National Highway: ದೊಡ್ಡಬಳ್ಳಾಪುರದ ಮೇಲೆ ಹಾದುಹೋಗುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು: ಇಲ್ಲಿದೆ ಮಾಹಿತಿ
National Highway: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲ ವಿಸ್ತರಣೆ ಆಗುತ್ತಲಿದೆ. ಇನ್ನೂ ಇತ್ತೀಚೆಗಷ್ಟೇ ಬೆಂಗಳೂರಿಗೆ ಸೇರ್ಪಡೆ ಮಾಡಲಾಗುತ್ತದೆ ಎಂದು ಪ್ರಸ್ತಾಪಿಸಲಾದ ದೊಡ್ಡಬಳ್ಳಾಪುರದ ಮೇಲೆ ಹಾದುಹೋಗುವ ಪ್ರಮುಖ ರಾಷ್ಟ್ರೀಯ ಹೆದ್ಧಾರಿ ಯಾವುದು ಹಾಗೂ ಏನೆಲ್ಲಾ ಪ್ರಯೋಜನಗಳಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಡಿಸಿಎಂ ಡಿಕೆ ಶಿವಕುಮಾರ್ ಅವರು ಇತ್ತೀಚೆಗಷ್ಟೇ ಆರು ತಾಲ್ಲೂಕುಗಳನ್ನೂ ಬೆಂಗಳೂರಿಗೆ ಸೇರ್ಪಡೆ ಮಾಡಲಾಗುತ್ತದೆ ಎಂದು ಪ್ರಸ್ತಾಪ ಮಾಡಿದ್ದರು. ಇವುಗಳನ್ನೆಲ್ಲ ಒಂದು ಸೆಕ್ಟರ್ ಆಗಿ ಮಾಡಲಾಗುತ್ತದೆ ಎಂದು ಹೇಳಿದ್ದರು. ಈ ಪಟ್ಟಿಯಲ್ಲಿ ದೊಡ್ಡಬಳ್ಳಾಪುರ ಕೂಡ ಇದೆ. ಇನ್ನೂ ಈ ಮಾರ್ಗದಲ್ಲಿ ಪ್ರಮುಖ ರಾಷ್ಟ್ರೀಯ ಹೆದ್ದಾರಿಯೊಂದು ಹಾದುಹೋಗಿದೆ. ಹಾಗಾದ್ರೆ, ಅದು ಯಾವುದು ಹಾಗೂ ಇದರಿಂದ ಏನೆಲ್ಲಾ ಪ್ರಯೋಜನೆಗಳಿಗೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ದೊಡ್ಡಬಳ್ಳಾಪುರದ ಮೇಲೆ ಹಾದುಹೋಗಿರುವ ಹೆದ್ದಾರಿ
* ರಾಷ್ಟ್ರೀಯ ಹೆದ್ದಾರಿ-648 (ಹಳೆಯ NH 207): ಈ ರಾಷ್ಟ್ರೀಯ ಹೆದ್ದಾರಿ ದಾಬಸ್ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸರ್ಜಾಪುರ, ಹೊಸೂರು ಮಾರ್ಗಗಗಳಲ್ಲಿ ಹಾದುಹೋಗುತ್ತದೆ. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಹೊಸಕೋಟೆಗೂ ಇದು ಸಂಪರ್ಕ ಕಲ್ಪಿಸುತ್ತದೆ.
* ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR -NH-948A/NH-648 ಭಾಗ) ಇದು ನಗರವನ್ನು ಸುತ್ತುವರಿಯುವ ಆಕ್ಸೆಸ್ ಕಂಟ್ರೋಲ್ಡ್ ಎಕ್ಸ್ಪ್ರೆಸ್ವೇ ಆಗಿದೆ. ಇದು ದಾಬಸ್ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಸೇರಿದಂತೆ ಉಪನಗರಗಳಿಗೆ ಸಂಪರ್ಕ ಕಲ್ಪಿಸುತ್ತದೆ. ದೊಡ್ಡಬಳ್ಳಾಪುರ ಭಾಗದಲ್ಲಿ ಇದರ ಕಾಮಗಾರಿ ಇನ್ನೂ ಪ್ರಗತಿಯಲ್ಲಿದ್ದು, ಸ್ವಲ್ಪ ಭಾಗ ಮಾತ್ರ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮುಂದಿನ ದಿನಗಳಲ್ಲಿ ಕಾಮಗಾರಿ ಪೂರ್ತಿಯಾಗಲಿದೆ.
