ಡಿಜೆ ಹಳ್ಳಿ ಗಲಭೆಗೆ ನವೀನ್ ಫೇಸ್ಬುಕ್ ಪೋಸ್ಟ್ ಕಾರಣವಲ್ಲ: ಸಚಿವ ಅರವಿಂದ್ ಲಿಂಬಾವಳಿ!
ಬೆಂಗಳೂರು, ಫೆ. 25: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಬೆಂಗಳೂರಿನ ಡಿ.ಜೆ. ಹಳ್ಳಿ ಗಲಭೆ ಪ್ರಕರಣಕ್ಕೆ ನವೀನ್ ಹಾಕಿದ್ದ ಫೇಸ್ಬುಕ್ ಕಮೆಂಟ್ ಕಾರಣವಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ್ ಲಿಂಬಾವಳಿ ಅವರು ಹೇಳಿದ್ದಾರೆ. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿರುವ ಅವರು, ನವೀನ್ ಫೇಸ್ಬುಕ್ನಲ್ಲಿ ಕಮೆಂಟ್ ಹಾಕುವ ಮೊದಲೇ ಕೃಷ್ಣಜನ್ಮಾಷ್ಟಮಿಯಂದು ಹಿಂದೂ ಧರ್ಮ ಮತ್ತು ದೇವತೆಗಳನ್ನು ಅವಹೇಳನ ಮಾಡಿ ಫೈರೋಜ್ ಪಾಷ ಎಂಬ ಎಸ್ಡಿಪಿಐ ಕಾರ್ಯಕರ್ತ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಎಂದು ಅರವಿಂದ್ ಲಿಂಬಾವಳಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಎಸ್ಡಿಪಿಐ ಕಾರ್ಯಕರ್ತ ಫೈರೋಜ್ ಪಾಷ ಮಾಡಿದ್ದ ಫೇಸ್ಬುಕ್ ಪೋಸ್ಟ್ಗೆ ನವೀನ್ ಕೇವಲ ಕಮೆಂಟ್ ಮೂಲಕ ತನ್ನ ಪ್ರತಿಕ್ರಿಯೆ ಹಾಕಿದ್ದ. ಅದನ್ನೇ ಆಧಾರವಾಗಿಟ್ಟುಕೊಂಡು ಜನರನ್ನು ಉದ್ರಿಕ್ತಗೊಳಿಸಿ ಗಲಭೆ ಮಾಡಿಸಲಾಗಿದೆ. ಇದನ್ನೇ ನಾವು ಬಿಜೆಪಿಯಿಂದ ನೇಮಕವಾಗಿದ್ದ ಸತ್ಯಶೋಧನಾ ವರದಿಯಲ್ಲಿ ಉಲ್ಲೇಖಿಸಿದ್ದೆವು. ನಮ್ಮ ವರದಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊಟ್ಟಿದ್ದೇವು. ಈಗ ರಾಷ್ಟ್ರೀಯ ತನಿಖಾ ಸಂಸ್ಥೆ ಸಲ್ಲಿಸಿರುವ ಚಾರ್ಜ್ಶೀಟ್ನಲ್ಲೂ ಇವೆ ಅಂಶಗಳನ್ನೇ ಪ್ರಸ್ತಾಪಿಸಿದ್ದಾರೆ. ಹೀಗಾಗಿ ಎಸ್ಡಿಪಿಐ, ಪಿಎಫ್ಐ ಸಂಘಟನೆಗಳನ್ನು ನಿಷೇಧ ಮಾಡುವಂತೆಯೂ ನಮ್ಮ ವರದಿಯಲ್ಲಿ ಶಿಫಾರಸು ಮಾಡಿದ್ದೆವು ಎಂದು ಅರವಿಂದ್ ಲಿಂಬಾವಳಿ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಘಟನೆಯ ವಿವರ: 2020ರ ಆ.11ರಂದು ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆಯಲ್ಲಿ ಪುಲಿಕೇಶಿನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಅವರ ಅಳಿಯ ನವೀನ್ ಮನೆ, ಪೊಲೀಸ್ ಮತ್ತು ಖಾಸಗಿ ವಾಹನಗಳು ಸೇರಿ ಹಲವು ವಾಹನಗಳು, ಮನೆಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿತ್ತು. ದುಷ್ಕರ್ಮಿಗಳು ನಡೆಸಿದ ಕಲ್ಲು ತೂರಾಟದಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದರು. ಗಲಭೆ ನಿಯಂತ್ರಿಸಲು ಪೊಲೀಸರು ಹಾರಿಸಿದ ಗುಂಡಿಗೆ ನಾಲ್ವರು ಬಲಿಯಾಗಿದ್ದರು.

Recommended Video
ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸಿಸಿರುವ ಎನ್ಐಎ ಬಾಬ್ರಿ ಮಸೀದಿ ಕುರಿತು ಸುಪ್ರೀಂ ತೀರ್ಪು, ಸಿಎಎ, ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ತ್ರಿವಳಿ ತಲಾಕ್ ರದ್ದು ವಿಚಾರವಾಗಿ ಕೇಂದ್ರ ಸರಕಾರದ ವಿರುದ್ಧ ಹಿಂದೂ ಸಮುದಾಯವನ್ನು ಕೆರಳಿಸಲು ಎಸ್ಡಿಪಿಐ ಮತ್ತು ಪಿಎಫ್ಐನ ಮುಖಂಡರು ಸಂಚು ನಡೆಸಿದ್ದರು. ಆ ಸಂಚಿನ ಹಿನ್ನೆಲೆಯಲ್ಲಿ ಡಿ.ಜೆ ಹಳ್ಳಿ ಗಲಭೆಯಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ತಿಳಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications