ಬೆಂಗಳೂರಿನಲ್ಲಿ ನಡೆದ ಹತ್ಯೆಗೆ ಸಕಲೇಶಪುರದ ನಂಟು?
ಬೆಂಗಳೂರು, ನವೆಂಬರ್ 20 : ನಾಯಂಡಹಳ್ಳಿ ವಾರ್ಡ್ ಮಾಜಿ ಕಾರ್ಪೊರೇಟರ್ ರಾಜೇಶ್ವರಿ ಅವರ ಪತಿ ಉಮೇಶ್ ಬೆಳಗೋಡ್ ಅವರನ್ನು ಗುರುವಾರ ರಾತ್ರಿ ಹತ್ಯೆ ಮಾಡಲಾಗಿದೆ. ಉಮೇಶ್ ಅವರನ್ನು ಸಕಲೇಶಪುರ ಮೂಲದವರು ಕೊಲೆ ಮಾಡಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ಶಂಕಿಸಲಾಗಿದೆ.
ಬಿಎಚ್ಇಎಲ್ ಉದ್ಯೋಗಿಯಾಗಿದ್ದ ಉಮೇಶ್ ಅವರು ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕೀಯ ಮತ್ತು ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಉಂಟಾದ ವೈಷಮ್ಯ ಕೊಲೆಗೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದು, ತನಿಖೆ ಮುಂದುವರೆದಿದೆ. [ಬೆಂಗಳೂರು ಎಟಿಎಂ ದಾಳಿಗೆ 2 ವರ್ಷ]

ಗುರುವಾರ ರಾತ್ರಿ ಹತ್ಯೆ ನಡೆದಿತ್ತು : ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಾಟಾ ಶೋ ರೂಂ ಬಳಿ ಗುರುವಾರ ಉಮೇಶ್ ಬೆಳಗೋಡ್ ಅವರ ಹತ್ಯೆ ನಡೆದಿತ್ತು. ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ಮೂರು ವಿಶೇಷ ತಂಡಗಳನ್ನು ರಚನೆ ಮಾಡಿದ್ದಾರೆ. [ಛೋಟಾ ಶಕಿಲ್ ಸಹಚರನ ಬಂಧನ]
ನವೆಂಬರ್ 19ರ ಗುರುವಾರ ಉಮೇಶ್ ಅವರ ಪತ್ನಿ ರಾಜೇಶ್ವರಿ ಅವರ ಹುಟ್ಟುಹಬ್ಬ. ರಾತ್ರಿ ಮನೆಗೆ ತೆರಳುತ್ತಿದ್ದಾಗ ಉಮೇಶ್ ಅವರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಚ್ಚು ಬೀಸಿದ್ದರು. ತಕ್ಷಣ ಕಾರಿನಿಂದ ಇಳಿದು ಪರಾರಿಯಾಗಲು ಯತ್ನಿಸಿದ ಅವರನ್ನು ಅಟ್ಟಾಡಿಸಿಕೊಂಡು ಹೋದ ಹಂತಕರು ನಡುರಸ್ತೆಯಲ್ಲಿ ಕೊಚ್ಚಿ ಪರಾರಿಯಾಗಿದ್ದರು.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ











Click it and Unblock the Notifications