ಕಬ್ಬನ್ ಪಾರ್ಕ್ ಠಾಣೆಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ
ಬೆಂಗಳೂರು, ಆಗಸ್ಟ್ 20 : ಪ್ರಧಾನಿ ನರೇಂದ್ರ ಮೋದಿ ಅವರು ಆ.26ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಭೇಟಿ ನೀಡಲಿದ್ದಾರೆ. ಅಚ್ಚರಿ ಪಡಬೇಕಾಗಿಲ್ಲ, ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನದ ಅನುಷ್ಠಾನದ ಬಗ್ಗೆ ಮಾಹಿತಿ ಪಡೆಯಲು ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಠಾಣೆಗೆ ಭೇಟಿ ನೀಡಲಿದ್ದಾರೆ.
ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಸಂದೀಪ್ ಪಾಟೀಲ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ದೇಶದಲ್ಲಿನ 3 ಪೊಲೀಸ್ ಠಾಣೆಗಳನ್ನು ನರೇಂದ್ರ ಮೋದಿ ಅವರ ವಿಡಿಯೋ ಕಾನ್ಫರೆನ್ಸ್ಗೆ ಆಯ್ಕೆ ಮಾಡಲಾಗಿದ್ದು, ಇವುಗಳಲ್ಲಿ ಕಬ್ಬನ್ ಪಾರ್ಕ್ ಠಾಣೆ ಸೇರಿದೆ. ಅಸ್ಸಾಂ, ಉತ್ತರ ಪ್ರದೇಶದ ಎರಡು ಠಾಣೆಗಳಿವೆ. [ಡಿಜಿಟಲ್ ಇಂಡಿಯಾ ಎಂದರೇನು? ಉದ್ದೇಶಗಳೇನು?]

2009ರಲ್ಲಿ ಪೊಲೀಸ್ ಠಾಣೆಗಳನ್ನು ಆಧುನೀಕರಣಗೊಳಿಸಲು ಮತ್ತು ಡಿಜಿಟಲ್ ಆಡಳಿತಕ್ಕೆ ಒಳಪಡಿಸಲು ಸಿಸಿಟಿಎನ್ಎಸ್ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಇದರ ಬಗ್ಗೆ ಆ.26ರಂದು ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಮಧ್ಯಾಹ್ನ 3.30ರಿಂದ 5.30ರ ತನಕ ವಿಡಿಯೋ ಕಾನ್ಫರೆನ್ಸ್ ನಡೆಯಲಿದೆ. [ಡಿಜಿಟಲ್ ಇಂಡಿಯಾದಿಂದ ರಾಜ್ಯಕ್ಕಾಗುವ ಲಾಭಗಳೇನು?]
ಪೊಲೀಸ್ ಇಲಾಖೆಯಲ್ಲಿ ಮಾಹಿತಿ ತಂತ್ರಜ್ಞಾನವನ್ನು ಹೇಗೆ ಬಳಕೆ ಮಾಡಲಾಗುತ್ತಿದೆ?, ಇದರಿಂದ ಸಾರ್ವಜನಿಕರಿಗೆ ಹೇಗೆ ಅನುಕೂಲವಾಗುತ್ತಿದೆ? ಎಂಬ ಬಗ್ಗೆ ಮೋದಿ ಅವರು ಮಾಹಿತಿ ಪಡೆದುಕೊಳ್ಳಲಿದ್ದಾರೆ ಎಂದು ಸಂದೀಪ್ ಪಾಟೀಲ್ ಹೇಳಿದ್ದಾರೆ.
ಈ ಸಂವಾದ ಕಾರ್ಯಕ್ರಮದಲ್ಲಿ : ಗೃಹ ಸಚಿವ ಕೆಜೆ ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್, ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್, ಕೇಂದ್ರ ವಿಭಾಗದ ಡಿಸಿಪಿ ಸಂದೀಪ್ ಪಾಟೀಲ್ ಮತ್ತು ಕಬ್ಬನ್ ಪಾರ್ಕ್ ಠಾಣೆ ಸಿಬ್ಬಂದಿಗಳು ವಿಡಿಯೋ ಕಾನ್ಫರೆನ್ಸ್ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಏನಿದು ಸಿಸಿಟಿಎನ್ಎಸ್ : ಪೊಲೀಸ್ ಠಾಣೆಗಳನ್ನು ಡಿಜಿಟಲೀಕರಣ ಮಾಡಿ ತಂತ್ರಜ್ಞಾನದ ಮೂಲಕ ಪೊಲೀಸಿಂಗ್ ನಿರ್ವಹಿಸಲು 2009ರಲ್ಲಿ ಸಿಸಿಟಿಎನ್ಎಸ್ (Crime and Criminal Tracking Network & Systems (CCTNS)) ವ್ಯವಸ್ಥೆಯನ್ನು ಜಾರಿಗೆ ತರಲಾಗಿತ್ತು.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯನ್ನು ಬಹುತೇಕ ಡಿಜಿಟಲೀಕರಣ ಮಾಡಲಾಗಿದ್ದು, 10ಕ್ಕೂ ಹೆಚ್ಚು ಕಂಪ್ಯೂಟರ್ಗಳನ್ನು ಅಳವಡಿಸಲಾಗಿದೆ. ಈ ಠಾಣೆಯ ಸಿಬ್ಬಂದಿಗೆ ಡಿಜಿಟಲ್ ತರಬೇತಿ ನೀಡಲಾಗಿದೆ. ದೂರು ದಾಖಲು, ಎಫ್ಐಆರ್ ಸೇರಿದಂತೆ ಬಹುತೇಕ ಕೆಲಸಗಳು ಡಿಜಿಟಲ್ ಮಾದರಿಯಲ್ಲಿಯೇ ನಡೆಯುತ್ತವೆ. ಆದ್ದರಿಂದ ಈ ಪೊಲೀಸ್ ಠಾಣೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು










Click it and Unblock the Notifications