ಎಲ್ಲ ಭಾರತೀಯ ಭಾಷೆಗಳಲ್ಲಿಯೂ ವೈದ್ಯಕೀಯ ವಿಜ್ಞಾನ ಕಲಿಕೆ
ಬೆಂಗಳೂರು, ಫೆ. 9: ವೈವಿಧ್ಯಮಯವಾದ ಭಾರತೀಯ ಭಾಷೆಗಳ ಸಂರಕ್ಷಣೆ ಮತ್ತು ಬೆಳವಣೆಗೆಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಬದ್ಧವಾಗಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದರು>
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನಲ್ಲಿ ಆಯೋಜಿಸಿರುವ ಎರಡು ದಿನಗಳ ''ಭಾಷಾ ಭಾರತ ಬಲಿಷ್ಠ ಭಾರತ'' ರಾಷ್ಟ್ರಮಟ್ಟದ ಭಾರತೀಯ ಭಾಷೆಗಳ ದುಂಡುಮೇಜಿನ ಪರಿಷತ್ತನ್ನು ದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಸಚಿವರು ಮಾತನಾಡಿದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾಷಾ ವೈವಿಧ್ಯತೆಯನ್ನು ಗೌರವಿಸುತ್ತದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ. ನೀಟ್ (NEET) ಜೆಇಇ (JEE) ಸೇರಿದಂತೆ ರಾಷ್ಟ್ರ ಮಟ್ಟದ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತಮ್ಮ ಮಾತೃಭಾಷೆಯಲ್ಲಿಯೇ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.

ಇತ್ತೀಚೆಗೆ ಮಂಡಿಸಲಾದ ಕೇಂದ್ರ ಬಜೆಟ್ ನಲ್ಲಿ ಭಾರತೀಯ ಭಾಷಾ ಅನುವಾದ ಯೋಜನೆಗಳಿಗಾಗಿ ಅನುದಾನ ಹಂಚಿಕೆ ಮಾಡಲಾಗಿದೆ. ವೈದ್ಯಕೀಯ ಸೇರಿದಂತೆ ವಿಜ್ಞಾನ ಸಂಬಂಧಿತ ವಿಷಯಗಳು ಎಲ್ಲ ಭಾರತೀಯ ಭಾಷೆಗಳಲ್ಲೂ ದೊರೆಯುವಂತೆ ಮಾಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸಚಿವರು ತಿಳಿಸಿದರು.
ಭಾರತವು ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ಬಹುಭಾಷೆ, ಬಹುಸಂಸ್ಕೃತಿಯ ಸಮ್ಮಿಲನವಿರುವ ರಾಷ್ಟ್ರ ನಮ್ಮದು. ಪ್ರತಿಯೊಂದು ಭಾಷೆಗೂ ಅದರದ್ದೇ ಆದ ಸೊಗಡು ಇದೆ. ಪ್ರತಿಯೊಂದು ರಾಜ್ಯಕ್ಕೂ ಅದರದ್ದೇ ಆದ ವೈಶಿಷ್ಟವಿದೆ. ಸರ್ಕಾರಗಳ ಆಡಳಿತವು ಆಯಾ ಭಾಷೆಯಲ್ಲಿಯೇ ಇದ್ದರೆ ಸ್ಥಳೀಯರಿಗೆ ಅನುಕೂಲವಾಗುತ್ತದೆ. 1956ರಲ್ಲಿ ಭಾಷಾಧಾರಿತ ರಾಜ್ಯಗಳ ಪುನರ್ವಿಂಗಡಣೆ ಮಾಡಿದ್ದು ಸಹ ಇದೇ ಉದ್ದೇಶದಿಂದ ಎಂದು ಅವರು ಹೇಳಿದರು.

Recommended Video
ಭಾರತೀಯ ಭಾಷೆಗಳ ಮಧ್ಯೆ ಹೆಚ್ಚಿನ ಸಮನ್ವಯತೆ ಸಾಧಿಸಲು ಹಾಗೂ ಭಾರತೀಯರ ಮಾತೃಭಾಷೆಗಳ ಮಹತ್ವವನ್ನು ಹೆಚ್ಚಿಸುವ ಉದ್ದೇಶದಿಂದ ಈ ಸಮ್ಮೇಳನವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯವಾಗಿದೆ ಎಂದ ಸಚಿವರು ಇದಕ್ಕಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್ ನಾಗಾಭರಣ ಮತ್ತು ಅವರ ತಂಡಕ್ಕೆ ಅಭಿನಂದನೆ ತಿಳಿಸಿದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications