ಬೆಂಗಳೂರಲ್ಲಿ ರಾಷ್ಟ್ರೀಯ ಜನಗಣತಿ ಆರಂಭ: ಗೈರಾದ ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕ್ಕದ್ದಮೆ! ಖಡಕ್ ಎಚ್ಚರಿಕೆ
National Census 2027: ರಾಷ್ಟ್ರೀಯ ಜನಗಣತಿ -2027 ಕಾರ್ಯ ಏಪ್ರಿಲ್ 1ರಿಂದ ಎಲ್ಲೆಡೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಜನಗಣತಿ ಇನ್ನೇನು ಶುರುವಾಗಲಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ (ಜಿಬಿಎ) ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣತಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಷ್ಟ್ರೀಯ ಜನಗಣತಿ-2027 ಮನೆಪಟ್ಟಿ ಮತ್ತು ವಸತಿ ಗಣತಿ ಕಏಪ್ರಿಲ್ 16 ರಿಂದ ಮೇ 15ರವರೆಗೆ ನಡೆಯಲಿದೆ. ಈ ಸಮೀಕ್ಷೆ ಕಾರ್ಯಕ್ಕೆ 4678 ಗಣತಿದಾರರು, 798 ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ.
ಜನಗಣತಿ ಸಿಬ್ಬಂದಿಗೆ ಏಪ್ರಿಲ್ 06 ರಿಂದ 08 ರವರೆಗೆ ಒಟ್ಟು 16 ತರಬೇತಿ ಕೇಂದ್ರಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ನೀಡಿರುವ ಆದೇಶದಲ್ಲಿ ತರಬೇತಿ ಸ್ಥಳ ಹಾಗೂ ದಿನಾಂಕಗಳನ್ನು ನಿಗದಿಪಡಿಸಲಾಗಿರುತ್ತದೆ. ತರಬೇತಿ ಕಾರ್ಯಕ್ಕೆ ಜನಗಣತಿ ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗತಕ್ಕದ್ದು. ತಪ್ಪಿದಲ್ಲಿ,ಅಂತಹ ಸಿಬ್ಬಂದಿ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್ ರಮೇಶ್ ಅವರು ಎಚ್ಚರಿಸಿದ್ದಾರೆ.

ಯಾವೆಲ್ಲ ಕ್ರಮ ಜರುಗಿಸುವುದಾಗಿ ಪಾಲಿಕೆ ಎಚ್ಚರಿಸಿದೆ
* ಜನಗಣತಿ ಕಾಯ್ದೆ 1948 ರ ಸೆಕ್ಷನ್ 11 ಪ್ರಕಾರ ತಮ್ಮ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
* ನೀಡಲಾದ ಆದೇಶಗಳನ್ನು ಪಾಲಿಸದಿದ್ದಕ್ಕಾಗಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ, 2023 ರ ಕಲಂ 223 ಅಡಿಯಲ್ಲಿ ಪ್ರಥಮ ವರ್ತಮಾನ ವರದಿ (FIR) ದಾಖಲಿಸುವುದು.
* ಸಂಪೂರ್ಣ ದುರ್ನಡತೆ ಮತ್ತು ಅವಿಧೇಯತೆಗಾಗಿ ಅಮಾನತ್ತು ಮತ್ತು ಶಿಸ್ತು ಕ್ರಮಗಳನ್ನು ಕೈಗೊಳ್ಳಲಾಗುವುದು.
* ಅನಧಿಕೃತ ಗೈರುಹಾಜರಿಯನ್ನು (ಕೆಲಸ ಮಾಡದ ದಿನ) ಎಂದು ಪರಿಗಣಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಸಿಬ್ಬಂದಿಗೆ ಅಗತ್ಯ ತರಬೇತಿ
ಏಪ್ರಿಲ್ 1ರಿಂದಲೇ ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ರಾಷ್ಟ್ರೀಯ ಜನಗಣತಿ-2027 ಶುರುವಾಗಿದೆ. ಇದರ ಅಂಗವಾಗಿ ಏಪ್ರಿಲ್ 1 ರಿಂದ ಮನೆ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ನಡೆಸಲಾಗುತ್ತಿದೆ. ಜನಗಣತಿ ಕಾರ್ಯವನ್ನು ಸಮರ್ಪಕವಾಗಿ ಹಾಗೂ ಸಮಯೋಚಿತವಾಗಿ ಕೈಗೊಳ್ಳಲಾಗುತ್ತಿದೆ.
ಗಣತಿ ಸುಸೂತ್ರವಾಗಿ ನಡೆಸಲು ಅನುಕೂಲವಾಗುವಂತೆ ಫೀಲ್ಡ್ ಟ್ರೈನರ್ ಗಳಿಗೆ, ಚಾರ್ಜ್ ಆಫೀಸರ್ಸ್ ಗಳಿಗೆ, ಕಂದಾಯ ಅಧಿಕಾರಿಗಳಿಗೆ, ಟೆಕ್ನಿಕಲ್ ಅಸಿಸ್ಟೆಂಟ್ ಗಳಿಗೆ ಗಣತಿ ಕಾರ್ಯದ ಮುಖ್ಯ ಪಾತ್ರವಹಿಸುವ 6 ವಿಧಾನಸಭಾ ಕ್ಷೇತ್ರವಾರು ನೇಮಕಗೊಂಡ ಸಿಬ್ಬಂದಿಗೆ ಅಪರ ಆಯುಕ್ತರ ನೇತೃತ್ವದಲ್ಲಿ ತರಬೇತುದಾರರಿಂದ ಟ್ರೈನಿಂಗ್ ನೀಡಲಾಗಿದೆ ಎಂದು ಆಯುಕ್ತರಾದ ರಾಜೇಂದ್ರ ಚೋಳನ್ ಮಾಹಿತಿ ನೀಡಿದ್ದಾರೆ.
-
Greater Bengaluru Authority: ಅಪಾಯಕಾರಿ ಮರ-ಕೊಂಬೆಗಳ ತೆರವು ಚುರುಕು – ಸಾರ್ವಜನಿಕ ಸುರಕ್ಷತೆಗೆ ಆದ್ಯತೆ -
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್












Click it and Unblock the Notifications