ಪರಿಸರ ಸಂರಕ್ಷಣೆಗೆ ಬೆಂಗಳೂರಲ್ಲಿ ಸೈಕಲ್ ಜಾಥಾ
ಬೆಂಗಳೂರು, ಡಿ. 14: 'ವಿಶ್ವ ಶಕ್ತಿ ಸಂರಕ್ಷಣಾ ದಿನಾಚರಣೆ' ಅಂಗವಾಗಿ ಅಸಿಸ್ಟ್ಹೆಲ್ಪ್ಸ್ ಪ್ರತಿಷ್ಠಾನ ನಗರದಲ್ಲಿ ಭಾನುವಾರ ಸೈಕಲ್ ಜಾಥಾ ಆಯೋಜಿಸಿತ್ತು. ಸುಮಾರು 2000 ಕ್ಕೂ ಹೆಚ್ಚು ಶಾಲಾ ಮಕ್ಕಳು ಈ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿದದ್ದರು.
ಖಾಲಿಯಾಗುವ ಶಕ್ತಿ ಮೂಲಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದು, ನವೀಕರಣಗೊಳಿಸಬಲ್ಲ ಇಂಧನ ಶಕ್ತಿ ಬಳಕೆ ಒತ್ತು ನೀಡುವುದು ಮತ್ತು ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವುದು ಸೈಕಲ್ ಜಾಥಾದ ಉದ್ದೇಶವಾಗಿತ್ತು.[ಪಾಲಿಥಿನ್ ಬ್ಯಾಗ್ ನಿಷೇಧ : ಉಡುಪಿ ಮಾದರಿ]

ಜೀವಿಕ ಆಸ್ಪತ್ರೆ ಮತ್ತು ರೆಡ್ಡಿ ಆಸ್ಪತ್ರೆ ಮುಖ್ಯಸ್ಥರಾದ ಡಾ. ಅಶೋಕ್ ರೆಡ್ಡಿ, ಚಲನಚಿತ್ರ ನಟರಾದ ಸುಚೇಂದ್ರ ಪ್ರಸಾದ್, ನಟಿ ದೀಪಿಕಾ ದಾಸ್ ಮತ್ತು ಆಶಿನಿ ಶೆಟ್ಟಿ ಭಾಗವಹಿಸಿದ್ದರು. ಆರ್ ಜೆ ವಿನಾಯಕ್ ಜೋಷಿ, ಲವ್ ಗುರು ರಾಜೇಶ್ ಸಾಥ್ಮ ಅಂತಾರಾಷ್ಟ್ರೀಯ ಕ್ರೀಡಾಪಟು ಅರ್ಜುನ್ ದೇವಯ್ಯ ಹಾಜರಿದ್ದರು.
ಸೈಕಲ್ ಜಾಥಾದಲ್ಲಿ 17 ವರ್ಷದೊಳಗಿನ ಮಕ್ಕಳು ಮತ್ತು ಯುವಕರು ಭಾಗವಹಿಸಿದರು. ಅಸಿಸ್ಟ್ಹೆಲ್ಪ್ ಪ್ರತಿಷ್ಠಾನ ಮತ್ತು ಕ್ವಿಟಿಲ್ಸ್ ಇಂಡಿಯಾ ಆಯೋಜಿಸಿದ್ದ ಈ ಜಾಥಾ 5 ಕಿಮೀ ದೂರ ಸಾಗಿತು.[ಬಾಲ ಕಾರ್ಮಿಕರ ಉಳಿಸಲು ಇ ಪತ್ರಿಕೆ]

ಎನ್ಜಿಓ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿರುವ ಅಸಿಸ್ಟ್ಹೆಲ್ಪ್ ಪ್ರತಿಷ್ಟಾನ ಒಂದು 'ಪ್ರತಿಯೊಬ್ಬರು ಪ್ರತಿಯೊಬ್ಬರಿಗಾಗಿ' ಎಂಬ ಧ್ಯೇಯ ಇಟ್ಟುಕೊಂಡು ಕೆಲಸಮಾಡುತ್ತಿದೆ. ಆರೋಗ್ಯ, ಪರಿಸರ, ವಿದ್ಯಾಭ್ಯಾಸ ಮತ್ತು ಬಡತನದ ಬಗ್ಗೆ ಜಾಗೃತಿ ಮತ್ತು ನಿರ್ಮೂಲನೆಗೆ ಪ್ರಯತ್ನಪಡುತ್ತಿದೆ.

-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ












Click it and Unblock the Notifications