ಒಟ್ಟಿನಲ್ಲಿ ಹೇಳುವುದಾದ್ರೆ, ರಾಷ್ಟ್ರೀಯ ಹೆದ್ದಾರಿ-648 ಹಾಗೂ ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಇರುವ ಕಾರಣದಿಂದ ದೊಡ್ಡಬಳ್ಳಾಪುರ ಒಂದು ಪ್ರಮುಖ ಸಾರಿಗೆ ಹಬ್ ಆಗಿ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಹೊಂದುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಲಾಗುತ್ತಿದೆ. ಯಾಕಂದ್ರೆ ಈ ಭಾಗದಲ್ಲಿ ರಸ್ತೆಗಳು ಮತ್ತಷ್ಟು ವಿಸ್ತರಣೆಯಾಗಲಿವೆ.
NH-648 ಯಾವೆಲ್ಲಾ ನಗರಗಳ ಮೇಲೆ ಹಾದುಹೋಗಲಿದೆ?
* ದಾಬಸ್ಪೇಟೆ
* ದೊಡ್ಡಬಳ್ಳಾಪುರ
* ದೇವನಹಳ್ಳಿ
* ಸರ್ಜಾಪುರ
* ಹೊಸೂರು
ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರೋಡ್
* ದಾಬಸ್ಪೇಟೆ
* ದೊಡ್ಡಬಳ್ಳಾಪುರ
* ದೇವನಹಳ್ಳಿ
* ಹೊಸಕೋಟೆ
ರಾಷ್ಟ್ರೀಯ ಹೆದ್ದಾರಿ-648ಯಿಂದ ಏನೆಲ್ಲಾ ಪ್ರಯೋಜನ?
* ದಾಬಸ್ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸರ್ಜಾಪುರ, ಹೊಸೂರು ಮಾರ್ಗಗಳಿಗೆ ಸಂಪರ್ಕ ಕಲ್ಪಿಸುತ್ತದೆ.
* ಬೆಂಗಳೂರು ಉತ್ತರ ಭಾಗ, ಕೈಗಾರಿಕಾ ಪ್ರದೇಶಗಳು, ವಿಮಾನ ನಿಲ್ದಾಣಕ್ಕೆ ಸುಲಭ ಪ್ರಯಾಣ.
* ಪ್ರಯಾಣ ಸಮಯ ಕಡಿಮೆಯಾಗಲಿದ್ದು, ಇದರಿಂದ ಸಂಚಾರಕ್ಕೆ ಸುಗಮ ಆಗುತ್ತದೆ.
* ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ
* ಉದ್ಯೋಗಾವಕಾಶಗಳ ಸೃಷ್ಟಿ
* ಪ್ರವಾಸೋದ್ಯಮ ಮತ್ತು ವ್ಯಾಪಾರ ಸುಗಮ
* ಸಂಚಾರ ದಟ್ಟಣೆ ನಿಯಂತ್ರಣ
* ಆಸ್ತಿ ಮೌಲ್ಯದಲ್ಲಿ ಗಣನೀಯ ಏರಿಕೆ
ದೊಡ್ಡಬಳ್ಳಾಪುರ ಕೈಗಾರಿಕಾ ವಲಯ, ಕೆಐಎಡಿಬಿ ಪ್ರದೇಶಗಳಿಗೆ ನೇರ ಸಂಪರ್ಕ ಕಲ್ಪಿಸಲಿದೆ. ಇದರಿಂದ ಸರಕು ಸಾಗಾಟ ಸುಗಮ ಆಗಲಿದ್ದು, ವೆಚ್ಚ ಕೂಡ ಕಡಿಮೆ ಆಗಲಿದೆ. ಹೊಸ ಉದ್ಯಮಗಳಿಗೆ ಹೂಡಿಕೆ ಮಾಡಲು ಹೆಚ್ಚು ಅನುಕೂಲ ಆಗುತ್ತದೆ. ಕೈಗಾರಿಕೆ, ಲಾಜಿಸ್ಟಿಕ್ಸ್, ಸಾರಿಗೆ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿ, ಅದರಲ್ಲೂ ಪ್ರಮುಖವಾಗಿ ಸ್ಥಳೀಯ ಯುವಕರಿಗೆ ಉದ್ಯೋಗ ಸಿಕ್ಕಂತಾಗಲಿದೆ. ಜೊತೆಗೆ ಹೆದ್ದಾರಿ ಹತ್ತಿರದ ಪ್ರದೇಶಗಳಲ್ಲಿ ಮನೆ, ಆಸ್ತಿಗಳ ಬೆಲೆ ಏರಿಕೆಯಾಗಿದ್ದು, ಇದರಿಂದ ಭೂ ಮಾಲೀಕರಿಗೆ ಬಂಪರ್ ಲಾಟರಿ ಸಿಕ್ಕಂತಾಗಿದೆ. ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಆಸ್ತಿ ಬೆಲೆ ಮತ್ತಷ್ಟು ಏರಿಕೆಯಾಗಲಿದ್ದು, ಮಾಲೀಕರು ಕೋಟ್ಯಾಧಿಪತಿಗಳಾಗುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಲಾಗುತ್ತಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications