Census: ಮಾದರಿಯಾದ ಪಾಲಿಕೆ ಆಯುಕ್ತರು: 100ಕ್ಕೂ ಹೆಚ್ಚು ಗಣತಿದಾರರಿಂದ ಏಕಕಾಲಕ್ಕೆ 'ಸ್ವಯಂ ಗಣತಿ'
National Census 2027: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಾಷ್ಟ್ರೀಯ ಜನಗಣತಿ 2027 ಕಾರ್ಯ ಮುಂದಿನ ವಾರದಿಂದ ಆರಂಭವಾಗಲಿದೆ. ಈ ಸಂಬಂಧ ಅಗತ್ಯ ಸಿಬ್ಬಂದಿಗೆ ತರಬೇತಿ ಕೊಡಲಾಗುತ್ತಿದೆ. ತರಬೇತಿ ಶಿಬರಕ್ಕೆ ಭೇಟಿ ನೀಡಿದ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ ಎನ್ ರಮೇಶ್ ಅವರು ಸ್ವಯಂ ಗಣತಿಗೆ ಒಳಗಾಗಿದ್ದು ವಿಶೇಷವಾಗಿತ್ತು. ಅವರು ಮಾತ್ರವಲ್ಲದೇ ಸುಮಾರು 100 ಮಂದಿ ಗಣತಿದಾರರು ಸ್ವಯಂ ಗಣತಿ ಮಾಡಿಕೊಂಡು ಗಣತಿ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಅವರು ಉತ್ತೇಜಿಸಿದರು.
ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಇದೆಲ್ಲ ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ, ಪಾಲಿಕೆ ಆಯುಕ್ತರು ಹಾಗೂ ಪ್ರಧಾನ ಜನಗಣತಿ ಅಧಿಕಾರಿಗಳಾದ ಕೆ. ಎನ್. ರಮೇಶ್ ಅವರು ಜೆ.ಪಿ. ನಗರದ ಆರ್ ವಿ ಡೆಂಟಲ್ ಕಾಲೇಜಿನಲ್ಲಿ ನಡೆಯುತ್ತಿರುವ ತರಬೇತಿ ಶಿಬಿರಕ್ಕೆ ಭೇಟಿ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ಆಯುಕ್ತರಿಂದ ಸ್ವಯಂ ಗಣತಿ
ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಆಯುಕ್ತರು ಸ್ವತಃ ತಾವೇ 'ಸ್ವಯಂ ಜನಗಣತಿ' (Self-Enumeration) ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ತಮ್ಮ ವಿವರಗಳನ್ನು ನೋಂದಾಯಿಸುವ ಮೂಲಕ ಗಣತಿದಾರರು ಹಾಗೂ ಮೇಲ್ವಿಚಾರಕರು ಸಹ ಅವರೊಂದಿಗೆ ಸ್ವಯಂ ಗಣತಿಯಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸಿದರು. ಇದರಿಂದ ತರಬೇತಿ ಕೊಠಡಿಯಲ್ಲಿದ್ದ ಸುಮಾರು 100ಕ್ಕೂ ಹೆಚ್ಚು ಗಣತಿದಾರರು ಮತ್ತು ಮೇಲ್ವಿಚಾರಕರು ಏಕಕಾಲದಲ್ಲಿ ಈ ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.
ನಗರದ ಸಾರ್ವಜನಿಕರು ಆನ್ಲೈನ್ ಮೂಲಕ ತಮ್ಮ ವಿವರಗಳನ್ನು ತಾವೇ ದಾಖಲಿಸುವುದರಿಂದ ಸಮಯ ಉಳಿತಾಯವಾಗುವುದಲ್ಲದೆ, ನಿಖರವಾದ ಮಾಹಿತಿ ಲಭ್ಯವಾಗುತ್ತದೆ. ಇದನ್ನು ಉತ್ತೇಜಿಸಲು ಅಧಿಕಾರಿಗಳೇ ಮೊದಲು ಭಾಗವಹಿಸುವುದು ಅಗತ್ಯ ಎಂದು ಆಯುಕ್ತರು ತಿಳಿಸಿದರು.
