ಬೆಂಗಳೂರಿನಲ್ಲಿ ಏ.8ರಿಂದ 18ರವರೆಗೆ ರಾಷ್ಟ್ರೀಯ 'ಸಂಜೀವಿನಿ ಸರಸ್' ಮೇಳ
ಬೆಂಗಳೂರು, ಏಪ್ರಿಲ್ 7: ಮಹಿಳೆಯರ ಆರ್ಥಿಕ ಸಬಲೀಕರಣದ ಆಶಯವನ್ನುಳ್ಳ ರಾಷ್ಟ್ರೀಯ 'ಸಂಜೀವಿನಿ ಸರಸ್ ಮೇಳ'ವು ಏ.8ರಿಂದ 18ರವರೆಗೆ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯಲಿದೆ.
ಸಂಜೀವಿನಿ ಸರಸ್ ಮೇಳವನ್ನು ಏ.8ರಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಳದಲ್ಲಿ ಮಹಿಳಾ ಸ್ವಸಹಾಯ ಸಂಘಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಇರಲಿದ್ದು, 300ಕ್ಕೂ ಹೆಚ್ಚು ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ, ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಗಳ ಸಂಯುಕ್ತ ಆಶ್ರಯದಲ್ಲಿ 'ಸಂಜೀವಿನಿ ಸರಸ್' ಮೇಳ ನಡೆಯುತ್ತಿದ್ದು, ಇದರಲ್ಲಿ ಅಖಿಲ ಭಾರತ ಮಟ್ಟದ ಉತ್ಪನ್ನಗಳು ಗ್ರಾಹಕರಿಗೆ ಸಿಗಲಿವೆ. ರಾಷ್ಟ್ರೀಯ ಗ್ರಾಮೀಣ ಮತ್ತು ನಗರ ಜೀವನೋಪಾಯ ಅಭಿಯಾನದಡಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು. ಇದೇ ಸಂದರ್ಭದಲ್ಲಿ ಅವರು ಮೇಳದ ಲಾಂಛನವನ್ನು ಅನಾವರಣಗೊಳಿಸಿದರು.
ಮುಖ್ಯವಾಗಿ ಈ ಮೇಳದಲ್ಲಿ ಕೈಮಗ್ಗದ ಉತ್ಪನ್ನಗಳು, ಕರಕುಶಲ ವಸ್ತುಗಳು, ಬುಡಕಟ್ಟು ಮತ್ತು ಸಾವಯವ ಉತ್ಪನ್ನಗಳು, ಅಲಂಕಾರಿಕ ವಸ್ತುಗಳು, ಮಣ್ಣಿನಿಂದ ತಯಾರಿಸಿದ ಪಾತ್ರೆಗಳು, ಮರದಿಂದ ಮಾಡಿದ ವಸ್ತುಗಳು, ಬಿದಿರು ಮತ್ತು ಸೆಣಬಿನ ವಸ್ತುಗಳು, ಸಾಂಬಾರ ಪದಾರ್ಥಗಳು, ಸಾಂಪ್ರದಾಯಿಕ ವಸ್ತ್ರಗಳು, ಕಲಾಕೃತಿಗಳು, ವರ್ಣಚಿತ್ರಗಳು, ಟೆರ್ರಾಕೋಟ ಮತ್ತು ಪಾರಂಪರಿಕ ಉತ್ಪನ್ನಗಳು ಹಾಗೂ ಸಂಸ್ಕರಿತ ಆಹಾರ ಪದಾರ್ಥಗಳು ಮುಂತಾದವು ಸಿಗಲಿವೆ ಎಂದು ಸಚಿವರು ಮಾಹಿತಿ ನೀಡಿದರು.

ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ಇಲ್ಲಿ ತಮ್ಮ ಕೌಶಲಗಳನ್ನು ಪ್ರದರ್ಶಿಸುವ ಜತೆಗೆ ಗ್ರಾಹಕರೊಂದಿಗೆ ನೇರ ಸಂವಾದ ಮಾಡಬಹುದು. ಅಲ್ಲದೆ, ಉದ್ಯಮಶೀಲತೆಯನ್ನು ಉತ್ತೇಜಿಸುವ ಗುರಿಯೊಂದಿಗೆ ತರಬೇತಿ, ಕಾರ್ಯಾಗಾರ, ವಿಚಾರ ಸಂಕಿರಣ, ಕಾರ್ಪೊರೇಟ್ ಪ್ರಮುಖರ ಮಾತುಕತೆ ಸಿಎಸ್ಆರ್ ದುಂಡು ಮೇಜಿನ ಸಭೆಗಳು ಮತ್ತು ನವೋದ್ಯಮ ಹಾಗೂ ಎನ್ಜಿಒ ಅಧಿವೇಶನಗಳನ್ನು ಕೂಡ ಏರ್ಪಡಿಸಲಾಗಿದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.
ಉದ್ಯಮಶೀಲ ಮಹಿಳೆಯರಿಗೆ ಸರಕಾರದ ನಾನಾ ಇಲಾಖೆಗಳು ಮತ್ತು ಬ್ಯಾಂಕುಗಳು ವಿವಿಧ ಸಾಲ ಸೌಲಭ್ಯ ಹಾಗೂ ಸೇವಾ ಉಪಕ್ರಮಗಳನ್ನು ಹೊಂದಿವೆ. ಮೇಳದಲ್ಲಿ ಈ ಬಗ್ಗೆಯೂ ಮಾಹಿತಿ ಒದಗಿಸುವ ಏರ್ಪಾಡು ಕೂಡ ಮಾಡಲಾಗಿದೆ ಎಂದು ಕೌಶಲಾಭಿವೃದ್ಧಿ ಸಚಿವರು ಮಾಹಿತಿ ನೀಡಿದರು.
ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕಿ ಮಂಜುಶ್ರೀ, ಜಂಟಿ ನಿರ್ದೇಶಕಿ ಸ್ವರೂಪಾ, ಉಪ ನಿರ್ದೇಶಕಿ ನಯನಾ ಮತ್ತಿತರರು ಇದ್ದರು.
Recommended Video

-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ











Click it and Unblock the Notifications