ನಟ ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯ: ಡಾ. ಅರುಣ್ ನಾಯ್ಕ್
ಬೆಂಗಳೂರು, ಜೂನ್ 14: ''ಪ್ರತಿಭಾವಂತ ನಟ ಸಂಚಾರಿ ವಿಜಯ್ ಮೆದುಳು ಬೆಳಗ್ಗೆ 10 ಗಂಟೆಗೆ ನಿಷ್ಕ್ರಿಯವಾಗಿದೆ'', ಎಂದು ಅಪೋಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ. ಶೈಲೇಂದ್ರ ಕುಮಾರ್ ಘೋಷಿಸಿದ್ದಾರೆ. ಜೊತೆಗೆ ಮಾತನಾಡಿದ ಡಾ. ಅರುಣ್ ನಾಯ್ಕ್, "ನಾವು ಮೆದುಳು ನಿಷ್ಕ್ರಿಯವಾಗಿದೆ ಎಂದು ಮಾತ್ರ ಹೇಳಿದ್ದೇವೆ. ಇನ್ನೂ ಅಧಿಕೃತವಾಗಿ ಸಾವು ಎಂದು ಪ್ರಕಟಿಸಿಲ್ಲ, ಚಿಕಿತ್ಸೆ ಜಾರಿಯಲ್ಲಿದೆ'' ಎಂದು ಸ್ಪಷ್ಟಪಡಿಸಿದ್ದಾರೆ.
Recommended Video
''ಒಮ್ಮೆ ಮೆದುಳು ನಿಷ್ಕ್ರಿಯಗೊಂಡ ಬಳಿಕ 6-8 ಗಂಟೆಗಳ ಕಾಲ ಸುಧಾರಣೆಗಾಗಿ ನಿರೀಕ್ಷಿಸಲಾಗುತ್ತದೆ. ಲೈಫ್ ಸಪೋರ್ಟ್ ಇಲ್ಲದೆ ಉಸಿರಾಟವಿದ್ದರೆ, ಬ್ರೈನ್ ಡೆಡ್ ಆದರೂ ಕೋಮಾದಲ್ಲಿರಬಹುದು. ಆದರೆ, ವಿಜಯ್ ವೆಂಟಿಲೇಟರ್ ನಲ್ಲಿದ್ದು, ಬಿಪಿ, ಹಾರ್ಡ್ ಬೀಟ್ ಸಮಸ್ಥಿತಿಯಲ್ಲಿಲ್ಲ, ಬೆಳಗ್ಗೆ ಒಮ್ಮೆ ಕಾರ್ಡಿಯೋ ಅಟ್ಯಾಕ್ ಆಗಿದೆ. ವೆಂಟಿಲೇಟರ್ ತೆಗೆದರೆ ಅಲ್ಲಿಗೆ ಎಲ್ಲವೂ ಮುಗಿಯುತ್ತದೆ. ಈ ಬಗ್ಗೆ ಕುಟುಂಬಕ್ಕೆ ತಿಳಿಸಲಾಗಿದೆ.
''ಮೆದುಳು, ತಲೆಗೆ ಪೆಟ್ಟು ಬಿದ್ದಾಗ ಅಪಘಾತವಾದ 1 ಗಂಟೆಯೊಳಗೆ ಆಪರೇಟ್ ಮಾಡಿದರೆ ಬದುಕಿಸುವ ಸಾಧ್ಯತೆ ಹೆಚ್ಚಿರುತ್ತದೆ. ವಿಜಯ್ ಅವರ ಕೇಸಿನಲ್ಲಿ 20ನಿಮಿಷಕ್ಕೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು, 1 ಗಂಟೆಯೊಳಗೆ ಸರ್ಜರಿ ಪ್ರಕ್ರಿಯೆ ಶುರುಮಾಡಿ ಮೆದುಳಿನ ರಕ್ತಸ್ರಾವವನ್ನು ಸ್ವಚ್ಛಗೊಳಿಸಿದೆವು, ಮೇಜರ್ ಸರ್ಜರಿ ಮಾಡಲಾಗಿದೆ. ಆದರೆ, ಉಸಿರಾಟ ಇರುವ ತನಕ ಡೆತ್ ಎಂದು ಹೇಳಲು ಸಾಧ್ಯವಿಲ್ಲ, 1 ಲಿವರ್ 2 ಕಿಡ್ನಿ ದಾನಕ್ಕೆ ಕುಟುಂಬದವರು ಒಪ್ಪಿದ್ದಾರೆ. ಈ ಬಗ್ಗೆ ಸಂಪೂರ್ಣ ಸಮ್ಮತಿ ಸಿಕ್ಕಬಳಿಕವಷ್ಟೇ ಅಂಗಾಂಗ ದಾನ ಪ್ರಕ್ರಿಯೆ ನಡೆಸಲಾಗುತ್ತದೆ. ಸರ್ಕಾರಕ್ಕೆ ಈ ಬಗ್ಗೆ ತಿಳಿಸಬೇಕಾಗುತ್ತದೆ'' ಎಂದು ಡಾ. ಶೈಲೇಶ್ ವಿವರಿಸಿದರು.

ಶನಿವಾರ ತಡರಾತ್ರಿ ಬೆಂಗಳೂರಿನ ಜೆ.ಪಿ ನಗರದ ಸ್ನೇಹಿತ ನಿವಾಸದಿಂದ ಬೈಕಿನಲ್ಲಿ ತೆರಳುತ್ತಿದ್ದ ಸಂಚಾರಿ ವಿಜಯ್ ಅವರು ಅಪಘಾತಕ್ಕೊಳಗಾಗಿದ್ದರು. ತಲೆಗೆ ತೀವ್ರಪೆಟ್ಟು ಬಿದ್ದ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆ ಸಂದರ್ಭದಲ್ಲಿ ಉಸಿರಾಟ ಸಹಜವಾಗಿತ್ತು ಎಂದು ಅಧಿಕೃತ ಪ್ರಕಟಣೆಯಿಂದ ತಿಳಿದು ಬಂದಿದೆ.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market












Click it and Unblock the Notifications