ಗಣತಿದಾರರಿಗೆ ತಾಂತ್ರಿಕ ಸವಾಲು: ಸಂವಾದ
ಗಣತಿ ಮಾಡಲು ಸಜ್ಜಾಗುತ್ತಿರುವ ತರಬೇತಿ ಕೇಂದ್ರದಲ್ಲಿ ಗಣತಿದಾರರು ಎದುರಿಸುತ್ತಿರುವ ತಾಂತ್ರಿಕ ಸವಾಲುಗಳು ಮತ್ತು ಕ್ಷೇತ್ರಕಾರ್ಯದ ವೇಳೆ ಉದ್ಭವಿಸಬಹುದಾದ ಸಮಸ್ಯೆಗಳ ಕುರಿತು ಆಯುಕ್ತರು ಸುದೀರ್ಘವಾಗಿ ಚರ್ಚಿಸಿದರು. ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ತಿಳಿಸಿದರು.
ಆಯುಕ್ತರು ಕೇವಲ ಭಾಷಣ ಮಾಡದೆ, ಪ್ರತಿಯೊಬ್ಬ ಗಣತಿದಾರರ ಬಳಿ ತೆರಳಿ ಅವರ ಸಂದೇಹಗಳನ್ನು ಆಲಿಸಿದರು. ಹಾಗೂ ಮೊಬೈಲ್ ಆಪ್ ಬಳಕೆ, ದತ್ತಾಂಶ ಸುರಕ್ಷತೆ ಮತ್ತು ಮನೆಗಳ ಗುರುತಿಸುವಿಕೆಯಲ್ಲಿ ಇರುವ ಗೊಂದಲಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು.
ಜನಗಣತಿಯು ದೇಶದ ಭವಿಷ್ಯದ ಯೋಜನೆಗಳ ರೂಪಿಸುವಿಕೆಗೆ ಬುನಾದಿಯಾಗಿದೆ. ಬೆಂಗಳೂರಿನಂತಹ ಪ್ರದೇಶದಲ್ಲಿ ಪ್ರತಿ ಮನೆಯನ್ನು ತಲುಪುವುದು ಸವಾಲಿನ ಕೆಲಸ. ಬೆಂಗಳೂರು ದಕ್ಷಿಣದ ಪ್ರತಿಯೊಬ್ಬ ನಾಗರಿಕನ ಮಾಹಿತಿ ಸರಿಯಾಗಿ ದಾಖಲಾಗುವುದನ್ನು ಖಚಿತಪಡಿಸಿಕೊಳ್ಳುವುದು ಪ್ರತಿಯೊಬ್ಬ ಗಣತಿದಾರನ ಕರ್ತವ್ಯ ಎಂದು ಸಲಹೆ ನೀಡಿದರು.
-
ಬೆಂಗಳೂರು ಸ್ವಚ್ಛತೆಗೆ ಬಿಗ್ ಪ್ಲಾನ್: ವಾರಕ್ಕೆ 10 ಕಿ.ಮೀ ರಸ್ತೆ ಕ್ಲೀನ್ ಮಾಡಲು ಪಾಲಿಕೆ ನಿರ್ಧಾರ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
ಧನುಷ್ ಜೊತೆ ಸ್ನೇಹ ಕಳೆದುಕೊಂಡಿದ್ದು ನನ್ನ ಜೀವನದ ದೊಡ್ಡ ನಷ್ಟ: ಪತ್ನಿ ನಯನತಾರ ಜೊತೆಗಿನ ಮನಸ್ತಾಪಕ್ಕೆ ವಿಘ್ನೇಶ್ ಶಿವನ್ ಬೇಸರ -
"ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು": ಸಿಎಸ್ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ? -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
Silk Board: ಹಳದಿ-ನೀಲಿ ಮೆಟ್ರೋ ಲೈನ್ ಪ್ರಯಾಣಿಕರಿಗಾಗಿ 'ಟ್ರಾವೆಲೇಟರ್-ಕನೆಕ್ಟಿಂಗ್ ವಾಕ್ವೇ ಸಂಪರ್ಕ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ













Click it and Unblock the Notifications