ಭಾರತ್ ನೀತಿ ಸಂವಾದಕ್ಕೆ ಮಾರ್ಚ್ 26ಕ್ಕೆ ರೈಲ್ವೆ ಸಚಿವ ಬೆಂಗಳೂರಿಗೆ
ಭಾರತ್ ನೀತಿ ಸಂಸ್ಥೆ ಮಾರ್ಚ್ 26ರ ಭಾನುವಾರ ಬೆಂಗಳೂರಿನಲ್ಲಿ ಆಡಳಿತ, ಸಾಮಾಜಿಕ ಜಾಲತಾಣ ಹಾಗೂ ಪ್ರಜಾಪ್ರಭುತ್ವ ವಿಷಯವಾಗಿ ಸಂವಾದ ಕಾರ್ಯಕ್ರಮ ಆಯೋಜಿಸಿದೆ. ರೈಲ್ವೆ ಸಚಿವ ಸುರೇಶ್ ಪ್ರಭು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ
ಬೆಂಗಳೂರು, ಮಾರ್ಚ್ 21: ಪ್ರಜಾಪ್ರಭುತ್ವ, ಸ್ವಚ್ಛ ಆಡಳಿತ ಮತ್ತು ಸಾಮಾಜಿಕ ಜಾಲತಾಣ ಎಂಬ ವಿಚಾರವಾಗಿ ಚರ್ಚಾಕೂಟವೊಂದನ್ನು ಭಾರತ್ ನೀತಿ ಸಂಸ್ಥೆಯಿಂದ ಆಯೋಜಿಸಿದೆ. ಉತ್ತಮ ಆಡಳಿತದಲ್ಲಿ ತಂತ್ರಜ್ಞಾನದ ಪಾತ್ರ ಏನು, ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ನಾಗರಿಕರು ಹೇಗೆ ಕೊಡುಗೆ ನೀಡಬಹುದು ಎಂಬ ಬಗ್ಗೆ ಮಾರ್ಚ್ 26ರ ಭಾನುವಾರ ಬೆಂಗಳೂರಿನ ಲೀ ಮೆರಿಡಿಯನ್ ಹೋಟೆಲ್ ನಲ್ಲಿ ಚರ್ಚಾಕೂಟ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ರೈಲ್ವೆ ಸಚಿವ ಸುರೇಶ್ ಪ್ರಭು, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರಳೀಧರ್ ರಾವ್, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೇಂದ್ರ ಸರಕಾರದ ಎಲೆಕ್ಟ್ರಾನಿಕ್ಸ್-ಐಟಿ ನಿರ್ದೇಶಕಿ ಅರುಣಾ ಸುಂದರ್ ರಾಜನ್, ಆಂಧ್ರ ಸರಕಾರದ ಕಾರ್ಯದರ್ಶಿ ವಿಜಯಾನಂದ್, ತೆಲಂಗಾಣದ ಕಾರ್ಯದರ್ಶಿ ಜಯೇಶ್ ರಂಜನ್, ವಿದೇಶಾಂಗ ಖಾತೆ ರಾಜ್ಯ ಸಚಿವ ಎಂಜೆ ಅಕ್ಬರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.[ಸಾಮಾಜಿಕ ಜಾಲತಾಣಗಳಿಗೆ ಮೋದಿ ಖರ್ಚು ಮಾಡಿದ್ದು ಇಷ್ಟೆನಾ?]

ಜತೆಗೆ ಮೈಕ್ರೋಸಾಫ್ಟ್, ಫೇಸ್ ಬುಕ್, ಟ್ವಿಟ್ಟರ್, ಯಾಹೂದಂಥ ಕಂಪೆನಿಗಳ ಸಿಇಒಗಳು ಮತ್ತು ಅಧಿಕಾರಿಗಳು ಭಾಗವಹಿಸುವ ಸಾಧ್ಯತೆ ಇದ್ದು, ಈ ಬಗ್ಗೆ ಅವರ ಜತೆ ಚರ್ಚೆ ನಡೆಯುತ್ತಿದೆ. ಭಾರತ್ ನೀತಿ ಸಂಸ್ಥೆಯು ಈವರೆಗೆ ಹಲವು ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಬೆಂಗಳೂರಿನಲ್ಲಿ 2016ರಲ್ಲಿ ನಡೆದ ಡಿಜಿಟಲ್ ಇಂಡಿಯಾ ಸಮಾವೇಶ ಒಂದು ಉದಾಹರಣೆಯಾಗಿ ಹೇಳಬಹುದು.[ಸಹಾಯಹಸ್ತ ಚಾಚುವಲ್ಲಿ ಸುಷ್ಮಾರನ್ನು ಮೀರಿಸುವವರೇ ಇಲ್ಲ!]
ನಾಸ್ಕಾಂ (NASSCOM) ಜತೆಗೆ ಭಾರತ್ ನೀತಿ ಸಂಸ್ಥೆ ಜಂಟಿಯಾಗಿ ಈ ಹಿಂದೆ ದೆಹಲಿಯಲ್ಲಿ ಕೂಡ ಕಾರ್ಯಕ್ರಮಗಳನ್ನು ನಡೆಸಿದೆ. ಆಸಕ್ತರು www.bharatniti.in/conclave2017 ಮೂಲಕ ಭಾಗವಹಿಸಬಹುದು. ಕೇವಲ ಸೀಮಿತ ಸೀಟುಗಳು ಮಾತ್ರ ಲಭ್ಯವಿರುವುದರಿಂದ ಶೀಘ್ರವಾಗಿ ನೋಂದಾಯಿಸಬೇಕು ಎಂದು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಭಾರತ್ ನೀತಿ ಕರ್ನಾಟಕ ಮಾಧ್ಯಮ ಪ್ರತಿನಿಧಿ ರಾಜಶೇಖರ ಕೆ. ಶೆಟ್ಟಿ ಅವರನ್ನು 98456 08418 ಮೂಲಕ ಸಂಪರ್ಕಿಸಬಹುದು.
-
Janhvi Kapoor: ಅಶ್ಲೀಲ ವೆಬ್ಸೈಟ್ನಲ್ಲಿ ನನ್ನ ಫೋಟೋ ನೋಡಿದ್ದೆ: ಹದಿಹರೆಯದ ಕಹಿ ಘಟನೆ ಬಿಚ್ಚಿಟ್ಟ ನಟಿ ಜಾನ್ವಿ ಕಪೂರ್ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ












Click it and Unblock the Notifications