ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ಸಾಧ್ಯತೆ
ಬೆಂಗಳೂರು, ಜನವರಿ 19: ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಯ ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ನೆರವೇರಿಸುವ ಸಾಧ್ಯತೆ ಇದೆ.
ಇದು 15,657 ಕೋಟಿಯ ಯೋಜನೆಯಾಗಿದ್ದು, ಫೆಬ್ರವರಿಯಲ್ಲಿ ಶಂಕುಸ್ಥಾಪನೆ ನೆರವೇರಲಿದೆ.2019ರ ಅಕ್ಟೋಬರ್ನಲ್ಲಿ ಕೇಂದ್ರ ಸರ್ಕಾರವು ಸಬರ್ಬನ್ ರೈಲು ಯೋಜನೆಗೆ ಹಸಿರು ನಿಶಾನೆ ತೋರಿತ್ತು.
ಬಳಿಕ ಚುನಾವಣೆ ನೀತಿ ಸಂಹಿತೆಯಿದ್ದ ಕಾರಣ ಮುಂದೂಡಲಾಗಿತ್ತು, ನಂತರ ಕೊರೊನಾದಿಂದಾಗಿ ಕಾಮಗಾರಿ ವಿಳಂಬವಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಬಗ್ಗೆ ಖಚಿತ ಮಾಹಿತಿ ಇನ್ನೂ ದೊರೆತಿಲ್ಲ.

ಬಿಬಿಎಂಪಿ ಚುನಾವಣೆಗೂ ಮುನ್ನ ಶಂಕುಸ್ಥಾಪನೆ ನೆರವೇರಿಸಬೇಕು ಎಂದು ಸರ್ಕಾರ ಆಲೋಚಿಸಿದೆ. ಕರ್ನಾಟಕ ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಾಪ್ಮೆಂಟ್ ಎಂಟರ್ಪ್ರೈಸಸ್ ರೈಲ್ವೆ ಸಚಿವಾಲಯ, ಹಾಗೂ ರಾಜ್ಯ ಸರ್ಕಾರದ ಜತೆ ಸೇರಿ ಯೋಜನೆ ಪೂರ್ಣಗೊಳಿಸಲಿದೆ.
ಮುಂದಿನ ಕೆಲವು ತಿಂಗಳೊಳಗೆ ಕೆ ರೈಡ್ 60ಕ್ಕೂ ಹೆಚ್ಚು ಮಂದಿ ಸಿಬ್ಬಂದಿಗೆ ಕೆಲಸ ನೀಡಲಿದೆ. ಕರ್ನಾಕ ಸರ್ಕಾರವು ಜಮೀನುನನ್ನು ಖರೀದಿಸುವ ಸಲುವಾಗಿ ಕರ್ನಾಟಕ ಇಂಡಸ್ಟ್ರಿಯಲ್ ಏರಿಯಾ ಡೆವಲಾಪ್ಮೆಂಟ್ ಬೋರ್ಡನ್ನು ನೇಮಿಸಿಕೊಂಡಿದೆ.
ಇದು 148 ಕಿ.ಮೀ ಯೋಜನೆಯಾಗಿದ್ದು, ನಾಲ್ಕು ಕಾರಿಡಾರ್ಗಳು ಬರಲಿವೆ. ಬೆಂಗಳೂರು ನಗರ ಹಾಗೂ ಸುತ್ತಲಿನ ಜಿಲ್ಲೆಗಳಿಗೆ ಸುಲಭವಾಗಿ ಹೋಗಿಬರಲು ಯೋಜನೆ ಸಹಾಯಕವಾಗಲಿದೆ. ಒಟ್ಟು 148 ಕಿ.ಮೀ. ಉದ್ದದ ಮಾರ್ಗಕ್ಕೆ ಕೇಂದ್ರ ಸಂಪುಧಿಟದ ಒಪ್ಪಿಗೆ ದೊರೆತಿದೆ.
ನಾಲ್ಕು ಕಾರಿಡಾರ್ಗಳಡಿ ವ್ಯಾಪಿಸಿರುವ ಈ ಮಾರ್ಗಗಳ ಮೂಲಕ ನಗರದ ವಾಹನ ದಟ್ಟಣೆ ನಿವಾರಣೆ ಜತೆಗೆ ಸಾರಿಗೆ ಸೌಲಭ್ಯ ಹೆಚ್ಚಳವಾಗಲಿದೆ. ಬೆಂಗಳೂರು ಸಿಟಿ-ದೇವನಹಳ್ಳಿ, ಚಿಕ್ಕಬಾಣಾವರ-ಬೈಯಪ್ಪನಹಳ್ಳಿ, ಕೆಂಗೇರಿ-ವೈಟ್ಫೀಲ್ಡ್ ಹಾಗೂ ಹೀಲಲಿಗೆ-ರಾಜಾನುಕುಂಟೆ ಮಾರ್ಗಗಳು ಅಂತಿಮಗೊಂಡಿವೆ. ಒಟ್ಟು 57 ನಿಲ್ದಾಣಗಳು ಅಸ್ತಿತ್ವಕ್ಕೆ ಬರಲಿಧಿವೆ (ಹಾಲಿಯಿರುವ ಕೆಲ ನಿಲ್ದಾಣ ಸೇರಿ). ಆದರೆ, ಈ ಹಿಂದೆ ನಗರದೊಳಗಿನ ಎಲ್ಲಾಮೆಟ್ರೊ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸಬೇಕೆಂಬ ಪ್ರಸ್ತಾಪಕ್ಕೆ ಬದಲು ಪ್ರಮುಖ 10 ಕೇಂದ್ರಗಳನ್ನು ಜೋಡಿಸಲು ಮಾತ್ರ ಆದ್ಯತೆ ದೊರೆತಿದೆ. ಇದರಿಂದ ಒಟ್ಟಾರೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇನ್ನಷ್ಟು ಮೇಲ್ದರ್ಜೆಗೇರಲಿದೆ.
-
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications