ಕನ್ನಡ ನೆಲ-ಜಲ, ನಾಳಿನ ಅರಿವು ಕುರಿತು ಒಂದು ವಿಚಾರ ಮಂಥನ
ಬೆಂಗಳೂರು, ಜು.16: ನವಕರ್ನಾಟಕ ಪ್ರಕಾಶನ ಹಾಗೂ ಇ-ಜ್ಞಾನ ಟ್ರಸ್ಟ್ ಸಹಯೋಗದಲ್ಲಿ ಕನ್ನಡ ನೆಲ-ಜಲ: ನಾಳಿನ ಅರಿವು ವಿಷಯ ಕುರಿತು ವಿಚಾರ ಸಂಕಿರಣ ಜುಲೈ 29ರಂದು ಬೆಳಗ್ಗೆ 10ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ನಡೆಯಲಿದೆ.
'ಕಲಿಕೆಗೆ ಕೊಡುಗೆ' ಯೋಜನೆಯಡಿ ಶಾಲೆಗಳಿಗೆ ಪುಸ್ತಕ ವಿತರಣೆ ಕೂಡ ಇದೇ ವೇಳೆ ಹಮ್ಮಿಕೊಳ್ಳಲಾಗಿದೆ. ಡಾ.ಎಚ್.ಆರ್.ಅಪ್ಪಣ್ಣಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಟಿ.ಎಸ್.ಗೋಪಾಲ್ ಅವರ 'ಜ್ಞಾನ ಪೀಠಕೆ ಮೆರಗು- ಕನ್ನಡದ ಬೆಡಗು' ಹಾಗೂ ಮತ್ತಿತರ ಪುಸ್ತಕಗಳನ್ನು ಡಾ.ಪದ್ಮಶೇಖರ್ ಅನಾವರಣಗೊಳಿಸುವರು.

ಕೆ.ಎಸ್.ನವೀನ್ ಕೃತಿಗಳನ್ನು ಪರಿಚಯಿಸುವರು. ಕನ್ನಡ ನೆಲ-ಜಲ: ನಾಳಿನ ಅರಿವು ವಿಷಯ ಕುರಿತು ಎಚ್.ಎನ್.ಎ.ಪ್ರಸಾದ್, ವೈ.ಬಿ.ರಾಮಕೃಷ್ಣ ಹಾಗೂ ಡಾ.ನಾ.ಸೋಮೇಶ್ವರ ಮಾತನಾಡುವರು. ಭಾರತೀ ಪ್ರಕಾಶನ, ಸಹಬಾಳ್ವೆ ಹಾಗೂ ಹೆಮ್ಮರ ಪ್ರಕಾಶನಗಳು ಕಾರ್ಯಕ್ರಮಕ್ಕೆ ಸಹಯೋಗ ನೀಡಲಿವೆ ಎಂದು ತಿಳಿಸಿದೆ.ಇಜ್ಞಾನ ಟ್ರಸ್ಟ್ ಕುರಿತು
ಇಜ್ಞಾನ ಟ್ರಸ್ಟ್ ಒಂದು ನೋಂದಾಯಿತ ಸ್ವಯಂಸೇವಾ ಸಂಸ್ಥೆಯಾಗಿದ್ದು ವಿಜ್ಞಾನ, ತಂತ್ರಜ್ಞಾನ, ಕನ್ನಡ ಹಾಗೂ ಸಂಸ್ಕೃತಿ ಕುರಿತ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ಈ ಸಂಸ್ಥೆಯನ್ನು ಆಗಸ್ಟ್ 3, 2016ರಂದು ಬೆಂಗಳೂರಿನಲ್ಲಿ ಅಧಿಕೃತವಾಗಿ ನೋಂದಾಯಿಸಲಾಯಿತು. ಸಾಮಾನ್ಯ ಜನರ ನಡುವೆ ವಿಜ್ಞಾನ-ತಂತ್ರಜ್ಞಾನಗಳನ್ನು ಜನಪ್ರಿಯಗೊಳಿಸುವುದು ಹಾಗೂ ಕನ್ನಡ ಭಾಷೆ - ಸಂಸ್ಕೃತಿಯ ಬೆಳವಣಿಗೆಗಾಗಿ ಶ್ರಮಿಸುವುದು ಇಜ್ಞಾನ ಟ್ರಸ್ಟ್ನ ಧ್ಯೇಯ.
ಕನ್ನಡದ ಪ್ರಮುಖ ವಿಜ್ಞಾನ-ತಂತ್ರಜ್ಞಾನ ಜಾಲತಾಣವಾದ ಇಜ್ಞಾನ ಡಾಟ್ ಕಾಮ್ ಅನ್ನು ಟಿ. ಜಿ. ಶ್ರೀನಿಧಿಯವರ ಸಂಪಾದಕತ್ವದಲ್ಲಿ ಇಜ್ಞಾನ ಟ್ರಸ್ಟ್ ನಿರ್ವಹಿಸುತ್ತಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೆರವಿನೊಡನೆ ಕಳೆದ ವರ್ಷ (2017) 'ಕಂಪ್ಯೂಟರ್-ತಂತ್ರಜ್ಞಾನ ಪದವಿವರಣ ಕೋಶ'ವನ್ನು - ಪುಸ್ತಕ ಹಾಗೂ ಆನ್ಲೈನ್ ಎರಡೂ ರೂಪಗಳಲ್ಲಿ - ಪ್ರಕಟಿಸಿದ್ದು ಇಜ್ಞಾನ ಟ್ರಸ್ಟ್ನ ಮಹತ್ವದ ಸಾಧನೆಗಳಲ್ಲೊಂದು. ವಿದ್ಯಾರ್ಥಿಗಳಿಗೆ 'ಮಾಹಿತಿ ತಂತ್ರಜ್ಞಾನ ಹಾಗೂ ಕನ್ನಡ' ಕುರಿತ ಕಾರ್ಯಾಗಾರಗಳನ್ನು ಆಯೋಜಿಸುವಲ್ಲೂ ಇಜ್ಞಾನ ಟ್ರಸ್ಟ್ ಸಕ್ರಿಯವಾಗಿದೆ. ಸುರಾನಾ ಕಾಲೇಜಿನ ಸಹಯೋಗದಲ್ಲಿ ಇದೇ ವಿಷಯ ಕುರಿತ 'ನುಡಿಯ ನಾಳೆಗಳು' ಎಂಬ ಪುಸ್ತಕವನ್ನೂ ಹೊರತರಲಾಗಿದೆ.
-
ಕರ್ನಾಟಕದ 60 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: 324 ಗ್ರಾಮಗಳಿಗೆ ಟ್ಯಾಂಕರ್, ಬೋರ್ವೆಲ್ ವ್ಯವಸ್ಥೆ: ಪ್ರಿಯಾಂಕ್ ಖರ್ಗೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
ಬೆಳಿಗ್ಗೆ ನಿಂಬೆ ಹಣ್ಣಿನ ರಸ ಕುಡಿಯುತ್ತಿದ್ದೀರಾ? ಲಾಭಗಳ ಜೊತೆ ಈ ಅಪಾಯಗಳೂ ಇವೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ












Click it and Unblock the Notifications