ಫೆ.26ರಂದು ವಿಜಯ್ ಪ್ರಕಾಶ್ ಸಂಗೀತ ಸಂಜೆ, ತಪ್ಪದೇ ಬನ್ನಿ
ನಿರಂತರಂ-2017- ರಾಷ್ಟ್ರೀಯ ಸಂಗೀತ ಮತ್ತು ನೃತ್ಯೋತ್ಸವದ ಅಂಗವಾಗಿ ಫೆಬ್ರವರಿ 26ರಂದು ಗಾಯಕ ವಿಜಯ್ ಪ್ರಕಾಶ್ ಅವರ ಸಂಗೀತಯಾನ ವಿಶಿಷ್ಟ ಕಾರ್ಯಕ್ರಮವನ್ನು ಚೌಡಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದೆ.
ಬೆಂಗಳೂರು, ಫೆಬ್ರವರಿ 21: ನಿರಂತರಂ-2017- ರಾಷ್ಟ್ರೀಯ ಸಂಗೀತ ಮತ್ತು ನೃತ್ಯೋತ್ಸವದ ಅಂಗವಾಗಿ ಫೆಬ್ರವರಿ 26ರಂದು ಗಾಯಕ ವಿಜಯ್ ಪ್ರಕಾಶ್ ಅವರ ಸಂಗೀತಯಾನ ವಿಶಿಷ್ಟ ಕಾರ್ಯಕ್ರಮವನ್ನು ಚೌಡಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದೆ.
ಈ ಸಂಗೀತ ಸಂಜೆಯಲ್ಲಿ ವಿಜಯ್ ಪ್ರಕಾಶ್ ಅವರು ಭಕ್ತಿಗೀತೆ, ಭಾವಗೀತೆ, ಜಾನಪದ, ಸಿನಿಮಾ ಸಂಗೀತದ ರಸಧಾರೆಯನ್ನು ಸಂಗೀತಾಸಕ್ತರಿಗೆ ಉಣ ಬಡಿಸಲಿದ್ದಾರೆ.

ವಿಜಯ್ ಪ್ರಕಾಶ್ ಅವರ ಕಾರ್ಯಕ್ರಮ ಸೇರಿದಂತೆ ದಿನಾಂಕ 24.02.2017 ರಿಂದ ದಿನಾಂಕ 26.02.2017 ರವರೆಗೆ ವೈಯ್ಯಾಲಿಕಾವಲ್ ಬಡಾವಣೆಯಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ವಿವಿಧ ಸಂಗೀತ ಕಾರ್ಯಕ್ರಮ ಆಯೋಜನೆಗೊಂಡಿದೆ.
24.02.2017 - 2017ನೇ ಇಸವಿಯು ಜಗದಾಚಾರ್ಯ ಶ್ರೀ ರಾಮಾನುಜಾಚಾರ್ಯರ ಸಹಸ್ರಮಾನ ವರ್ಷವಾದುದರಿಂದ ಅವರ ಜೀವನ ಮತ್ತು ಸಾಧನೆಗಳನ್ನು ಕುರಿತು 'ಶ್ರೀ ರಾಮಾನುಜ ವೈಭವಂ' ಎಂಬ ಸಂಗೀತ - ನೃತ್ಯ - ನಾಟಕವನ್ನು ಏರ್ಪಡಿಸಲಾಗಿದೆ. ಈ ನಾಟಕದಲ್ಲಿ 35 ಕಲಾವಿದರುಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರವೇಶ ಉಚಿತ.
25.02.2017 - ಪ್ರಖ್ಯಾತ ವೀಣಾ ವಿದ್ವಾಂಸರಾದ ಚೆನ್ನೈನ ರಾಜೇಶ್ ವೈದ್ಯ ರವರು ನಾಲ್ಕು ಪ್ರಖ್ಯಾತ ಸಹ ಕಲಾವಿದರುಗಳೊಂದಿಗೆ 'ಸಂಗೀತ ಸಂಜೆ' ಕಾರ್ಯಕ್ರಮವನ್ನು ನೀಡಲಿದ್ದಾರೆ. ಈ ಕಾರ್ಯಕ್ರಮದ ಪ್ರವೇಶ ದರ ರೂ.300/-

26.02.2017 - ನಾಡಿನ ಹೆಸರಾಂತ ಹಿನ್ನೆಲೆ ಗಾಯಕರಾದ ವಿಜಯ್ ಪ್ರಕಾಶ್ ಮತ್ತು ಸಂಗಡಿಗರಿಂದ ಭಕ್ತಿ ಗೀತೆ, ಸುಗಮಸಂಗೀತ ಮತ್ತು ಚಿತ್ರಗೀತೆಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಪ್ರವೇಶ ದರ ರೂ.800/- ರೂ.500/- ಮತ್ತು ರೂ.300/-
ದಿನಾಂಕ 25.02.2017 ಮತ್ತು ದಿನಾಂಕ 26.02.2017ರ ಕಾರ್ಯಕ್ರಮಗಳ ಟಿಕೆಟ್ಗಳನ್ನು ಮೊಬೈಲ್ ಸಂಖ್ಯೆ +91 80959 04455 ಮತ್ತು 07407 65292 ಮತ್ತು 'ಟಾಕ್ ಆಫ್ ದಿ ಟೌನ್' ಜಾಲವನ್ನು ಸಂಪರ್ಕಿಸಬಹುದಾಗಿದೆ.
ವಿದುಷಿ ಟಿ.ರಮಾ ಅವರ ನಿರಂತರಂ ಸಂಸ್ಥೆ ಬಗ್ಗೆ ವಿಜಯ್ ಪ್ರಕಾಶ್ ಅವರ ಮಾತುಗಳು:
(ಒನ್ಇಂಡಿಯಾ ಸುದ್ದಿ)
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications