ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಗುರಿ
ಬೆಂಗಳೂರು, ಸೆ. 15 : ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ಮತ್ತು ಉತ್ತಮ ತರಬೇತಿ ನೀಡುವ ಉದ್ದೇಶದಿಂದ ಸಿಎಂಆರ್ ವಿಶ್ವವಿದ್ಯಾಲಯ ರಾಷ್ಟ್ರೀಯ ಸಾಫ್ಟ್ ವೇರ್ ಮತ್ತು ಸೇವೆಗಳ ಸಮಿತಿ (ನಾಸ್ ಸ್ಕೋಮ್) ಯೊಂದಿಗೆ ಹೊಸ ಹೆಜ್ಜೆ ಇಟ್ಟಿದೆ. ನಾಸ್ ಸ್ಕೋಮ್ ನಿರ್ದೇಶನದಲ್ಲಿ ಗುಣಾತ್ಮಕ ಶಿಕ್ಷಣ ಅಳವಡಿಕೆಗೆ ಕ್ರಮ ತೆಗೆದುಕೊಂಡಿದೆ. ಸರ್ಕಾರದೊಂದಿಗೆ ಮೆಮೊರೆಂಡಮ್ ಆಫ್ ಅಂಡರ್ ಸ್ಟಾಂಡಿಂಗ್ (ಎಮ್ ಒಯು) ಮುಖಾಂತರ ಕೆಲಸ ಮಾಡಲು ಮುಂದಾಗಿದೆ.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ವಿಶೇಷ ರೀತಿಯ ತರಬೇತಿ ಹಮ್ಮಿಕೊಂಡಿದೆ. ಇತ್ತೀಚೆಗೆ ತರಬೇತಿ ಕಾರ್ಯಕ್ರಮದ ಉದ್ಘಾಟನೆ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಿತು.

ರಾಷ್ಟ್ರೀಯ ಸಾಫ್ಟ್ ವೇರ್ ಮತ್ತು ಸೇವೆಗಳ ಸಮಿತಿಯ ನಿರ್ದೇಶಕಿ ಡಾ. ಸಂಧ್ಯಾ ಚಿಂತಾಲಾ ಮಾತನಾಡಿ, ಎಮ್ ಒಯು ಅಳವಡಿಕೆ ಕಾರ್ಯಕ್ರಮದ ಒಂದು ಮೈಲಿಗಲ್ಲಾಗಿದೆ. 2022 ರ ವೇಳೆಗೆ ದೇಶಕ್ಕೆ 500 ಮಿಲಿಯನ್ ತರಬೇತಿ ಪಡೆದ ವೃತ್ತಿಪರರ ಅಗತ್ಯವಿದೆ. ಆ ನಿಟ್ಟಿನಲ್ಲಿ ಈಗಿನಿಂದಲೇ ಗಮನ ಹರಿಸಬೇಕು ಎಂದು ತಿಳಿಸಿದರು.(ಸಿಎಂಆರ್ ನಲ್ಲಿ ಹೊಸ ಸಂಶೋಧನಾ ತರಗತಿ ಆರಂಭ)
ಇಂಥ ಗುರಿಯನ್ನು ಮುಟ್ಟಲು ಉತ್ತಮ ಪ್ರಯತ್ನ ಅಗತ್ಯ. ಕೌಶಲ್ಯಾಭಿವೃದ್ಧಿ, ಕಠಿಣ ಪರಿಶ್ರಮ, ಶಿಸ್ತು ಎಲ್ಲವೂ ಲೆಕ್ಕಕ್ಕೆ ಸಿಗುತ್ತವೆ. ನಾಸ್ ಸ್ಕೋಮ್ ಈ ಬಗ್ಗೆಯೂ ಗಮನ ಹರಿಸಿದ್ದು ತರಬೇತಿದಾರನಿಗೂ ಉತ್ತಮ ತರಬೇತಿ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಜಗತ್ತಿನ ಸ್ಪಧರ್ಧಾಲೋಕಕ್ಕೆ ಅಗತ್ಯವಿರುವ ಕೌಶಲ್ಯ ಬೆಳೆಸಲು ಯೋಜನೆ ರೂಪಿಸಲಾಗಿದೆ.ಮ ವಿದ್ಯಾರ್ಥಿಗಳ ಆಯ್ಕೆ, ಮೂಲ ಸೌಕರ್ಯ ಅಭಿವೃದ್ಧಿ, ಮತ್ತು ತರಬೇತಿ ಮುಖ್ಯವಾಗುತ್ತದೆ ಎಂದು ಹೇಳಿದರು. ಯಾವುದೇ ವಿದ್ಯಾರ್ಥಿಗೆ ಸಕಲ ರೀತಿಯ ತರಬೇತಿ ನೀಡಿ ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಅನುಗುಣವಾಗಿ ಬೆಳೆಸಬೇಕು ಎಂದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications