ಕಂಠೀರವ ಕ್ರೀಡಾಂಗಣದಲ್ಲಿ ವಿಪತ್ತು ನಿರ್ವಹಣಾ ದಿನ
ಬೆಂಗಳೂರು, ಫೆ. 5 : ಫೆಬ್ರವರಿ 6 ರಂದು ಬೆಳಗ್ಗೆ 10.30ಕ್ಕೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ 'ರಾಷ್ಟ್ರೀಯ ವಿಪತ್ತು ಕಡಿತ ದಿನಾಚರಣೆ' ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ, ಗೃಹ ಸಚಿವ ಕೆ,ಜೆ,ಜಾರ್ಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಗೃಹರಕ್ಷಕ ದಳದ ಸಿಬ್ಬಂದಿ, ಪೌರರಕ್ಷಣಾ ವಾರ್ಡನ್ ಗಳು, ಅಗ್ನಿಶಾಮಕದಳದ ಸಿಬ್ಬಂದಿ, ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂಸೇವಕರು ವಿವಿಧ ಪ್ರದರ್ಶನ ನೀಡಲಿದ್ದಾರೆ.
ರಾಷ್ಟ್ರೀಯ ವಿಪತ್ತು ದಿನಾಚರಣೆ ಹಿನ್ನೆಲೆಯಲ್ಲಿ ಬೆಳಗ್ಗೆ 9.30ಕ್ಕೆ ಜಾಗೃತಿ ಜಾಥಾ ಆಯೋಜಿಸಲಾಗಿದೆ. ನಾಗರಿಕರಿಕರಿಗೆ ವಿಪತ್ತು ನಿರ್ವಹಣೆ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತು ದಿನಾಚರಣೆಯಲ್ಲಿ ಪ್ರಾತ್ಯಕ್ಷಿಕೆಗಳ ಮೂಲಕ ಮಾಹಿತಿ ನೀಡಲಾಗುವುದು.
Comments
English summary
Bengaluru: National disaster reduction day programme will organizem at Kanthirava Stadium on Febravary 6. Governor Vajubhai vala, and Home Minister K.J.George will participate.