿದ್ಯಾಲಯ, ಜಾಲಹಳ್ಳಿಯಲ್ಲಿ ಪಾಸ್ಪೋರ್ಟ್ ಕಚೇರಿ ತೆರೆಯಲಾಗಿದೆ. ಇಷ್ಟೆಲ್ಲಾ ಮಾಡಿದ್ದರೂ ಕೃಷ್ಣಭೈರೇಗೌಡರು ನಾನು ಏನು ಮಾಡಿದ್ದೇನೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೆಲ್ಲ ಗಮನಿಸಲಿ ಎಂದು ತಿರುಗೇಟು ನೀಡಿದರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications